AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ನಟನೆಯ ‘ಕೆಜಿಎಫ್​ 2’ಗೆ ಸೆಡ್ಡು ಹೊಡೆಯಲಿದೆ ಸ್ಟಾರ್​ ನಟನ ಸಿನಿಮಾ; ಗೆಲ್ಲೋದು ಯಾರು ನೀವೇ ಹೇಳಿ

ಇಂಗ್ಲಿಷ್​ನಲ್ಲಿ ತೆರೆಗೆ ಬಂದ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ‘ಲಾಲ್​ ಸಿಂಗ್​ ಚಡ್ಡಾ’. ಆಮಿರ್​ ಖಾನ್​ ಹೆಚ್ಚು ಇಷ್ಟಪಟ್ಟು ಈ ಸಿನಿಮಾವನ್ನು ನಿರ್ಮಿಸಿ, ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಚಿತ್ರದ ಶೂಟಿಂಗ್​ ವಿಳಂಬವಾಗಿದೆ.

ಯಶ್​ ನಟನೆಯ ‘ಕೆಜಿಎಫ್​ 2’ಗೆ ಸೆಡ್ಡು ಹೊಡೆಯಲಿದೆ ಸ್ಟಾರ್​ ನಟನ ಸಿನಿಮಾ; ಗೆಲ್ಲೋದು ಯಾರು ನೀವೇ ಹೇಳಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 16, 2021 | 1:45 PM

ಶಾರುಖ್​ ಖಾನ್​ (Shah Rukh Khan) ನಟನೆಯ ‘ಜೀರೋ’ ಸಿನಿಮಾದ (Zero Movie) ಎದುರು ಯಶ್​  (Yash) ನಟನೆಯ ‘ಕೆಜಿಎಫ್​’ (KGF) ರಿಲೀಸ್​ ಆಗಿತ್ತು. ಯಶ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಅಷ್ಟೇ ಅಲ್ಲ, ಶಾರುಖ್​ ಚಿತ್ರದ ಎದುರು ಯಶ್​ ಸಿನಿಮಾ ಗೆದ್ದು ಬೀಗಿತ್ತು. ಈಗ ‘ಕೆಜಿಎಫ್​ 2’  (KGF Chapter 2) ರಿಲೀಸ್​ಗೆ ರೆಡಿ ಇದೆ. ಏಪ್ರಿಲ್​ 14ರಂದು ಈ ಚಿತ್ರ ರಿಲೀಸ್​ ಆಗುತ್ತಿದೆ. ಈವರೆಗೆ ಯಾವುದೇ ಸ್ಟಾರ್​ ನಟರು ಇದೇ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡುವ ಬಗ್ಗೆ ಘೋಷಣೆ ಮಾಡಿಲ್ಲ. ಆದರೆ, ಬಾಲಿವುಡ್​ನ ಸ್ಟಾರ್​ ನಟನ ಸಿನಿಮಾ ಇದೇ ದಿನಾಂಕದಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಈ ಮೂಲಕ ‘ಕೆಜಿಎಫ್​ 2’ ಸಿನಿಮಾ ಜತೆ ಸ್ಪರ್ಧೆಗೆ ಇಳಿಯಲಿದೆ. ಹಾಗಾದರೆ ಯಾವುದು ಆ ಸಿನಿಮಾ? ‘ಲಾಲ್​ ಸಿಂಗ್​ ಚಡ್ಡಾ’ ( Laal Singh Chaddha).

ಇಂಗ್ಲಿಷ್​ನಲ್ಲಿ ತೆರೆಗೆ ಬಂದ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ‘ಲಾಲ್​ ಸಿಂಗ್​ ಚಡ್ಡಾ’. ಆಮಿರ್​ ಖಾನ್​ ಹೆಚ್ಚು ಇಷ್ಟಪಟ್ಟು ಈ ಸಿನಿಮಾವನ್ನು ನಿರ್ಮಿಸಿ, ನಟಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಚಿತ್ರದ ಶೂಟಿಂಗ್​ ವಿಳಂಬವಾಗಿದೆ. ಇಲ್ಲವಾದರೆ ಈ ಸಿನಿಮಾ ಈ ವರ್ಷ ಕ್ರಿಸ್​ಮಸ್​ಗೆ ತೆರೆಗೆ ಬರಬೇಕಿತ್ತು. ಆದರೆ, ಎಲ್ಲ ಕೆಲಸಗಳು ವಿಳಂಬವಾಗಿವೆ. ಹೀಗಾಗಿ, ಈ ‘ಲಾಲ್​ ಸಿಂಗ್​ ಚಡ್ಡಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಎದುರು ಈ ಚಿತ್ರ ಸೆಡ್ಡು ಹೊಡೆಯಲಿದೆ ಎನ್ನಲಾಗುತ್ತಿದೆ.

‘ಕೆಜಿಎಫ್​ 2’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ಮೇಲೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಇನ್ನು, ಚಿತ್ರತಂಡಕ್ಕೆ ಸಂಜಯ್​ ದತ್​, ರವೀನಾ ಟಂಡನ್​ ಕೂಡ ಸೇರ್ಪಡೆ ಆಗಿದ್ದಾರೆ. ಮೇಕಿಂಗ್​ನಲ್ಲೂ ಪ್ರಶಾಂತ್​ ನೀಲ್​ ಗಮನ ಸೆಳೆದಿದ್ದಾರೆ. ಈ ಎಲ್ಲಾ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ಹೆಚ್ಚು ಭರವಸೆ ಇದೆ. ಆಮಿರ್​ ಖಾನ್​ ಸಿನಿಮಾ ಎದುರು ಯಶ್​ ಚಿತ್ರ ಗೆದ್ದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು 

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ