AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ದುರ್ಬಲ ಆರೋಪ ಪಟ್ಟಿ, ತನಿಖಾಧಿಕಾರಿಗಳ ವಿರುದ್ಧ ದೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ತನಿಖೆ ಮಾಡಿರುವ ರೀತಿಯ ಬಗ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಇಲ್ಲೊಬ್ಬ ಆಸಾಮಿ, ದರ್ಶನ್ ಮೇಲೆ ಉದ್ದೇಶಪೂರ್ವಕವಾಗಿ ದುರ್ಬಲ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸರ ವಿರುದ್ಧವೇ ದೂರು ನೀಡಿದ್ದಾನೆ.

ದರ್ಶನ್ ವಿರುದ್ಧ ದುರ್ಬಲ ಆರೋಪ ಪಟ್ಟಿ, ತನಿಖಾಧಿಕಾರಿಗಳ ವಿರುದ್ಧ ದೂರು
ದರ್ಶನ್​
ಮಂಜುನಾಥ ಸಿ.
|

Updated on:Sep 13, 2024 | 5:27 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿದೆ. ಪೊಲೀಸರು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿ 3991 ಪುಟಗಳ ಸುದೀರ್ಘ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರ ನಡುವೆ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯನ್ನೇ ಸರಿಯಿಲ್ಲವೆಂದು, ಉದ್ದೇಶಪೂರ್ವಕವಾಗಿ ದುರ್ಬಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ಆರೋಪಿಸಿ ಕೆಲವರು ತನಿಖಾಧಿಕಾರಿಗಳ ವಿರುದ್ಧವೇ ದೂರು ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆ, ನಿಷ್ಠೆಯನ್ನು ಕೊಂಡಾಡಲಾಗಿದೆ. ಆದರೆ ಇದೀಗ ವ್ಯಕ್ತಿಯೊಬ್ಬರು ದರ್ಶನ್ ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ದೂರು ಸಲ್ಲಿಸಿದ್ದಾರೆ.

ಆರೋಪ ಪಟ್ಟಿಯನ್ನು ದರ್ಶನ್​ಗೆ ಅನುಕೂಲಕರವಾಗಿ ತಯಾರಿಸಲಾಗಿದೆ ಎಂದು ಆರೋಪಿಸಿ ವೆಂಕಟಾಚಲಪತಿ ಎಂಬಾತ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾನೆ. ಕೊಲೆ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲಿ ಎಂಬ ಉದ್ದೇಶದಿಂದ ಸಾಕಷ್ಟು ಲೂಪ್ ಹೋಲ್​ಗಳಿರುವ, ದುರ್ಬಲವಾಗಿರುವ ಆರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ ಎಂದು ಆರೋಪಿಸಿ ತನಿಖಾಧಿಕಾರಿ ಎಸಿಪಿ ಚಂದನ್, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹಾಗೂ ಡಿಸಿಪಿ ಗಿರೀಶ್ ಅವರುಗಳ ವಿರುದ್ಧ ಲೋಕಾಯುಕ್ತರಿಗೆ ದೂರು ದಾಖಲಿಸಿದ್ದಾನೆ. ಈ ಮೂವರ ವಿರುದ್ಧ ಭ್ರಷ್ಟಾಚಾರದ ತನಿಖೆ ನಡೆಸಬೇಕೆಂದು ಆತ ಒತ್ತಾಯಿಸಿದ್ದಾನೆ.‘

ಇದನ್ನೂ ಓದಿ:‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್

ಪೊಲೀಸರು ಕಳೆದ ವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿರುವ ಕೆಲವು ಮುಖ್ಯವಾದ ಮಾಹಿತಿಗಳು ಮಾಧ್ಯಮಗಳ ಮೂಲಕ ಸಾರ್ವಜನಿಕಗೊಂಡಿವೆ. ದರ್ಶನ್, ಪಟ್ಟಣಗೆರೆ ಶೆಡ್​ ಬಿಟ್ಟು ತೆರಳಿದಾಗ ಕೊಲೆಯಾದ ರೇಣುಕಾ ಸ್ವಾಮಿ ಜೀವಂತ ಇದ್ದ ಎಂಬ ಅಂಶ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಈಗ ದೂರು ನೀಡಿರುವ ವೆಂಕಟಾಚಲಪತಿ ಅನುಮಾನ ವ್ಯಕ್ತಪಡಿಸಿದ್ದಾರೆ. ದರ್ಶನ್ ಅನ್ನು ಉಳಿಸಲೆಂದೇ ಹೀಗೆ ಆರೋಪ ಪಟ್ಟಿಯನ್ನು ತಿದ್ದಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಚಾರ್ಜ್ ಶೀಟ್​ನಲ್ಲಿರುವಂತೆ ಎಲ್ಲ ಆರೋಪಿಗಳು ತಮ್ಮ ಸ್ವ ಇಚ್ಛಾ ಹೇಳಿಕೆಯನ್ನು ದಾಖಲಿಸಿದ್ದಾರೆ. ಕೆಲವು ಆರೋಪಿಗಳ ಹೇಳಿಕೆಗಳನ್ನು ನ್ಯಾಯಾಧೀಶರ ಮುಂದೆ 164 ಸೆಕ್ಷನ್ ಅಡಿಯಲ್ಲಿ ದಾಖಲಿಸಲಾಗಿದೆ. ಪಟ್ಟಣಗೆರೆ ಶೆಡ್​​ನ ಸೆಕ್ಯುರಿಟಿ ಇನ್ನೂ ಕೆಲವರು ಸಾಕ್ಷ್ಯಗಳಾಗಿ ಹೇಳಿಕೆ ದಾಖಲಿಸಿದ್ದಾರೆ. ಹಲವು ಸಾಕ್ಷ್ಯಗಳನ್ನು, ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಒಟ್ಟಾರೆಯಾಗಿ ದರ್ಶನ್ ತಪ್ಪಿಸಿಕೊಳ್ಳುವುದು ಸುಲಭವಲ್ಲ ಎಂಬ ಮಾತುಗಳೇ ಕೇಳಿ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Fri, 13 September 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?