AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shankar Nag: ಸ್ಯಾಂಡಲ್​ವುಡ್​ ಸಾಧನೆಯನ್ನು ಹೆಮ್ಮೆಯಿಂದ ನೋಡ್ತಿರುವ ಶಂಕರ್​ ನಾಗ್; ಇದು ‘ಅಬ ಜಬ ದಬ’ ವಿಶೇಷ

Aba Jaba Daba | Shankar Nag Birthday: ‘ಅಬ ಜಬ ದಬ’ ಚಿತ್ರದಲ್ಲಿ ಹಲವು ವಿಶೇಷಗಳು ಇರಲಿವೆ. ಎಲ್ಲರ ನೆಚ್ಚಿನ ಶಂಕರ್ ನಾಗ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Shankar Nag: ಸ್ಯಾಂಡಲ್​ವುಡ್​ ಸಾಧನೆಯನ್ನು ಹೆಮ್ಮೆಯಿಂದ ನೋಡ್ತಿರುವ ಶಂಕರ್​ ನಾಗ್; ಇದು ‘ಅಬ ಜಬ ದಬ’ ವಿಶೇಷ
‘ಅಬ ಜಬ ದಬ’ ಚಿತ್ರದ ಪೋಸ್ಟರ್​
TV9 Web
| Edited By: |

Updated on: Nov 09, 2022 | 12:01 PM

Share

ನಟ ಶಂಕರ್​ ನಾಗ್ (Shankar Nag)​ ಅವರನ್ನು ಕನ್ನಡ ಚಿತ್ರರಂಗ ಎಂದಿಗೂ ಮರೆಯುವಂತಿಲ್ಲ. ಕಡಿಮೆ ಸಮಯದಲ್ಲೇ ಅವರು ಮಾಡಿದ ಸಾಧನೆ ಅಪಾರ. ಕರುನಾಡು ಮತ್ತು ಕನ್ನಡ ಚಿತ್ರರಂಗದ ಬಗ್ಗೆ ಅವರು ಕಂಡಿದ್ದು ಕನಸುಗಳಿಗೆ ಲೆಕ್ಕವಿಲ್ಲ. ಆ ಪೈಕಿ ಕೆಲವು ಕನಸುಗಳು ನನಸಾಗಿವೆ. ಸ್ಯಾಂಡಲ್​​ವುಡ್​ (Sandalwood) ಕೂಡ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಒಂದು ವೇಳೆ ಇಂದು ಶಂಕರ್​ ನಾಗ್​ ಅವರು ಇದ್ದಿದ್ದರೆ ಅವರು ಹೆಮ್ಮೆಯಿಂದ ಸ್ಯಾಂಡಲ್​ವುಡ್​ ಅನ್ನು ನೋಡುತ್ತಿದ್ದರು. ಆ ರೀತಿಯ ಕಲ್ಪನೆಯಲ್ಲಿ ‘ಅಬ ಜಬ ದಬ’ (Aba Jaba Daba) ಚಿತ್ರದ ಪೋಸ್ಟರ್​ ಮೂಡಿಬಂದಿದೆ. ಇಂದು (ನ.9) ಶಂಕರ್​ ನಾಗ್​ ಜನ್ಮದಿನ. ಆ ಪ್ರಯುಕ್ತ ಈ ವಿಶೇಷ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ‘ಅಬ ಜಬ ದಬ’ ಚಿತ್ರದಲ್ಲಿ ಶಂಕರ್​ ನಾಗ್​ ಕೂಡ ಕಾಣಿಸಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಚಿತ್ರತಂಡ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ.

ಶೀರ್ಷಿಕೆಯ ಕಾರಣದಿಂದಲೇ ‘ಅಬ ಜಬ ದಬ’ ಚಿತ್ರ ಗಮನ ಸೆಳೆಯುತ್ತಿದೆ. ಎಸ್. ರಾಮ್ ಪ್ರೊಡ್ಯೂಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಮಯೂರ ರಾಘವೇಂದ್ರ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೇಕಡ 80ರಷ್ಟು ಶೂಟಿಂಗ್​ ಮುಗಿದಿದೆ. ಇನ್ನು 2 ಹಾಡು ಹಾಗೂ ಒಂದು ಸಾಹಸ ದೃಶ್ಯವನ್ನು ಶೀಘ್ರದಲ್ಲೇ ಚಿತ್ರೀಕರಿಸಲಾಗುವುದು.

ಇದನ್ನೂ ಓದಿ
Image
Shankar Nag Birthday: 23ನೇ ವಯಸ್ಸಿಗೆ ಬಣ್ಣದ ಲೋಕದ ನಂಟು; ಶಂಕರ್ ನಾಗ್ ಬದುಕಿದ ರೀತಿಯೇ ವಿಸ್ಮಯ
Image
ಶಂಕರ್​ನಾಗ್ ನೆನೆದು ಕಣ್ಣೀರು ಹಾಕಿದ ‘ಕೆಜಿಎಫ್’ ಕಲಾವಿದ ಕೃಷ್ಣ ರಾವ್
Image
‘ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಶಂಕರ್ ನಾಗ್ ಆಗಲೇ ಆಲೋಚಿಸಿದ್ದರು’; ಮಾಸ್ಟರ್ ಮಂಜುನಾಥ್  
Image
Happy Birthday Shankar Nag: ಇಂದು ಶಂಕರ್ ನಾಗ್ ಜನ್ಮದಿನ; ಕನ್ನಡಿಗರ ಕಣ್ಮಣಿ ನೆನೆದ ಸೆಲೆಬ್ರಿಟಿಗಳು

‘ಅಬ ಜಬ ದಬ’ ಚಿತ್ರದಲ್ಲಿ ಹಲವು ವಿಶೇಷತೆಗಳು ಇರಲಿವೆ. ಎಲ್ಲರ ನೆಚ್ಚಿನ ಶಂಕರ್ ನಾಗ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅದು ಹೇಗೆ ಎಂಬುದು ಮಾತ್ರ ಇನ್ನೂ ಬಹಿರಂಗ ಆಗಿಲ್ಲ. ‘ಮುಂಬೈನ ಪ್ರಸಿದ್ಧ ತಂಡದೊಂದಿಗೆ ಕೆಲಸಗಳು ಪ್ರಾರಂಭ ಆಗಿದೆ. ಮುಂದಿನ ವರ್ಷ ನಮ್ಮ ಶಂಕರಣ್ಣನನ್ನು ತೆರೆ ಮೇಲೆ ನೋಡಿ ಆನಂಧಿಸಬಹುದು’ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಸಿನಿಮಾದಲ್ಲಿ ಪೃಥ್ವಿ ಅಂಬರ್​, ಅಂಕಿತಾ ಅಮರ್, ಸಂಗೀತಾ ಭಟ್​, ಊರ್ವಶಿ ಮುಂತಾದವರು ನಟಿಸುತ್ತಿದ್ದಾರೆ. ನಿರ್ದೇಶಕ ಮಯೂರ ರಾಘವೇಂದ್ರ ಕೂಡ ಒಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಅನಂತ ಕೃಷ್ಣ ಅವರು ಬಂಡವಾಳ ಹೂಡುತ್ತಿದ್ದಾರೆ. ಗಿರಿಧರ್ ದಿವಾನ್​ ಛಾಯಾಗ್ರಹಣ, ಸತೀಶ್​ ರಘುನಾಥನ್​ ಸಂಗೀತ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ