AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ನಡೆದುಕೊಂಡ ರೀತಿ ನನಗೆ ಇಷ್ಟವಾಯಿತು, ನಾನು ಅವರ​ ಬಳಿ ಕ್ಷಮೆ ಕೇಳಿದೆ; ಆಮಿರ್​ ಖಾನ್​

‘ಕೆಜಿಎಫ್​ 2’ ಬಾಕ್ಸ್​ ಆಫೀಸ್​ ಡಾಮಿನೇಟ್​ ಮಾಡಲಿದ್ದಾರೆ ಎಂದು ರಾಕಿಂಗ್​ ಸ್ಟಾರ್​ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಯಶ್​ ಅವರಿಗೆ ಆಮಿರ್​ ಖಾನ್​ ಕರೆ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಅವರ ಬಳಿ ಕ್ಷಮೆ ಕೂಡ ಕೇಳಿದ್ದಾರೆ.

ಯಶ್​ ನಡೆದುಕೊಂಡ ರೀತಿ ನನಗೆ ಇಷ್ಟವಾಯಿತು, ನಾನು ಅವರ​ ಬಳಿ ಕ್ಷಮೆ ಕೇಳಿದೆ; ಆಮಿರ್​ ಖಾನ್​
ಯಶ್​-ಆಮಿರ್​ ಖಾನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 24, 2021 | 8:19 PM

Share

ರಾಕಿಂಗ್​ ಸ್ಟಾರ್​ ಯಶ್​ ನಟನೆಯ ‘ಕೆಜಿಎಫ್​ 2’ ಹಾಗೂ ಆಮಿರ್​ ಖಾನ್​ ಅಭಿನಯದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಎರಡು ಸಿನಿಮಾಗಳು ಒಂದೇ ದಿನ ತೆರೆಗೆ ಬರುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್​ ಏರ್ಪಡುತ್ತಿದೆ. ಇದರಲ್ಲಿ ಯಾವ ಚಿತ್ರ ಗೆಲ್ಲಲಿದೆ ಎನ್ನುವ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ‘ಕೆಜಿಎಫ್​ 2’ ಬಾಕ್ಸ್​ ಆಫೀಸ್​ ಡಾಮಿನೇಟ್​ ಮಾಡಲಿದೆ ಎಂದು ರಾಕಿಂಗ್​ ಸ್ಟಾರ್​ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಯಶ್​ ಅವರಿಗೆ ಆಮಿರ್​ ಖಾನ್​ ಕರೆ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಅವರ ಬಳಿ ಕ್ಷಮೆ ಕೂಡ ಕೇಳಿದ್ದಾರೆ.

ಸಂದರ್ಶನವೊಂದರಲ್ಲಿ ಆಮಿರ್​ ಖಾನ್​ ಮಾತನಾಡಿದ್ದಾರೆ. ಈ ವೇಳೆ ಅವರು ಎಲ್ಲಾ ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಸಿನಿಮಾ ಕೆಲಸಗಳನ್ನು ಮಾಡೋಕೆ ಎರಡು ವಿಧಾನವಿದೆ. ಒಂದು ತರಾತುರಿಯಲ್ಲಿ ಕೆಲಸ ಮುಗಿಸುವುದು, ಮತ್ತೊಂದು ನಿಧಾನವಾಗಿ ಕೂತ ಕೆಲಸ ಮಾಡುವುದು. ನಾನು ಎರಡನೇ ಆಯ್ಕೆಯನ್ನು ಮಾಡಿಕೊಂಡೆ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ವಿಳಂಬವಾಯಿತು. ಹೀಗಾಗಿ, ನಾನು ಅಭಿಮಾನಿಗಳ ಬಳಿ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ ಆಮಿರ್​ ಖಾನ್​.

‘ನಾನು ಇದೇ ಮೊದಲ ಬಾರಿಗೆ ಸಿಖ್​ ಅವತಾರ ತಾಳಿದ್ದೇನೆ. ಏಪ್ರಿಲ್​ 14 ಬೈಸಾಖಿ ದಿನ. ನಾನು ಆ ದಿನಕ್ಕಾಗಿ ಕಾದು ಕೂತಿದ್ದೇನೆ. ಸಿನಿಮಾ ರಿಲೀಸ್​ ದಿನಾಂಕ ಫೈನಲ್​ ಮಾಡುವುದಕ್ಕೂ ಮೊದಲು ‘ಕೆಜಿಎಫ್​ 2’ ನಿರ್ಮಾಪಕ ವಿಜಯ್​ ಕಿರಗಂದೂರು, ನಿರ್ದೇಶಕ ಪ್ರಶಾಂತ್​ ನೀಲ್​, ಹಾಗೂ ಯಶ್​ಗೆ ಕ್ಷಮೆ ಕೇಳಿದ್ದೆ’ ಎಂದಿದ್ದಾರೆ ಆಮಿರ್​ ಖಾನ್​.

‘ನಮ್ಮ ಸಿನಿಮಾವನ್ನು ಏಪ್ರಿಲ್​ 14ರಂದು ಏಕೆ ತೆರೆಮೇಲೆ ತರುತ್ತಿದ್ದೇವೆ ಮತ್ತು ಲಾಕ್​ಡೌನ್​ನಿಂದ ಸಿನಿಮಾ ಕೆಲಸಗಳು ಹೇಗೆ ವಿಳಂಬವಾದವು ಎನ್ನುವುದನ್ನು ವಿವರಿಸಿದ್ದೆ. ನಾನು ಹೇಳಿದ್ದನ್ನು ಅವರು ಅರ್ಥ ಮಾಡಿಕೊಂಡರು. ಸಿನಿಮಾ ರಿಲೀಸ್​ ಮಾಡುವಂತೆ ಹೇಳಿದರು. ಅವರು ನಡೆದುಕೊಂಡ ರೀತಿ ಇಷ್ಟವಾಯಿತು. ಯಶ್​ ಜತೆ ನಾನು ಸುದೀರ್ಘವಾಗಿ ಮಾತುಕತೆ ನಡೆಸಿದ್ದೆ’ ಎಂದಿದ್ದಾರೆ ಆಮಿರ್​ ಖಾನ್​.

ಇಂಗ್ಲಿಷ್​ನಲ್ಲಿ ತೆರೆಗೆ ಬಂದ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ‘ಲಾಲ್​ ಸಿಂಗ್​ ಚಡ್ಡಾ’. ಆಮಿರ್​ ಖಾನ್​ ಹೆಚ್ಚು ಇಷ್ಟಪಟ್ಟು ಈ ಸಿನಿಮಾವನ್ನು ನಿರ್ಮಿಸಿ, ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಚಿತ್ರದ ಶೂಟಿಂಗ್​ ತಡವಾಗಿದೆ. ಇಲ್ಲವಾದರೆ ಈ ಸಿನಿಮಾ ಈ ವರ್ಷ ಕ್ರಿಸ್​ಮಸ್​ಗೆ ತೆರೆಗೆ ಬರಬೇಕಿತ್ತು. ಆದರೆ, ಎಲ್ಲ ಕೆಲಸಗಳು ವಿಳಂಬವಾಗಿವೆ. ಹೀಗಾಗಿ, ಈ ‘ಲಾಲ್​ ಸಿಂಗ್​ ಚಡ್ಡಾ’ ರಿಲೀಸ್​ ದಿನಾಂಕ ಏಪ್ರಿಲ್​ 14ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ಯಶ್​ ನಟನೆಯ ‘ಕೆಜಿಎಫ್​ 2’ಗೆ ಹೆದರಿದ ಬಾಲಿವುಡ್​; ರಿಲೀಸ್​ ದಿನಾಂಕ ಮುಂದೂಡಿದ ಸ್ಟಾರ್​ ನಟ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!