AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?

Rishab Shetty | Ab de Villiers: ಎಲ್ಲೆಲ್ಲೂ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳಿಗೆ ಥ್ರಿಲ್​ ಆಗಿದೆ.

Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
ರಿಷಬ್ ಶೆಟ್ಟಿ, ಎಬಿ ಡಿವಿಲಿಯರ್ಸ್
TV9 Web
| Edited By: |

Updated on:Nov 04, 2022 | 7:31 AM

Share

ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್​ ಆಟಗಾರ ಎಬಿ ಡಿವಿಲಿಯರ್ಸ್ (Ab de Villiers) ಅವರು ಮತ್ತೆ ಬೆಂಗಳೂರಿಗೆ ಮರಳಿದ್ದಾರೆ. ಅವರ ಎಂಟ್ರಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಐಪಿಎಲ್​ ಹರಾಜಿಗೂ ಮುನ್ನ ಅವರು ಬೆಂಗಳೂರಿಗೆ ಕಾಲಿಟ್ಟಿರುವುದು ಕುತೂಹಲ ಹೆಚ್ಚಿಸಿದೆ. ಅದಕ್ಕಿಂತಲೂ ಅಚ್ಚರಿ ಏನೆಂದರೆ, ಬರುಬರುತ್ತಲೇ ಅವರು ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಮಾತಾಡಿದ್ದಾರೆ. ಹೌದು, ರಿಷಬ್​ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ‘ಕಾಂತಾರ’ ಎಂದು ಕೂಗಿದ್ದಾರೆ. ಈ ವಿಡಿಯೋವನ್ನು ‘ಹೊಂಬಾಳೆ ಫಿಲ್ಮ್ಸ್​’ ಮತ್ತು ರಿಷಬ್​ ಶೆಟ್ಟಿ (Rishab Shetty) ಅವರು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಳ್ಳಲಾಗಿದೆ. ಇಬ್ಬರು ಸೆಲೆಬ್ರಿಟಿಗಳನ್ನು ಒಟ್ಟಿಗೆ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರ ದೇಶಾದ್ಯಂತ ಧೂಳೆಬ್ಬಿಸಿದೆ. ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದ್ದರೂ ಅನೇಕ ಕಡೆಗಳಲ್ಲಿ ಈಗಲೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ರಜನಿಕಾಂತ್​, ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಮಾತಾಡಿದ್ದಾಗಿದೆ. ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಚಿತ್ರದ ಹೆಸರು ಕೇಳಿ ಅಭಿಮಾನಿಗಳಿಗೆ ಥ್ರಿಲ್​ ಆಗಿದೆ.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಎಬಿ ಡಿವಿಲಿಯರ್ಸ್ ‘ಕಾಂತಾರ’ ನೋಡಿದ್ದಾರೋ ಇಲ್ಲವೋ ಎಂಬುದು ಖಚಿತ ಆಗಿಲ್ಲ. ಒಟ್ಟಿನಲ್ಲಿ ಅವರು ಪ್ರಮೋಷನ್​ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಪಂದ್ಯ. ನಿಜವಾದ 360ಯನ್ನು ಇಂದು ಭೇಟಿ ಮಾಡಿದ್ದೇನೆ. ನಮ್ಮ ಬೆಂಗಳೂರಿಗೆ ಸೂಪರ್​ ಹೀರೋ ಮರಳಿ ಬಂದಿದ್ದಾರೆ’ ಎಂದು ರಿಷಬ್​ ಶೆಟ್ಟಿ ಅವರು ಈ ವಿಡಿಯೋಗೆ ಕ್ಯಾಪ್ಷನ್​ ನೀಡಿದ್ದಾರೆ.

ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ರಿಷಬ್​ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಇಬ್ಬರೂ ಕೂಡ ಕ್ಲೈಮ್ಯಾಕ್ಸ್​ ತಜ್ಞರು. ಕೊನೆಯ 20 ನಿಮಿಷದಲ್ಲಿ ಸಖತ್​ ಥ್ರಿಲ್​ ನೀಡುತ್ತಾರೆ’ ಎಂದು ಫ್ಯಾನ್ಸ್​ ಹೊಗಳಿದ್ದಾರೆ. ಬೆಂಗಳೂರಿನಲ್ಲಿ ಎಬಿ ಡಿವಿಲಿಯರ್ಸ್ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಆರ್​ಸಿಬಿ ಪರವಾಗಿ 10 ಆವೃತ್ತಿಗಳಲ್ಲಿ ಐಪಿಎಲ್​ ಆಡಿರುವ ಅವರು, ಇಲ್ಲಿನ ಜನರ ಹೃದಯ ಗೆದ್ದಿದ್ದಾರೆ. ಆದರೆ 2021ರಲ್ಲಿ ಅವರು ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದಾಗ ಅಭಿಮಾನಿಗಳಿಗೆ ಬೇಸರ ಆಗಿತ್ತು.

ಈ ವರ್ಷದ ಐಪಿಲ್​ ಹರಾಜಿಗೂ ಮುನ್ನವೇ ಎಬಿ ಡಿವಿಲಿಯರ್ಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ‘ರಾಯಲ್​ ಚಾಲೆಂಜರ್ಸ್​ ಬೆಂಗಳೂರು’ ತಂಡ ಅದ್ದೂರಿಯಾಗಿ ಸ್ವಾಗತಿಸಿದೆ. ಆರ್​ಸಿಬಿಗೆ ಕೋಚ್​ ಆಗಿ ಅವರು ಕಾರ್ಯ ನಿರ್ವಹಿಸಬಹುದು ಎಂದು ಎಲ್ಲರೂ ಊಹಿಸಿದ್ದಾರೆ. ಈ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Fri, 4 November 22

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು