AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ತೆಲುಗು ಪ್ರೆಸ್​ಮೀಟ್​ನಲ್ಲಿ ಉಪ್ಪಿಗೆ ಸರ್​ಪ್ರೈಸ್ ನೀಡಿದ ‘ಎ’ ಸಿನಿಮಾದಲ್ಲಿ ನಟಿಸಿದ್ದ ಬಾಲಕ

ಉಪೇಂದ್ರ ನಟನೆಯ 'ಯುಐ' ಚಿತ್ರದ ಪ್ರಚಾರದ ವೇಳೆ ಆಸಕ್ತಿಕರ ಘಟನೆ ನಡೆದಿದೆ. 1998ರ 'ಎ' ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ವ್ಯಕ್ತಿ, ದೊಡ್ಡವನಾಗಿ ಉಪೇಂದ್ರರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

‘ಯುಐ’ ತೆಲುಗು ಪ್ರೆಸ್​ಮೀಟ್​ನಲ್ಲಿ ಉಪ್ಪಿಗೆ ಸರ್​ಪ್ರೈಸ್ ನೀಡಿದ ‘ಎ’ ಸಿನಿಮಾದಲ್ಲಿ ನಟಿಸಿದ್ದ ಬಾಲಕ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Dec 20, 2024 | 10:49 AM

Share

ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಇಂದು (ಡಿಸೆಂಬರ್ 20) ವಿಶ್ವಾದ್ಯಂತ ರಿಲೀಸ್ ಆಗಿದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪರಭಾಷಿಗರು ಚಿತ್ರದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ಉಪೇಂದ್ರ ಅವರು ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದರು. ಈ ವೇಳೆ ಅವರಿಗೆ ಒಂದು ಸರ್​ಪ್ರೈಸ್ ಕಾದಿತ್ತು. ‘ಎ’ ಚಿತ್ರದಲ್ಲಿ ಬಾಲಕನ ಪಾತ್ರ ಮಾಡಿದ್ದ ಬಾಲಕ ಈಗ ಬೆಳೆದು ದೊಡ್ಡವನಾಗಿ ಉಪ್ಪಿ ಎದುರು ಬಂದು ನಿಂತಿದ್ದಾರೆ. ಈ ಅಪರೂಪದ ವಿಡಿಯೋ ವೈರಲ್ ಆಗಿದೆ.

‘ಎ’ ಸಿನಿಮಾ 1998ರಲ್ಲಿ ರಿಲೀಸ್ ಆಗಿತ್ತು. ‘ಐ ಆ್ಯಮ್ ಗಾಡ್, ಗಾಡ್ ಈಸ್ ಗ್ರೇಟ್’ ಎಂದು ಹೇಳುತ್ತಾ ಸುತ್ತಾಡುತ್ತಾರೆ ಉಪ್ಪಿ. ಈ ಚಿತ್ರದ ಆರಂಭದಲ್ಲಿ ಕೆಲಸಕ್ಕೆ ಬಾರದ ವ್ಯಕ್ತಿಗಳನ್ನು ಉಪೇಂದ್ರ ಸಾಯಿಸೋ ದೃಶ್ಯ ಇದೆ. ಈ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಉಪ್ಪಿ ಅವರು ನಡೆದು ಬರುವಾಗ, ಮಹಿಳೆ ಒಬ್ಬಳು ಪತಿಗೆ ‘ಸತ್ತೋಗು’ ಎಂದು ಹೇಳುತ್ತಾಳೆ. ಮರುಕ್ಷಣವೇ ಗುಂಡು ಹೊಡೆದು ಉಪ್ಪಿ ಆ ವ್ಯಕ್ತಿಯನ್ನು ಸಾಯಿಸುತ್ತಾರೆ.

ಈ ದಂಪತಿಯ ಮಗ ಅಲ್ಲಿಯೇ ಅಳುತ್ತಾ ಕೂತಿರುತ್ತಾನೆ. ಆ ಬಾಲಕನ ಬಳಿ ಬರೋ ಉಪ್ಪಿ, ‘ಅಳಬೇಡ, ಅವರ ತೆವಲಿಗೆ ನಿನ್ನ ಹುಟ್ಟಿಸಿದ್ದಾರೆ. ಜಾಸ್ತಿ ಯೋಚನೆ ಮಾಡಿದ್ರೆ ನೀನು ನನ್ನ ರೀತಿ ಆಗ್ಬಿಡ್ತೀಯಾ. ಸೆಂಟಿಮೆಂಟ್ ಇದ್ರೆ ಖಾಲಿ ತಟ್ಟೆನೇ ಗಟ್ಟಿ ಆಗಿಬಿಡುತ್ತದೆ. ಪ್ರಪಂಚ ವಿಶಾಲವಾಗಿದೆ. ಆರಾಮಗಿ ಹೋಗಿ ಬದುಕಿಕೋ’ ಎನ್ನುತ್ತಾರೆ ಉಪ್ಪಿ. ಆ ಕ್ಷಣವೇ ಬಾಲಕ ಓಡಿ ಹೋಗುತ್ತಾನೆ.

ಇದನ್ನೂ ಓದಿ: ‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?

ಈ ವೇಳೆ ಉಪೇಂದ್ರ ಒಂದು ಮಾತು ಹೇಳುತ್ತಾರೆ. ‘ಈ ಹುಡುಗ ಓಡ್ತಿರೋ ಸ್ಪೀಡ್ ನೋಡಿದ್ರೆ ಸುಭಾಷ್ ಚಂದ್ರ ಬೋಸ್ ಆಗಬಹುದು’ ಎನ್ನುತ್ತಾರೆ. ಈಗ ಹುಡುಗ ದೊಡ್ಡವನಾಗಿ ಉಪ್ಪಿ ಎದುರು ಬಂದಿದ್ದಾರೆ. ‘ಯುಐ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಈ ವ್ಯಕ್ತಿ, ‘ಎ ಚಿತ್ರದಲ್ಲಿ ಇರೋ ಹುಡುಗ ನಾನೇ’ ಎಂದು ಅವರು ಪರಿಚಯಿಸಿಕೊಂಡರು. ಇದನ್ನು ಕೇಳಿ ಉಪ್ಪಿ ಶಾಕ್ ಆದರು, ‘ಅಲ್ಲಿ ಓಡಿ ಹೋದ ನೀವು, ಈಗ ಬಂದಿದ್ದೀರಾ’ ಎಂದು ಕೇಳಿ ನಕ್ಕರು ಉಪ್ಪಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:48 am, Fri, 20 December 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ