AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ನಕ್ಷತ್ರವೊಂದಕ್ಕೆ ಪುನೀತ್​​ ಹೆಸರು; ‘ದಿ ಬಿಗ್​ ಲಿಟ್ಲ್​’ ಸಂಸ್ಥೆಯ ಕಾರ್ಯಕ್ಕೆ ವಿಕ್ರಮ್​ ರವಿಚಂದ್ರನ್​ ಸಾಥ್​

Vikram Ravichandran | The Big Little: ಆಗಸದಲ್ಲಿ ಅನೇಕ ನಕ್ಷತ್ರಗಳಿವೆ. ಅವುಗಳಲ್ಲಿ ಒಂದು ತಾರೆಗೆ ಅಧಿಕೃತವಾಗಿ ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಇಡಲಾಗಿದೆ.

Puneeth Rajkumar: ನಕ್ಷತ್ರವೊಂದಕ್ಕೆ ಪುನೀತ್​​ ಹೆಸರು; ‘ದಿ ಬಿಗ್​ ಲಿಟ್ಲ್​’ ಸಂಸ್ಥೆಯ ಕಾರ್ಯಕ್ಕೆ ವಿಕ್ರಮ್​ ರವಿಚಂದ್ರನ್​ ಸಾಥ್​
ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on:Mar 19, 2023 | 4:50 PM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕೋಟ್ಯಂತರ ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಾರೆ. ಇತ್ತೀಚೆಗಷ್ಟೇ ಅಪ್ಪು ಜನ್ಮದಿನ ಆಚರಿಸಲಾಯಿತು. ಒಂದು ವೇಳೆ ಅವರು ಭೌತಿಕವಾಗಿ ನಮ್ಮ ಜೊತೆ ಇದ್ದಿದ್ದರೆ ಖಂಡಿತವಾಗಿಯೂ ಬರ್ತ್​ಡೇ (Puneeth Rajkumar Birthday) ಪ್ರಯುಕ್ತ ಹೊಸ ಸಿನಿಮಾಗಳು ಅನೌನ್ಸ್​ ಆಗುತ್ತಿದ್ದವು. ಆದರೆ ಈಗ ಅವರಿಲ್ಲ ಎಂಬ ನೋವಿನಲ್ಲೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಸಮಯದಲ್ಲಿ ಅಭಿಮಾನಿಗಳಿಗೆ ಖುಷಿ ನೀಡುವ ಹೊಸ ಸುದ್ದಿ ಸಿಕ್ಕಿದೆ. ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಇಡಲಾಗಿದೆ. ‘ದಿ ಬಿಗ್​ ಲಿಟ್ಲ್’ ಸಂಸ್ಥೆಯ ಈ ಕಾರ್ಯವನ್ನು ತಿಳಿಸಲು ವಿಶೇಷ ವಿಡಿಯೋ ಹಂಚಿಕೊಳ್ಳಲಾಗಿದೆ. ಅದಕ್ಕೆ ವಿಕ್ರಮ್​ ರವಿಚಂದ್ರನ್ (Vikram Ravichandran) ಅವರು ಧ್ವನಿ ನೀಡಿದ್ದಾರೆ.

ಆಗಸದಲ್ಲಿ ಲೆಕ್ಕವಿಲ್ಲದಷ್ಟು ನಕ್ಷತ್ರಗಳಿವೆ. ಅವುಗಳಲ್ಲಿ ಒಂದು ತಾರೆಗೆ ಅಧಿಕೃತವಾಗಿ ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಇಡಲಾಗಿದೆ. ಹೆಸರು ರಿಜಿಸ್ಟರ್​ ಮಾಡಿಸಿರುವ ಪ್ರಮಾಣಪತ್ರವನ್ನು ‘ದಿ ಬಿಗ್​ ಲಿಟ್ಲ್​’ ಸಂಸ್ಥೆ ಹಂಚಿಕೊಂಡಿದೆ. ಆ ಮೂಲಕ ಪುನೀತ್ ರಾಜ್​ಕುಮಾರ್​ ಅವರಿಗೆ ಗೌರವ ಸಲ್ಲಿಸಲಾಗಿದೆ. ಅಪ್ಪು ಹೆಸರನ್ನು ಶಾಶ್ವತವಾಗಿಸುವ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Appu Birthday: ಫ್ರೆಂಡ್ಸ್​ ಜೊತೆ ಪುನೀತ್​ ರಾಜ್​ಕುಮಾರ್​ ಖುಷಿಯಾಗಿ ಕಾಲ ಕಳೆದ ಆ ದಿನಗಳ ವಿಡಿಯೋ ವೈರಲ್​

ಇದನ್ನೂ ಓದಿ
Image
Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​ ಜೀವನದ ವಿವರ: ಫ್ಯಾನ್ಸ್​ಗೆ ಹೆಮ್ಮೆ
Image
Puneeth Rajkumar: ನಟಿ ಆಶಾರಾಣಿ ಸೀರೆ ಮೇಲೆ ಪುನೀತ್​ ಭಾವಚಿತ್ರ; ಇದು ಅಭಿಮಾನದ ಡಿಸೈನ್​
Image
Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
Image
Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ

ವಿಕ್ರಮ್​ ರವಿಚಂದ್ರನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪುನೀತ್ ರಾಜ್​ಕುಮಾರ್ ಅವರಿಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ತೊಡಗಿಸಿಕೊಳ್ಳಲು ನನಗೆ ತುಂಬಾ ಸಂತೋಷ ಆಗುತ್ತದೆ. ನಾನು ಚಿಕ್ಕ ವಯಸ್ಸಿನಿಂದಲೂ ಅವರ ಸಿನಿಮಾಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಸಿನಿಮಾದ ಆಚೆಗಿನ ಅವರ ಜೀವನ ನನಗೆ ಸ್ಫೂರ್ತಿ. ಅವರಿಗಾಗಿ ಮಾಡುತ್ತಿರುವ ಈ ಒಳ್ಳೆಯ ಕೆಲಸದಲ್ಲಿ ನಾನು ಭಾಗಿ ಆಗಿರೋದು ತುಂಬಾ ಖುಷಿ ಕೊಟ್ಟಿದೆ’ ಎಂದು ಅವರು ಹೇಳಿದ್ದಾರೆ.

Vikram Ravichandran Kavya Shankare Gowda

ವಿಕ್ರಮ್ ರವಿಚಂದ್ರನ್, ಕಾವ್ಯ ಶಂಕರೇಗೌಡ

‘ದಿ ಬಿಗ್​ ಲಿಟ್ಲ್​’ ಕಂಪನಿಯ ಸಂಸ್ಥಾಪಕಿ ಕಾವ್ಯ ಶಂಕರೇಗೌಡ ಅವರು ಈ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಪುನೀತ್ ರಾಜ್​ಕುಮಾರ್ ಅವರು ಎಲ್ಲರಿಗೂ ಸ್ಫೂರ್ತಿ. ನಮ್ಮ ಕಂಪನಿ ಕೂಡ ಅವರಿಂದ ತುಂಬ ಕಲಿತಿದೆ. ನನ್ನಂತಹ ಸಾಮಾನ್ಯ ವ್ಯಕ್ತಿಗಳು ಸೂಪರ್ ಸ್ಟಾರ್​ಗಳ ಬಗ್ಗೆ ಹೊಂದಿರುವ ಅಭಿಪ್ರಾಯವನ್ನು ಅವರು ಬದಲಾಯಿಸಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತವೆ. ಆ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿಬಂದಿದೆ. ನಮ್ಮ ಆಪ್ತರು ನಿಧನರಾದಾಗ ನಕ್ಷತ್ರಗಳಾಗುತ್ತಾರೆ ಅಂತ ನಾವು ನಂಬಿದ್ದೇವೆ. ಅಪ್ಪು ನಮಗೆಲ್ಲ ಸ್ಟಾರ್ ಆಗಿದ್ದರು. ಅವರ ಹೆಸರಲ್ಲಿ ಒಂದು ನಕ್ಷತ್ರ ಇರಬೇಕೆಂದು ನಾವು ಬಯಸುತ್ತೇವೆ. ನಮ್ಮೆಲ್ಲರ ಅತ್ಯುತ್ತಮ ಸ್ಫೂರ್ತಿಯ ಶಕ್ತಿಗೆ ಇದು ನಮ್ಮ ಚಿಕ್ಕ ಕೊಡುಗೆ’ ಎಂದು ಕಾವ್ಯ ಶಂಕರೇಗೌಡ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:50 pm, Sun, 19 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!