AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿನಾಥ್ ಪುತ್ರನ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಟೀಸರ್​ ಬಿಡುಗಡೆ

ಅಭಿಮನ್ಯು ಕಾಶಿನಾಥ್​ ನಟನೆಯ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಕಿರಣ್ ಎಸ್. ಸೂರ್ಯ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ತಯಾರಿ ನಡೆಯುತ್ತಿದೆ. ಜತಿನ್ ಪಟೇಲ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕಾಶಿನಾಥ್ ಪುತ್ರನ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಟೀಸರ್​ ಬಿಡುಗಡೆ
ಅಭಿಮನ್ಯು ಕಾಶಿನಾಥ್
ಮದನ್​ ಕುಮಾರ್​
|

Updated on: Sep 10, 2024 | 9:52 PM

Share

ಕಾಶಿನಾಥ್ ಅವರ ಪುತ್ರ ಅಭಿಮನ್ಯು ಹೀರೋ ಆಗುತ್ತಿರುವುದು ಗೊತ್ತೇ ಇದೆ. ಅವರು ನಟಿಸಿರುವ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಕಾಶಿನಾಥ್​ ಅವರು ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈಗ ಈ ಸಿನಿಮಾದ ಟೀಸರ್​ ಬಿಡುಗಡೆ ಆಗಿದೆ. ಇದರಲ್ಲಿ ಅವರ ಗೆಟಪ್​ ಡಿಫರೆಂಟ್​ ಆಗಿದೆ. ಇದೊಂದು ಥ್ರಿಲ್ಲರ್ ಕಥೆಯನ್ನು ಹೊಂದಿರುವ ಸಿನಿಮಾ ಎಂಬ ಸುಳಿವು ಟೀಸರ್​ ಮೂಲಕ ಸಿಕ್ಕಿದೆ. ಈ ಪ್ರಕಾರದ ಸಿನಿಮಾವನ್ನು ಇಷ್ಟಪಡುವ ಪ್ರೇಕ್ಷಕರಿಗೆ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್​ನಿಂದ ಕುತೂಹಲ ಹೆಚ್ಚಾಗಿದೆ.

‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾಗೆ ಕಿರಣ್ ಎಸ್. ಸೂರ್ಯ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಹಲವು ವರ್ಷಗಳ ಕಾಲ ಸಿನಿಮಾ ರಂಗದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಈಗ ಅವರು ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ.

ಇದೊಂದು ಲವ್ ಕಂ ಥ್ರಿಲ್ಲರ್ ಶೈಲಿಯ ಸಿನಿಮಾ. ಆದರೆ ಕಥೆ ಅಷ್ಟಕೇ ಸೀಮಿತ ಅಲ್ಲವಂತೆ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ ಆದರೂ ಇದುವರೆಗೆ ನೋಡಿದ್ದು ನಿಜವೋ ಅಥವಾ ಸುಳ್ಳೋ ಎಂಬ ಪ್ರಶ್ನೆಯನ್ನು ಹುಟ್ಟುಹಾಕುವ ರೀತಿಯಲ್ಲಿ ಸಿನಿಮಾ ಸಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ಅಭಿಮನ್ಯು ಕಾಶಿನಾಥ್ ಅವರಿಗೆ ಜೋಡಿಯಾಗಿ ನಟಿ ಸ್ಫೂರ್ತಿ ಉಡಿಮನೆ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಅಭಿಮನ್ಯು ಕಾಶಿನಾಥ್, ಸ್ಫೂರ್ತಿ ಉಡಿಮನೆ ಮಾತ್ರವಲ್ಲದೇ ವಿಜಯಶ್ರೀ ಕಲಬುರ್ಗಿ, ಬಲರಾಜ್ ವಾಡಿ, ಅಯಾಂಕ್, ಶೋಭನ್, ರಿನಿ ಬೋಪಣ್ಣ, ರವಿತೇಜ, ಪ್ರದೀಪ್, ಕಿಶೋರ್, ಪ್ರಿಯಾ, ಅಶ್ವಿನಿ ರಾವ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಣವ್ ರಾವ್ ಸಂಗೀತ ನಿರ್ದೇಶನ ಈ ಸಿನಿಮಾಗಿದೆ. ಸತ್ಯ ರಾಮ್ ಛಾಯಾಗ್ರಹಣ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಸದ್ಯ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾಗೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದೆ.

ಕಿಚ್ಚ ಸುದೀಪ್ ಅವರು ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾದ ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ವಾಸುಕಿ ವೈಭವ್, ಶ್ರೀಲಕ್ಷ್ಮಿ ಒಂದೊಂದು ಗೀತೆಗಳನ್ನು ಹಾಡಿದ್ದಾರೆ. ಎರಡು ಹಾಡುಗಳಿಗೆ ನಿರ್ದೇಶಕ ಕಿರಣ್ ಎಸ್. ಸೂರ್ಯ ಸಾಹಿತ್ಯ ಬರೆದಿದ್ದಾರೆ. ‘ಸುದರ್ಶನ ಆರ್ಟ್ಸ್’ ಬ್ಯಾನರ್​ ಮೂಲಕ ಜತಿನ್ ಪಟೇಲ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಕಿರಣ್ ಎಸ್. ಸೂರ್ಯ ಅವರದ್ದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ