AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ನಟನೆಯ ‘ಕೆಜಿಎಫ್​ 2’ಗೆ ಸೆಡ್ಡು ಹೊಡೆಯಲಿದೆ ಸ್ಟಾರ್​ ನಟನ ಸಿನಿಮಾ; ಗೆಲ್ಲೋದು ಯಾರು ನೀವೇ ಹೇಳಿ

ಇಂಗ್ಲಿಷ್​ನಲ್ಲಿ ತೆರೆಗೆ ಬಂದ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ‘ಲಾಲ್​ ಸಿಂಗ್​ ಚಡ್ಡಾ’. ಆಮಿರ್​ ಖಾನ್​ ಹೆಚ್ಚು ಇಷ್ಟಪಟ್ಟು ಈ ಸಿನಿಮಾವನ್ನು ನಿರ್ಮಿಸಿ, ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಚಿತ್ರದ ಶೂಟಿಂಗ್​ ವಿಳಂಬವಾಗಿದೆ.

ಯಶ್​ ನಟನೆಯ ‘ಕೆಜಿಎಫ್​ 2’ಗೆ ಸೆಡ್ಡು ಹೊಡೆಯಲಿದೆ ಸ್ಟಾರ್​ ನಟನ ಸಿನಿಮಾ; ಗೆಲ್ಲೋದು ಯಾರು ನೀವೇ ಹೇಳಿ
TV9 Web
| Edited By: |

Updated on: Nov 16, 2021 | 1:45 PM

Share

ಶಾರುಖ್​ ಖಾನ್​ (Shah Rukh Khan) ನಟನೆಯ ‘ಜೀರೋ’ ಸಿನಿಮಾದ (Zero Movie) ಎದುರು ಯಶ್​  (Yash) ನಟನೆಯ ‘ಕೆಜಿಎಫ್​’ (KGF) ರಿಲೀಸ್​ ಆಗಿತ್ತು. ಯಶ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಅಷ್ಟೇ ಅಲ್ಲ, ಶಾರುಖ್​ ಚಿತ್ರದ ಎದುರು ಯಶ್​ ಸಿನಿಮಾ ಗೆದ್ದು ಬೀಗಿತ್ತು. ಈಗ ‘ಕೆಜಿಎಫ್​ 2’  (KGF Chapter 2) ರಿಲೀಸ್​ಗೆ ರೆಡಿ ಇದೆ. ಏಪ್ರಿಲ್​ 14ರಂದು ಈ ಚಿತ್ರ ರಿಲೀಸ್​ ಆಗುತ್ತಿದೆ. ಈವರೆಗೆ ಯಾವುದೇ ಸ್ಟಾರ್​ ನಟರು ಇದೇ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡುವ ಬಗ್ಗೆ ಘೋಷಣೆ ಮಾಡಿಲ್ಲ. ಆದರೆ, ಬಾಲಿವುಡ್​ನ ಸ್ಟಾರ್​ ನಟನ ಸಿನಿಮಾ ಇದೇ ದಿನಾಂಕದಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಈ ಮೂಲಕ ‘ಕೆಜಿಎಫ್​ 2’ ಸಿನಿಮಾ ಜತೆ ಸ್ಪರ್ಧೆಗೆ ಇಳಿಯಲಿದೆ. ಹಾಗಾದರೆ ಯಾವುದು ಆ ಸಿನಿಮಾ? ‘ಲಾಲ್​ ಸಿಂಗ್​ ಚಡ್ಡಾ’ ( Laal Singh Chaddha).

ಇಂಗ್ಲಿಷ್​ನಲ್ಲಿ ತೆರೆಗೆ ಬಂದ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ‘ಲಾಲ್​ ಸಿಂಗ್​ ಚಡ್ಡಾ’. ಆಮಿರ್​ ಖಾನ್​ ಹೆಚ್ಚು ಇಷ್ಟಪಟ್ಟು ಈ ಸಿನಿಮಾವನ್ನು ನಿರ್ಮಿಸಿ, ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಚಿತ್ರದ ಶೂಟಿಂಗ್​ ವಿಳಂಬವಾಗಿದೆ. ಇಲ್ಲವಾದರೆ ಈ ಸಿನಿಮಾ ಈ ವರ್ಷ ಕ್ರಿಸ್​ಮಸ್​ಗೆ ತೆರೆಗೆ ಬರಬೇಕಿತ್ತು. ಆದರೆ, ಎಲ್ಲ ಕೆಲಸಗಳು ವಿಳಂಬವಾಗಿವೆ. ಹೀಗಾಗಿ, ಈ ‘ಲಾಲ್​ ಸಿಂಗ್​ ಚಡ್ಡಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಎದುರು ಈ ಚಿತ್ರ ಸೆಡ್ಡು ಹೊಡೆಯಲಿದೆ ಎನ್ನಲಾಗುತ್ತಿದೆ.

‘ಕೆಜಿಎಫ್​ 2’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ಮೇಲೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಇನ್ನು, ಚಿತ್ರತಂಡಕ್ಕೆ ಸಂಜಯ್​ ದತ್​, ರವೀನಾ ಟಂಡನ್​ ಕೂಡ ಸೇರ್ಪಡೆ ಆಗಿದ್ದಾರೆ. ಮೇಕಿಂಗ್​ನಲ್ಲೂ ಪ್ರಶಾಂತ್​ ನೀಲ್​ ಗಮನ ಸೆಳೆದಿದ್ದಾರೆ. ಈ ಎಲ್ಲಾ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ಹೆಚ್ಚು ಭರವಸೆ ಇದೆ. ಆಮಿರ್​ ಖಾನ್​ ಸಿನಿಮಾ ಎದುರು ಯಶ್​ ಚಿತ್ರ ಗೆದ್ದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ