‘ವಿಕ್ರಾಂತ್ ರೋಣ’ ಚಿತ್ರದ ಕೆಲವು ದೃಶ್ಯದ ಬಗ್ಗೆ ತಕರಾರು ತೆಗೆದ ನಟ ಚೇತನ್ ಕುಮಾರ್

| Updated By: ರಾಜೇಶ್ ದುಗ್ಗುಮನೆ

Updated on: Aug 03, 2022 | 10:07 PM

ಚೇತನ್ ಕುಮಾರ್ ಅವರು ತಮ್ಮ ಸಿದ್ಧಾಂತಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈ ರೀತಿ ವಿಚಾರಗಳನ್ನು ಓಪನ್ ಆಗಿ ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ತೋರುವುದಿಲ್ಲ.

‘ವಿಕ್ರಾಂತ್ ರೋಣ’ ಚಿತ್ರದ ಕೆಲವು ದೃಶ್ಯದ ಬಗ್ಗೆ ತಕರಾರು ತೆಗೆದ ನಟ ಚೇತನ್ ಕುಮಾರ್
ಚೇತನ್​-ಸುದೀಪ್
Follow us on

‘ವಿಕ್ರಾಂತ್ ರೋಣ’ ಚಿತ್ರ (Vikrant Rona Movie) ತೆರೆಗೆ ಬಂದು ಯಶಸ್ಸು ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿದೆ. ಈ ಚಿತ್ರ ತಂಡಕ್ಕೆ ಎಲ್ಲ ಕಡೆಗಳಿಂದ ಶುಭಾಶಯ ಹರಿದು ಬರುತ್ತಿದೆ. ಈ ಚಿತ್ರದಿಂದ ನಟ ಸುದೀಪ್ ಹಾಗೂ ನಿರ್ದೇಶಕ ಅನುಪ್ ಭಂಡಾರಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ ಬಗ್ಗೆ ‘ಆ ದಿನಗಳು’ ನಟ ಚೇತನ್ ಕುಮಾರ್ (Chetan Kumar) ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಚೇತನ್ ಕುಮಾರ್ ಅವರು ತಮ್ಮ ಸಿದ್ಧಾಂತಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಈ ರೀತಿ ವಿಚಾರಗಳನ್ನು ಓಪನ್ ಆಗಿ ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ತೋರುವುದಿಲ್ಲ. ಇದರಿಂದ ಸಾಕಷ್ಟು ವಿವಾದಗಳು ಹುಟ್ಟಿಕೊಂಡ ಉದಾಹರಣೆ ಇದೆ. ಈಗ ಅವರ ಹೊಸ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಇದನ್ನೂ ಓದಿ
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

‘ವಿಕ್ರಾಂತ್ ರೋಣ ಚಿತ್ರ ತಾಂತ್ರಿಕವಾಗಿ ಮತ್ತು ಅಭಿನಯದ ದೃಷ್ಟಿಯಿಂದ ನೋಡಿದರೆ ಉತ್ತಮವಾಗಿದೆ. ಆದರೆ, ದಲಿತರನ್ನು-ಬಹುಜನರನ್ನು ದುಷ್ಟ, ಪೈಶಾಚಿಕರಂತೆ ಬಿಂಬಿಸಿ ಮುಸ್ಲಿಮರನ್ನು ಸ್ಟೀರಿಯೋಟೈಪ್ ಮಾಡಿದ್ದಾರೆ, ಈ ಸೂಕ್ಷ್ಮವಿಲ್ಲದ ಚಿತ್ರಣದಿಂದ ನಾನು ನಿರಾಶೆಗೊಂಡಿದ್ದೇನೆ. ಚಲನಚಿತ್ರ ನಿರ್ಮಾಣ ಮಾಡವವರು ಐತಿಹಾಸಿಕ ಅನ್ಯಾಯಗಳನ್ನು ಸೂಕ್ಷ್ಮವಾಗಿ ಗಮನಿಸದೆ ಕೇವಲ ಲಾಭಕ್ಕಾಗಿ ಜಾತಿ/ಧರ್ಮವನ್ನು ತಮ್ಮ ಚಿತ್ರಗಳಲ್ಲಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು’ ಎಂದಿದ್ದಾರೆ ಚೇತನ್ ಕುಮಾರ್.

ಸಿನಿಮಾದಲ್ಲಿ ಫಕ್ರು ಹೆಸರಿನ ಮುಸ್ಲಿಂ ಪಾತ್ರ ಇದೆ. ಆತನಿಗೆ 11 ಮಕ್ಕಳು. ಈ ಕಾರಣಕ್ಕೆ ಮುಸ್ಲಿಮರನ್ನು ಸ್ಟಿರಿಯೋಟೈಪ್​ನಲ್ಲಿ ತೋರಿಸಲಾಗಿದೆ ಎಂಬುದು ಚೇತನ್​ ವಾದ ಇರಬಹುದು. ಇನ್ನು, ದಲಿತ ಸಮುದಾಯಕ್ಕೆ ಸಂಬಂಧಿಸಿದವರು ಎಂದು ಪರೋಕ್ಷವಾಗಿ ತೋರಿಸುವ ಕೆಲ ದೃಶ್ಯಗಳು ಬರುತ್ತವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚೇತನ್ ಕುಮಾರ್ ಧ್ವನಿ ಎತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ

ಚೇತನ್​ ಕುಮಾರ್ ಅವರ ಈ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಇದರಲ್ಲೂ ಜಾತಿ ಹುಡುಕುತ್ತಿರುವ ನಿಮ್ಮ ಮನಸ್ಸು ಮತ್ತು ನಿಮ್ಮ ಮಿದುಳು..’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾರೆ. ಇನ್ನೂ ಹಲವರು ಚೇತನ್ ಕುಮಾರ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.