AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು […]

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?
KUSHAL V
| Updated By: ಸಾಧು ಶ್ರೀನಾಥ್​|

Updated on: Oct 12, 2020 | 3:43 PM

Share

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ.

ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ‘ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು’ ಇನ್ನು ಐರಾ ಖಾನ್​ರ ವಿಡಿಯೋಗೆ ನಟಿ ಕಂಗನಾ ರಣೌತ್​ ಪ್ರತಿಕ್ರಿಯಿಸಿದ್ದು ತಮ್ಮ ವೈಯಕ್ತಿಕ ಅನುಭವಗಳನ್ನು ಸಹ ಹಂಚಿಕೊಂಡರು. ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು. ಜೊತೆಗೆ, ನನ್ನ ಸಹೋದರಿಯ ಮೇಲೆ ಕಿಡಿಗೇಡಿಗಳು ಌಸಿಡ್​ ಎರಚಿದ್ದರಿಂದ ನಾನು ಆಕೆಯನ್ನು ಸಹ ನೋಡಿಕೊಳ್ಳಬೇಕಾಗಿತ್ತು. ಇದೆಲ್ಲವೂ ನಾನು ಮಾಧ್ಯಮಗಳ ಸಿಟ್ಟಿನ ನಡುವೆ ಎದುರಿಸಿದೆ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ.

ಐರಾ ಒಡೆದ ಕುಟುಂಬದಿಂದ ಬಂದವಳು.. ಖಿನ್ನತೆ ಸಹಜ ಜೊತೆಗೆ, ಖಿನ್ನತೆಗೆ ಒಳಗಾಗಲು ಹಲವಾರು ಕಾರಣಗಳಿರುತ್ತದೆ. ಹಾಗಾಗಿ, ಸಾಂಪ್ರದಾಯಿಕ ಕುಟುಂಬಗಳಿರುವುದು ಬಹುಮುಖ್ಯ. ಅದಕ್ಕಿಂತ ಮುಖ್ಯವಾಗಿ ಆಮಿರ್​ ಖಾನ್​ ಪುತ್ರಿ ಐರಾ ಒಡೆದ ಕುಟುಂಬದಿಂದ ಬಂದವಳು. ಬೆಳೆಯುತ್ತಾ ಬೆಳೆಯುತ್ತಾ ಖಿನ್ನತೆ.. ಇದೆಲ್ಲ ಸಾಮಾನ್ಯ ಎಂದು World Mental Health Day ಸಂದರ್ಭದಲ್ಲಿ ಹೇಳಿದ್ದಾರೆ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್