‘ವಿಕ್ರಾಂತ್ ರೋಣ’ ಚಿತ್ರದ ಕೆಲವು ದೃಶ್ಯದ ಬಗ್ಗೆ ತಕರಾರು ತೆಗೆದ ನಟ ಚೇತನ್ ಕುಮಾರ್

ಚೇತನ್ ಕುಮಾರ್ ಅವರು ತಮ್ಮ ಸಿದ್ಧಾಂತಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈ ರೀತಿ ವಿಚಾರಗಳನ್ನು ಓಪನ್ ಆಗಿ ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ತೋರುವುದಿಲ್ಲ.

‘ವಿಕ್ರಾಂತ್ ರೋಣ’ ಚಿತ್ರದ ಕೆಲವು ದೃಶ್ಯದ ಬಗ್ಗೆ ತಕರಾರು ತೆಗೆದ ನಟ ಚೇತನ್ ಕುಮಾರ್
ಚೇತನ್​-ಸುದೀಪ್
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 03, 2022 | 10:07 PM

‘ವಿಕ್ರಾಂತ್ ರೋಣ’ ಚಿತ್ರ (Vikrant Rona Movie) ತೆರೆಗೆ ಬಂದು ಯಶಸ್ಸು ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿದೆ. ಈ ಚಿತ್ರ ತಂಡಕ್ಕೆ ಎಲ್ಲ ಕಡೆಗಳಿಂದ ಶುಭಾಶಯ ಹರಿದು ಬರುತ್ತಿದೆ. ಈ ಚಿತ್ರದಿಂದ ನಟ ಸುದೀಪ್ ಹಾಗೂ ನಿರ್ದೇಶಕ ಅನುಪ್ ಭಂಡಾರಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ ಬಗ್ಗೆ ‘ಆ ದಿನಗಳು’ ನಟ ಚೇತನ್ ಕುಮಾರ್ (Chetan Kumar) ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಚೇತನ್ ಕುಮಾರ್ ಅವರು ತಮ್ಮ ಸಿದ್ಧಾಂತಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈ ರೀತಿ ವಿಚಾರಗಳನ್ನು ಓಪನ್ ಆಗಿ ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ತೋರುವುದಿಲ್ಲ. ಇದರಿಂದ ಸಾಕಷ್ಟು ವಿವಾದಗಳು ಹುಟ್ಟಿಕೊಂಡ ಉದಾಹರಣೆ ಇದೆ. ಈಗ ಅವರ ಹೊಸ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Image
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

‘ವಿಕ್ರಾಂತ್ ರೋಣ ಚಿತ್ರ ತಾಂತ್ರಿಕವಾಗಿ ಮತ್ತು ಅಭಿನಯದ ದೃಷ್ಟಿಯಿಂದ ನೋಡಿದರೆ ಉತ್ತಮವಾಗಿದೆ. ಆದರೆ, ದಲಿತರನ್ನು-ಬಹುಜನರನ್ನು ದುಷ್ಟ, ಪೈಶಾಚಿಕರಂತೆ ಬಿಂಬಿಸಿ ಮುಸ್ಲಿಮರನ್ನು ಸ್ಟೀರಿಯೋಟೈಪ್ ಮಾಡಿದ್ದಾರೆ, ಈ ಸೂಕ್ಷ್ಮವಿಲ್ಲದ ಚಿತ್ರಣದಿಂದ ನಾನು ನಿರಾಶೆಗೊಂಡಿದ್ದೇನೆ. ಚಲನಚಿತ್ರ ನಿರ್ಮಾಣ ಮಾಡವವರು ಐತಿಹಾಸಿಕ ಅನ್ಯಾಯಗಳನ್ನು ಸೂಕ್ಷ್ಮವಾಗಿ ಗಮನಿಸದೆ ಕೇವಲ ಲಾಭಕ್ಕಾಗಿ ಜಾತಿ/ಧರ್ಮವನ್ನು ತಮ್ಮ ಚಿತ್ರಗಳಲ್ಲಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು’ ಎಂದಿದ್ದಾರೆ ಚೇತನ್ ಕುಮಾರ್.

ಸಿನಿಮಾದಲ್ಲಿ ಫಕ್ರು ಹೆಸರಿನ ಮುಸ್ಲಿಂ ಪಾತ್ರ ಇದೆ. ಆತನಿಗೆ 11 ಮಕ್ಕಳು. ಈ ಕಾರಣಕ್ಕೆ ಮುಸ್ಲಿಮರನ್ನು ಸ್ಟಿರಿಯೋಟೈಪ್​ನಲ್ಲಿ ತೋರಿಸಲಾಗಿದೆ ಎಂಬುದು ಚೇತನ್​ ವಾದ ಇರಬಹುದು. ಇನ್ನು, ದಲಿತ ಸಮುದಾಯಕ್ಕೆ ಸಂಬಂಧಿಸಿದವರು ಎಂದು ಪರೋಕ್ಷವಾಗಿ ತೋರಿಸುವ ಕೆಲ ದೃಶ್ಯಗಳು ಬರುತ್ತವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚೇತನ್ ಕುಮಾರ್ ಧ್ವನಿ ಎತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ

ಚೇತನ್​ ಕುಮಾರ್ ಅವರ ಈ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಇದರಲ್ಲೂ ಜಾತಿ ಹುಡುಕುತ್ತಿರುವ ನಿಮ್ಮ ಮನಸ್ಸು ಮತ್ತು ನಿಮ್ಮ ಮಿದುಳು..’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾರೆ. ಇನ್ನೂ ಹಲವರು ಚೇತನ್ ಕುಮಾರ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ