AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಪಂಜುರ್ಲಿಯಂತೆ ವೇಷ ಧರಿಸಿ ಚಿತ್ರಮಂದಿರಕ್ಕೆ ನುಗ್ಗಿದ ವ್ಯಕ್ತಿ

Kantara Chapter 1 movie: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದೇಶದಾದ್ಯಂತ ಬಿಡುಗಡೆ ಆಗಿದೆ. ಆದರೆ ಸಿನಿಮಾ ನೋಡಿದ ಕೆಲವರು ದೆವ್ವ ಮೈಗೆ ಬಂದವರಂತೆ ಹುಚ್ಚರಂತೆ ಆಡಿರುವ ಘಟನೆಗಳು ಕೆಲವೆಡೆ ನಡೆದಿವೆ. ಇದೀಗ ತಮಿಳುನಾಡಿನ ಚಿತ್ರಮಂದಿರ ಒಂದರಲ್ಲಿ ವ್ಯಕ್ತಿಯೊಬ್ಬ ಪಂಜುರ್ಲಿ ವೇಷ ತೊಟ್ಟು ಎಂಟ್ರಿ ಕೊಟ್ಟಿದ್ದಾನೆ. ವಿಡಿಯೋ ವೈರಲ್ ಆಗಿದೆ.

ತಮಿಳುನಾಡು: ಪಂಜುರ್ಲಿಯಂತೆ ವೇಷ ಧರಿಸಿ ಚಿತ್ರಮಂದಿರಕ್ಕೆ ನುಗ್ಗಿದ ವ್ಯಕ್ತಿ
Kantara
ಮಂಜುನಾಥ ಸಿ.
|

Updated on:Oct 05, 2025 | 4:07 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಬಿಡುಗಡೆ ಆಗಿ ಈಗಾಗಲೇ ಮೂರು ದಿನಗಳಾಗಿವೆ. ಸಿನಿಮಾ, ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಪ್ರದರ್ಶನ ಮಾಡುತ್ತಿದೆ. ಸಿನಿಮಾಕ್ಕೆ ಕರ್ನಾಟಕದಲ್ಲಿ ಮಾತ್ರವೇ ಅಲ್ಲದೆ ತೆಲುಗು ರಾಜ್ಯಗಳು, ತಮಿಳುನಾಡು, ಕೇರಳ ಹಾಗೂ ಉತ್ತರ ಭಾರತ ಪ್ರದೇಶಗಳಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ. ಸಿನಿಮಾ ನೋಡಿ ಹೊರಬಂದ ಕೆಲವರಂತೂ ಶರ್ಟ್ ಕಿತ್ತುಹಾಕಿ ಭಾವಪರವಶರಾಗಿ ರಿಷಬ್ ಅವರನ್ನು ಹೊಗಳಿದ ಘಟನೆಗಳು ನಡೆದಿವೆ. ಬೆಂಗಳೂರಿನ ಚಿತ್ರಮಂದಿರದ ಹೊರಗೆ ಒಬ್ಬ ವ್ಯಕ್ತಿ ದೇವರು ಬಂದ ಹಾಗೆ ಆಡಿ ಹುಚ್ಚಾಟ ತೋರಿದ್ದ, ಈಗ ದೂರದ ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ ಪಂಜುರ್ಲಿಯಂತೆ ವೇಷ ಧರಿಸಿ ಚಿತ್ರಮಂದಿರದ ಒಳಗೆ ನುಗ್ಗಿದ್ದಾನೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಕರ್ನಾಟಕದ ಜೊತೆಗೆ ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ತಮಿಳುನಾಡಿನಲ್ಲಂತೂ ಸಿನಿಮಾ ಅನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದಾರೆ. 2022 ರಲ್ಲಿ ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾಕ್ಕೂ ಸಹ ತಮಿಳುನಾಡಿನ ಪ್ರೇಕ್ಷಕರು ಇದೇ ರೀತಿ ಪ್ರೀತಿ ತೋರಿಸಿದ್ದರು. ಈಗಂತೂ ವ್ಯಕ್ತಿಯೊಬ್ಬ ಪಂಜುರ್ಲಿಯಂತೆ ವೇಷ ಧರಿಸಿ, ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರಕ್ಕೆ ನುಗ್ಗಿದ್ದಾನೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ತಮಿಳುನಾಡಿನ ದಿಂಡಿಗಲ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಒಳಕ್ಕೆ ವ್ಯಕ್ತಿಯೊಬ್ಬ ಪಂಜುರ್ಲಿಯಂತೆ ವೇಷ ಧರಿಸಿ ನುಗ್ಗಿದ್ದಾನೆ. ಸಿನಿಮಾ ಪ್ರದರ್ಶನ ಆಗುವ ಮುಂಚೆ ಈ ವ್ಯಕ್ತಿ ನುಗ್ಗಿದ್ದು ಪ್ರೇಕ್ಷಕರೆಲ್ಲ ವ್ಯಕ್ತಿಯ ಫೋಟೊ, ವಿಡಿಯೋ ಮಾಡಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ವಿಡಿಯೋ ನೋಡಿದರೆ ಚಿತ್ರಮಂದಿರದವರೇ ಆಯೋಜಿಸಿರುವ ‘ಶೋ’ ರೀತಿ ಅದು ಕಾಣುತ್ತಿದೆ. ಏಕೆಂದರೆ ವ್ಯಕ್ತಿ ಚಿತ್ರಮಂದಿರಕ್ಕೆ ಎಂಟ್ರಿ ನೀಡುತ್ತಿದ್ದಂತೆ ಚಿತ್ರಮಂದಿರದವರೇ ‘ಕಾಂತಾರ’ ಸಿನಿಮಾದ ಥೀಮ್ ಸಂಗೀತವನ್ನು ಹಾಕಿರುವುದು ವಿಡಿಯೋದಿಂದ ಗೊತ್ತಾಗುತ್ತಿದೆ.

ಇದನ್ನೂ ಓದಿ:‘ರಿಷಬ್ ಶೆಟ್ಟಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಬೇಕು’: ಕಾಂತಾರ ಪ್ರೇಕ್ಷಕರ ಭಾವುಕ ಮಾತು

ಈ ಹಿಂದೆ ‘ಕಾಂತಾರ’ ಸಿನಿಮಾ ಬಿಡುಗಡೆ ಆಗಿ ಹಿಟ್ ಆದ ಸಂದರ್ಭದಲ್ಲಿ ಟಿವಿ ಶೋಗಳಲ್ಲಿ, ಇನ್ನಿತರೆ ಕಡೆಗಳಲ್ಲಿ ಗುಳಿಗ ದೈವವನ್ನು, ಪಂಜುರ್ಲಿಯನ್ನು ಅನುಕರಣೆ ಮಾಡುವ ಟ್ರೆಂಡ್ ಶುರುವಾಗಿತ್ತು. ಆಗ ರಿಷಬ್ ಶೆಟ್ಟಿ, ಯಾರೂ ಸಹ ದೈವವನ್ನು ಅನುಕರಣೆ ಮಾಡಬಾರದು ಎಂದಿದ್ದರು. ಆದರೆ ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಅದೇ ಹುಚ್ಚಾಟ ಮತ್ತೆ ಶುರುವಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆ ಸಮಯದಲ್ಲಿ ಬೆಂಗಳೂರಿನ ಚಿತ್ರಮಂದಿರದ ಹೊರಗೆ ವ್ಯಕ್ತಿಯೊಬ್ಬ ದೇವರು ಬಂದಂತೆ ಆಡಿ ಹುಚ್ಚಾಟ ಮೆರೆದಿದ್ದ, ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡದಿದ್ದರೆ ಶಾಪ ನೀಡುವುದಾಗಿ ‘ಬೆದರಿಕೆ’ ಬೇರೆ ಹಾಕಿದ್ದ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Sun, 5 October 25

ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್