AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಯಮ ಉಲ್ಲಂಘನೆ ಆಗಿದೆ, ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಿ’; ಡಿಸಿಗೆ ಅರಣ್ಯಾಧಿಕಾರಿ ಪತ್ರ

ಅರಣ್ಯಾಧಿಕಾರಿಯೊಬ್ಬರು ಅಭಿಮಾನ ಸ್ಟುಡಿಯೋದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಡಿಸಿಗೆ ಪತ್ರ ಬರೆದಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿಯನ್ನು ಕೆಡವಿದ ಬಳಿಕ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿದ್ದಾರೆ. ಭೂಮಿ ಲೀಸ್ ನಿಯಮ ಉಲ್ಲಂಘನೆ ಹಾಗೂ ಸ್ಟುಡಿಯೋ ಅಭಿವೃದ್ಧಿಗೆ ಬಳಸುವುದಾಗಿ ಹೇಳಿದ ಹಣದ ಬಳಕೆ ಕುರಿತು ಪ್ರಶ್ನೆ ಎದ್ದಿದೆ.

‘ನಿಯಮ ಉಲ್ಲಂಘನೆ ಆಗಿದೆ, ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಿ’; ಡಿಸಿಗೆ ಅರಣ್ಯಾಧಿಕಾರಿ ಪತ್ರ
ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
|

Updated on: Aug 29, 2025 | 1:15 PM

Share

ಅಭಿಮಾನ್ ಸ್ಟುಡಿಯೋದಲ್ಲಿರುವ (Abhiman Studio) ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ ಅಧಿಕಾರಿ ಪತ್ರ ಬರೆದಿದ್ದಾರೆ. ಈ ಪತ್ರ ವೈರಲ್ ಆಗಿದೆ. ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ.

ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ನಿಯಮ ಉಲ್ಲಂಘನೆ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ  20 ಎಕರೆ ಭೂಮಿಯನ್ನು 20 ವರ್ಷ ಲೀಸ್​​ಗೆ ನೀಡಾಗಿತ್ತು. ನಂತರ ಲೀಸ್ ಅವಧಿ ವಿಸ್ತರಣೆ ಮಾಡಿಕೊಳ್ಳಲಾಯಿತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಮಕ್ಕಳಾದ ಶ್ರೀನಿವಾಸ್ ಹಾಗೂ ಗಣೇಶ್ ಜಿಲ್ಲಾಧಿಕಾರಿಗಳ ಬಳಿ  10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಲಾಯಿತು ಎನ್ನಲಾಗಿದೆ.  ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳೋದಾಗಿ ಅವರು ಸರ್ಕಾರಕ್ಕೆ ಹೇಳಿದ್ದರು.

ಇದನ್ನೂ ಓದಿ
Image
ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ
Image
‘ಯಶ್ ಬಂದಾಗ ಇಡೀ ಸೆಟ್ ಸೈಲೆಂಟ್ ಆಗುತ್ತೆ’; ಬಾಲಿವುಡ್ ನಟ ಅಕ್ಷಯ್​ ಹೇಳಿಕೆ
Image
ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಆದರೆ, ಈವರೆಗೆ ಸ್ಟುಡಿಯೋ ಯಥಾ ಸ್ಥಿತಿಯಲ್ಲೇ ಇದೆ. ಈವರೆಗೆ ಇದರ ಅಭಿವೃದ್ಧಿ ಆಗಿಲ್ಲ. ಈಗ ಬಾಲಕೃಷ್ಣ ಮೊಮ್ಮಗ ಕಾರ್ತಿಕ್ ಅವರು ಈ ಜಮೀನನ್ನು ಮಾರಲು ಪ್ಲ್ಯಾನ್ ಮಾಡಿದ್ದರು. 1 ಎಕರೆಗೆ 14 ಕೋಟಿ ರೂಪಾಯಿಯಂತೆ ಮಾರಲು ಪ್ಲ್ಯಾನ್ ನಡೆದಿತ್ತು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದೆ. ಹೀಗಾಗಿ, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.

ಇದನ್ನೂ ಓದಿ: ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಜಕ್ಕೂ ಆ ಜಾಗ ಯಾರದ್ದು? ಅದರ ಇತಿಹಾಸವೇನು?

ಸದ್ಯ ವಿಷ್ಣುವರ್ಧನ್ ಅಭಿಮಾನಿಗಳು ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಕೋರುತ್ತಿದ್ದಾರೆ. ವಿಷ್ಣುವರ್ಧನ್ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಪ್ಲ್ಯಾನ್​ನಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ