Shankar Nag: ಸ್ಯಾಂಡಲ್​ವುಡ್​ ಸಾಧನೆಯನ್ನು ಹೆಮ್ಮೆಯಿಂದ ನೋಡ್ತಿರುವ ಶಂಕರ್​ ನಾಗ್; ಇದು ‘ಅಬ ಜಬ ದಬ’ ವಿಶೇಷ

Aba Jaba Daba | Shankar Nag Birthday: ‘ಅಬ ಜಬ ದಬ’ ಚಿತ್ರದಲ್ಲಿ ಹಲವು ವಿಶೇಷಗಳು ಇರಲಿವೆ. ಎಲ್ಲರ ನೆಚ್ಚಿನ ಶಂಕರ್ ನಾಗ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Shankar Nag: ಸ್ಯಾಂಡಲ್​ವುಡ್​ ಸಾಧನೆಯನ್ನು ಹೆಮ್ಮೆಯಿಂದ ನೋಡ್ತಿರುವ ಶಂಕರ್​ ನಾಗ್; ಇದು ‘ಅಬ ಜಬ ದಬ’ ವಿಶೇಷ
‘ಅಬ ಜಬ ದಬ’ ಚಿತ್ರದ ಪೋಸ್ಟರ್​
Follow us
| Updated By: ಮದನ್​ ಕುಮಾರ್​

Updated on: Nov 09, 2022 | 12:01 PM

ನಟ ಶಂಕರ್​ ನಾಗ್ (Shankar Nag)​ ಅವರನ್ನು ಕನ್ನಡ ಚಿತ್ರರಂಗ ಎಂದಿಗೂ ಮರೆಯುವಂತಿಲ್ಲ. ಕಡಿಮೆ ಸಮಯದಲ್ಲೇ ಅವರು ಮಾಡಿದ ಸಾಧನೆ ಅಪಾರ. ಕರುನಾಡು ಮತ್ತು ಕನ್ನಡ ಚಿತ್ರರಂಗದ ಬಗ್ಗೆ ಅವರು ಕಂಡಿದ್ದು ಕನಸುಗಳಿಗೆ ಲೆಕ್ಕವಿಲ್ಲ. ಆ ಪೈಕಿ ಕೆಲವು ಕನಸುಗಳು ನನಸಾಗಿವೆ. ಸ್ಯಾಂಡಲ್​​ವುಡ್​ (Sandalwood) ಕೂಡ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಒಂದು ವೇಳೆ ಇಂದು ಶಂಕರ್​ ನಾಗ್​ ಅವರು ಇದ್ದಿದ್ದರೆ ಅವರು ಹೆಮ್ಮೆಯಿಂದ ಸ್ಯಾಂಡಲ್​ವುಡ್​ ಅನ್ನು ನೋಡುತ್ತಿದ್ದರು. ಆ ರೀತಿಯ ಕಲ್ಪನೆಯಲ್ಲಿ ‘ಅಬ ಜಬ ದಬ’ (Aba Jaba Daba) ಚಿತ್ರದ ಪೋಸ್ಟರ್​ ಮೂಡಿಬಂದಿದೆ. ಇಂದು (ನ.9) ಶಂಕರ್​ ನಾಗ್​ ಜನ್ಮದಿನ. ಆ ಪ್ರಯುಕ್ತ ಈ ವಿಶೇಷ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ‘ಅಬ ಜಬ ದಬ’ ಚಿತ್ರದಲ್ಲಿ ಶಂಕರ್​ ನಾಗ್​ ಕೂಡ ಕಾಣಿಸಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಚಿತ್ರತಂಡ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ.

ಶೀರ್ಷಿಕೆಯ ಕಾರಣದಿಂದಲೇ ‘ಅಬ ಜಬ ದಬ’ ಚಿತ್ರ ಗಮನ ಸೆಳೆಯುತ್ತಿದೆ. ಎಸ್. ರಾಮ್ ಪ್ರೊಡ್ಯೂಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಮಯೂರ ರಾಘವೇಂದ್ರ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೇಕಡ 80ರಷ್ಟು ಶೂಟಿಂಗ್​ ಮುಗಿದಿದೆ. ಇನ್ನು 2 ಹಾಡು ಹಾಗೂ ಒಂದು ಸಾಹಸ ದೃಶ್ಯವನ್ನು ಶೀಘ್ರದಲ್ಲೇ ಚಿತ್ರೀಕರಿಸಲಾಗುವುದು.

ಇದನ್ನೂ ಓದಿ
Image
Shankar Nag Birthday: 23ನೇ ವಯಸ್ಸಿಗೆ ಬಣ್ಣದ ಲೋಕದ ನಂಟು; ಶಂಕರ್ ನಾಗ್ ಬದುಕಿದ ರೀತಿಯೇ ವಿಸ್ಮಯ
Image
ಶಂಕರ್​ನಾಗ್ ನೆನೆದು ಕಣ್ಣೀರು ಹಾಕಿದ ‘ಕೆಜಿಎಫ್’ ಕಲಾವಿದ ಕೃಷ್ಣ ರಾವ್
Image
‘ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಶಂಕರ್ ನಾಗ್ ಆಗಲೇ ಆಲೋಚಿಸಿದ್ದರು’; ಮಾಸ್ಟರ್ ಮಂಜುನಾಥ್  
Image
Happy Birthday Shankar Nag: ಇಂದು ಶಂಕರ್ ನಾಗ್ ಜನ್ಮದಿನ; ಕನ್ನಡಿಗರ ಕಣ್ಮಣಿ ನೆನೆದ ಸೆಲೆಬ್ರಿಟಿಗಳು

‘ಅಬ ಜಬ ದಬ’ ಚಿತ್ರದಲ್ಲಿ ಹಲವು ವಿಶೇಷತೆಗಳು ಇರಲಿವೆ. ಎಲ್ಲರ ನೆಚ್ಚಿನ ಶಂಕರ್ ನಾಗ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅದು ಹೇಗೆ ಎಂಬುದು ಮಾತ್ರ ಇನ್ನೂ ಬಹಿರಂಗ ಆಗಿಲ್ಲ. ‘ಮುಂಬೈನ ಪ್ರಸಿದ್ಧ ತಂಡದೊಂದಿಗೆ ಕೆಲಸಗಳು ಪ್ರಾರಂಭ ಆಗಿದೆ. ಮುಂದಿನ ವರ್ಷ ನಮ್ಮ ಶಂಕರಣ್ಣನನ್ನು ತೆರೆ ಮೇಲೆ ನೋಡಿ ಆನಂಧಿಸಬಹುದು’ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಸಿನಿಮಾದಲ್ಲಿ ಪೃಥ್ವಿ ಅಂಬರ್​, ಅಂಕಿತಾ ಅಮರ್, ಸಂಗೀತಾ ಭಟ್​, ಊರ್ವಶಿ ಮುಂತಾದವರು ನಟಿಸುತ್ತಿದ್ದಾರೆ. ನಿರ್ದೇಶಕ ಮಯೂರ ರಾಘವೇಂದ್ರ ಕೂಡ ಒಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಅನಂತ ಕೃಷ್ಣ ಅವರು ಬಂಡವಾಳ ಹೂಡುತ್ತಿದ್ದಾರೆ. ಗಿರಿಧರ್ ದಿವಾನ್​ ಛಾಯಾಗ್ರಹಣ, ಸತೀಶ್​ ರಘುನಾಥನ್​ ಸಂಗೀತ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ