AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್​ ಡೇ ಸನಿಹದಲ್ಲಿ ‘ನಗುವಿನ ಹೂಗಳ ಮೇಲೆ’ ಒಂದು ಡುಯೆಟ್​ ಸಾಂಗ್​

ಅಭಿದಾಸ್ ಹಾಗೂ ಶರಣ್ಯಾ ಶೆಟ್ಟಿ ಅವರು ‘ನಗುವಿನ ಹೂಗಳ ಮೇಲೆ’ ಸಿನಿಮಾದಲ್ಲಿ ನಾಯಕ-ನಾಯಕಿಯರಾಗಿ ಅಭಿಸಿಯಿದ್ದಾರೆ. ಇನ್ನೇನು ವ್ಯಾಲೆಂಟೈನ್ಸ್​ ಡೇ ಹತ್ತಿರದಲ್ಲಿದೆ. ಈ ಸಮಯದಲ್ಲಿ ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ಈ ಡ್ಯುಯೆಟ್​ ಹಾಡು ಎಲ್ಲ ಪ್ರೇಮಿಗಳ ಫೇವರಿಟ್ ಆಗುವ ಲಕ್ಷಣ ತೋರಿಸಿದೆ. ‘ಜೀ ಮ್ಯೂಸಿಕ್​’ ಮೂಲಕ ರಿಲೀಸ್​ ಆದ ಹೊಸ ಹಾಡಿನ ಬಗ್ಗೆ ಇಲ್ಲಿವೆ ವಿವರ..

ವ್ಯಾಲೆಂಟೈನ್ಸ್​ ಡೇ ಸನಿಹದಲ್ಲಿ ‘ನಗುವಿನ ಹೂಗಳ ಮೇಲೆ’ ಒಂದು ಡುಯೆಟ್​ ಸಾಂಗ್​
ಅಭಿದಾಸ್​, ಶರಣ್ಯ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Feb 08, 2024 | 6:23 PM

ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ನಗುವಿನ ಹೂಗಳ ಮೇಲೆ’ (Naguvina Hoogala Mele) ಚಿತ್ರ ಫೆಬ್ರವರಿ 9ರಂದು ಬಿಡುಗಡೆ ಆಗಲಿದೆ. ಬಿಡುಗಡೆಯ ಹೊಸ್ತಿಲಲ್ಲೇ ಪ್ರೇಕ್ಷಕರ ಕೌತಕ ಮೂಡಿಸು ಸಲುವಾಗಿ ಈ ಸಿನಿಮಾದಿಂದ ಹೊಸ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ‘ನಗುವಿನ ಹೂಗಳ ಮೇಲೆ’ ಒಂದಷ್ಟು ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಗಳನ್ನು ಹೆಚ್ಚಿಸುವ ಸಲುವಾಗಿ ಈ ಹಾಡು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಪ್ರೀತಿ-ಪ್ರೇಮದ ಹಲವು ಮಜಲುಗಳು ಇವೆ. ಅವುಗಳಲ್ಲಿ ಒಂದು ಭಾವದ ಅಭಿವ್ಯಕ್ತಿಯ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ.

ಲವ್ ಪ್ರಾಣ್​ ಮೆಹ್ತಾ ಸಂಗೀತ ನಿರ್ದೇಶನ ಮಾಡಿರುವ ‘ಮುದ್ದು ಬೇಬಿ ಲವ್ ಯೂ ಬೇಬಿ..’ ಎಂದು ಆರಂಭ ಆಗುವ ಈ ಗೀತೆ ‘ಜೀ ಮ್ಯೂಸಿಕ್​ ಸೌತ್​’ ಮೂಲಕ ಬಿಡುಗಡೆ ಆಗಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಠಸಿರಿಯಲ್ಲಿ ಮುದ್ದಾಗಿ ರೂಪುಗೊಂಡಿರುವ ಈ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ‘ಮುದ್ದು ಬೇಬಿ..’ ಹಾಡು ಬಹುಬೇಗನೆ ಕೇಳುಗರನ್ನು ಸೆಳೆಯುತ್ತಿದೆ.

ಇನ್ನೇನು ವ್ಯಾಲೆಂಟೈನ್ಸ್​ ಡೇ ಹತ್ತಿರದಲ್ಲಿದೆ. ಈ ಸಮಯದಲ್ಲಿ ಈ ಡ್ಯುಯೆಟ್​ ಹಾಡು ಎಲ್ಲ ಪ್ರೇಮಿಗಳ ಫೇವರಿಟ್ ಆಗುವ ಲಕ್ಷಣ ತೋರಿಸಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಸಣ್ಣ ಸಣ್ಣ ವಿಚಾರಗಳನ್ನೂ ಗಮನದಲ್ಲಿ ಇಟ್ಟುಕೊಂಡು ಈ ಸಿನಿಮಾವನ್ನು ನಿರ್ದೇಶಿಸಿದ್ದಾರಂತೆ. ಅದರಲ್ಲಿಯೂ ಕಥೆಯ ಓಘಕ್ಕೆ ತಕ್ಕಂತಹ ಹಾಡುಗಳನ್ನು ರೂಪಿಸಲು ಅವರು ಪ್ರಯತ್ನಿಸಿದ್ದಾರೆ. ಅದರ ಭಾಗವಾಗಿ ಪಂಜಾಬ್ ಮೂಲದ ಫೇಮಸ್​ ಸಂಗೀತ ನಿರ್ದೇಶಕ ಲವ್ ಪ್ರಾಣ್​ ಮೆಹ್ತಾ ಮಾತ್ರವಲ್ಲದೇ, ಹಲವು ರಾಜ್ಯಗಳ ಗಾಯಕರನ್ನೂ ಒಂದೆಡೆ ಸೇರಿಸಿದ್ದಾರೆ.

ಇದನ್ನೂ ಓದಿ: ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ‘ವಿಷ್ಣುಪ್ರಿಯ’ ಚಿತ್ರದ ರೊಮ್ಯಾಂಟಿಕ್ ಸಾಂಗ್​ ನೋಡಿ..

ನಿರ್ದೇಶಕರ ಪರಿಶ್ರಮ, ಕನಸಿನ ಪ್ರತಿಫಲವಾಗಿ ‘ನಗುವಿನ ಹೂಗಳ ಮೇಲೆ’ ಚಿತ್ರದ ಒಂದೊಂದು ಹಾಡುಗಳೂ ಒಂದೊಂದು ವಿಶೇಷತೆಯನ್ನು ಹೊತ್ತು ಬಂದಿವೆ. ಇದೀಗ ಬಿಡುಗಡೆ ಆಗಿರುವ ಹಾಡಿನಲ್ಲಿಯೂ ಆ ರಿತಿಯ ಛಾಯೆ ಕಾಣಿಸಿದೆ. ಇದು ಪರಿಶುದ್ಧ ಪ್ರೇಮ ಕಥನದ ಭೂಮಿಕೆಯಲ್ಲಿ ತೆರೆದುಕೊಳ್ಳುವ ಬದುಕಿಗೆ ಹತ್ತಿರವಾದ ಸಿನಿಮಾ ಆಗಲಿದೆ ಎಂದು ತಂಡ ಭರವಸೆ ಇಟ್ಟುಕೊಂಡಿದೆ. ಚಂದನ್ ಪಿ. ಸಂಕಲನ ಹಾಗೂ ಟೈಗರ್ ಶಿವು ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

‘ಮುದ್ದು ಬೇಬಿ ಲವ್ ಯೂ ಬೇಬಿ..’ ಹಾಡು:

‘ನಗುವಿನ ಹೂಗಳ ಮೇಲೆ’ ಚಿತ್ರವನ್ನು ಟಾಲಿವುಡ್​ನ ಖ್ಯಾತ ನಿರ್ಮಾಪಕ ಕೆ.ಕೆ. ರಾಧಾ ಮೋಹನ್ ಅವರು ‘ಶ್ರೀ ಸತ್ಯಸಾಯಿ ಆರ್ಟ್ಸ್​’ ಬ್ಯಾನರ್​ ಮೂಲಕ ನಿರ್ಮಾಣ ಮಾಡಿದ್ದಾರೆ. ಅಭಿದಾಸ್ ಹಾಗೂ ಶರಣ್ಯಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ನಾಯಕ-ನಾಯಕಿಯರಾಗಿ ಅಭಿಸಿಯಿದ್ದಾರೆ. ಅಭಿಷೇಕ್ ಐಯಂಗಾರ್, ಬಲ ರಾಜವಾಡಿ, ಆಶಾ ಸುಜಯ್, ಹರ್ಷಿತ್ ಗೌಡ, ಗಿರೀಶ್ ನಂಜಪ್ಪ, ಹರ್ಷ ಗೋ ಭಟ್, ಹರೀಶ್ ಚೌಹಾಣ್ ಮುಂತಾದವರ ನಟಿಸಿದ್ದಾರೆ. ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ ಈ ಸಿಮಾಗಿದೆ. ಅಭಿಷೇಕ್ ಐಯಂಗಾರ್ ಸಂಭಾಷಣೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ