AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಕಾಲಿವುಡ್​ ಕದ ತಟ್ಟಿದ ಕನ್ನಡದ ನಟಿ ತಾನ್ಯಾ ಹೋಪ್​

 ತಮಿಳು ನಟ ಶಿವ ಅವರು ನಿರ್ದೇಶಕ ಪೊನ್​ ಕುಮಾರನ್​ ಜತೆ ಕೈ ಜೋಡಿಸುತ್ತಿದ್ದಾರೆ. ಪೊನ್​ ಕುಮಾರನ್​ ತಮಿಳು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಶಿವ ಜತೆ ಜೀವಾ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮತ್ತೊಮ್ಮೆ ಕಾಲಿವುಡ್​ ಕದ ತಟ್ಟಿದ ಕನ್ನಡದ ನಟಿ ತಾನ್ಯಾ ಹೋಪ್​
ತಾನ್ಯಾ ಹೋಪ್
TV9 Web
| Edited By: |

Updated on: Oct 09, 2021 | 5:53 PM

Share

ಕನ್ನಡದ ನಟಿ ತಾನ್ಯಾ ಹೋಪ್​ಗೆ ಕಾಲಿವುಡ್​ನಲ್ಲೂ ದೊಡ್ಡ ಬೇಡಿಕೆ ಇದೆ. ತೆಲುಗು ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ಕನ್ನಡದಲ್ಲಿ ‘ಯಜಮಾನ’, ‘ಅಮರ್​’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ಮತ್ತೆ ತಮಿಳು ಚಿತ್ರರಂಗದ ಕದ ತಟ್ಟೋಕೆ ರೆಡಿ ಆಗಿದೆ. ಅವರಿಗೆ ಕಾಲಿವುಡ್​ನಿಂದ ಆಫರ್ ಒಂದು ಬಂದಿದೆ.

ತಮಿಳು ನಟ ಶಿವ ಅವರು ನಿರ್ದೇಶಕ ಪೊನ್​ ಕುಮಾರನ್​ ಜತೆ ಕೈ ಜೋಡಿಸುತ್ತಿದ್ದಾರೆ. ಪೊನ್​ ಕುಮಾರನ್​ ತಮಿಳು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಶಿವ ಜತೆ ಜೀವಾ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜಾಗ್ವಾರ್ ಸ್ಟುಡಿಯೋಸ್​ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾ ಮುಂದಿನ ತಿಂಗಳು ಸೆಟ್ಟೇರಲಿದೆ. ಈಗ ಈ ಸಿನಿಮಾ ತಂಡಕ್ಕೆ ತಾನ್ಯಾ ಕೂಡ ಸೇರಿಕೊಂಡಿದ್ದಾರೆ.

ಪಾಯಲ್​ ರಜಪೂತ್​ ಮತ್ತು ತಾನ್ಯಾ ಹೋಪ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಾನ್ಯಾ ಅವರು ಕನ್ನಡದಲ್ಲಿ ಹೆಸರು ಮಾಡಿದ್ದಾರೆ. ಕನ್ನಡದ ‘ಹೋಮ್​ ಮಿನಿಸ್ಟರ್​’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈಗ ಅವರು ಈ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನು, ಪಾಯಲ್​ ರಜಪೂತ್​ ‘ಹೆಡ್​ ಬುಷ್​’ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೂ ಕಾಲಿಡುತ್ತಿದ್ದಾರೆ.

ಈ ಸಿನಿಮಾ ಮೂಲತಃ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ. ನಿರ್ದೇಶಕರಿಗೆ ಕನ್ನಡ ಚಿತ್ರರಂಗದ ಜತೆ ಒಳ್ಳೆಯ ನಂಟು ಇರುವುದರಿಂದ ಅವರು ಈ ಸಿನಿಮಾವನ್ನು ಕನ್ನಡದಲ್ಲೂ ರಿಲೀಸ್​ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಸಿನಿಮಾದ ಸಂಪೂರ್ಣ ಕಥೆ ಮಾರಿಷಿಯಸ್​ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. ಇದಕ್ಕೆ ಚಿತ್ರತಂಡದಿಂದ ಉತ್ತರ ಸಿಗಬೇಕಿದೆ.

ತಾನ್ಯಾ ಹಾಗೂ ಪಾಯಲ್ ಈ ಮೊದಲು ಒಟ್ಟಿಗೆ ನಟಿಸಿದ ಅನುಭವ ಹೊಂದಿದ್ದಾರೆ. ರವಿತೇಜ ನಟನೆಯ ‘ಡಿಸ್ಕೋ ರಾಜ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗುತ್ತಿದ್ದಾರೆ ಅನ್ನೋದು ವಿಶೇಷ.

ಇದನ್ನೂ ಓದಿ: ‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ನಂಬ್ತೀರೋ, ಬಿಡ್ತೀರೋ! ಒಂಬತ್ತು ವರ್ಷದ ಈ ಯೂಟ್ಯೂಬರ್​ ಗಳಿಕೆ ₹ 217 ಕೋಟಿ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​