AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಟ್ರೋ ಶೈಲಿಯಲ್ಲಿ ಬಂದ ಅಭಿಷೇಕ್​-ಅವಿವ; ಅಭಿಮಾನಿಗಳಿಗೆ ಅಂಬರೀಷ್​ ನೆನಪಿಗೆ ಬಂದ್ರು

Abhishek Ambareesh And Aviva Bidapa: ಕೆಆರ್​ಜಿ ಕನೆಕ್ಟ್ಸ್​ ಹೊಸ ರೀಲ್ಸ್ ಬಿಡುಗಡೆ ಮಾಡಿದೆ. ಈ ರೀಲ್ಸ್​ನಲ್ಲಿ ಅಭಿಷೇಕ್ ಹಾಗೂ ಅವಿವ ಅವರು ಅಂಬರೀಷ್ ಅವರ ಹಳೆಯ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ರೆಟ್ರೋ ಶೈಲಿಯಲ್ಲಿ ಬಂದ ಅಭಿಷೇಕ್​-ಅವಿವ; ಅಭಿಮಾನಿಗಳಿಗೆ ಅಂಬರೀಷ್​ ನೆನಪಿಗೆ ಬಂದ್ರು
Abhishek Ambareesh
ರಾಜೇಶ್ ದುಗ್ಗುಮನೆ
|

Updated on: May 29, 2023 | 1:22 PM

Share

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವ ಬಿಡಪ ಶೀಘ್ರದಲ್ಲೇ ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆಯಾ ಆಮಂತ್ರಣ ಪತ್ರ ವೈರಲ್ ಆಗಿದೆ. ಇಂದು (ಮೇ 29) ಅಂಬರೀಷ್ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಂಬರೀಷ್ ಅವರ ಸಮಾಧಿಗೆ ಆಮಂತ್ರಣ ಪತ್ರ ಇಟ್ಟು ಪೂಜೆ ಸಲ್ಲಿಕೆ ಮಾಡಲಾಗಿದೆ. ಜೂನ್​ 5ರಂದು ವಿವಾಹ ಕಾರ್ಯ ನಡೆಯಲಿದ್ದು, ಜೂನ್ 7ರಂದು ಆರತಕ್ಷತೆ ನಡೆಯಲಿದೆ. ಈಗ ಅಭಿಷೇಕ್ ಅಂಬರೀಷ್ ಹಾಗೂ ಅವಿವ ಅವರು ರೆಟ್ರೋ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅಭಿಷೇಕ್ ಅವರನ್ನು ನೋಡಿದ ಅನೇಕರಿಗೆ ಅಂಬಿಯ ನೆನಪಾಗಿದೆ.

ಕೆಆರ್​ಜಿ ಕನೆಕ್ಟ್ಸ್​ ಹೊಸ ರೀಲ್ಸ್ ಬಿಡುಗಡೆ ಮಾಡಿದೆ. ಈ ರೀಲ್ಸ್​ನಲ್ಲಿ ಅಭಿಷೇಕ್ ಹಾಗೂ ಅವಿವ ಅವರು ಅಂಬರೀಷ್ ಅವರ ಹಳೆಯ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ ಕೊಡಲೇನು..’, ‘ಚಳಿ ಚಳಿ ತಾಳೆನು ಈ ಚಳಿಯ..’, ‘ಮಂಡ್ಯದ ಗಂಡು..’ ಹಾಡುಗಳಿಗೆ ಅವಿವ ಹಾಗೂ ಅಭಿಷೇಕ್ ಡ್ಯಾನ್ಸ್ ಮಾಡಿದ್ದಾರೆ. ಅಭಿಷೇಕ್ ಅವರನ್ನು ನೋಡಿದ ಅನೇಕರಿಗೆ ಅಂಬರೀಷ್ ನೆನಪಾಗಿದೆ.

‘ಸ್ಯಾಂಡಲ್​ವುಡ್​ನ ರೆಬೆಲ್ ಸ್ಟಾರ್, ನಮ್ಮೆಲ್ಲರ ಪ್ರೀತಿಯ ಡಾ. ಅಂಬರೀಷ್ ಅವರ ಹುಟ್ಟುಹಬ್ಬದ ಸ್ಮರಣೆಯಲ್ಲಿ ಒಂದು ವಿಶೇಷವಾದ tribute. ಅಭಿಷೇಕ್ ಅಂಬರೀಷ್​ ಹಾಗೂ ಅವಿವ ಬಿಡಪ ಅವರಿಗೆ ಹೃದಯ ಪೂರ್ವಕ ಧನ್ಯವಾದಗಳು’ ಎಂದು ಕೆಆರ್​ಜಿ ಕನೆಕ್ಟ್ಸ್ ವಿಡಿಯೋ ಹಂಚಿಕೊಂಡು ಅಡಿಬರಹ ನೀಡಿದೆ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​ನ ಮದುವೆ ಆಗ್ತಿರೋ ಈ ಅವಿವ ಬಿಡಪ ಯಾರು? ಇಲ್ಲಿದೆ ಮಾಹಿತಿ

View this post on Instagram

A post shared by KRG Connects (@krg_connects)

ಸದ್ಯ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ಕೆಲಸಗಳಲ್ಲಿ ಅಭಿಷೇಕ್ ಅಂಬರೀಷ್ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅಭಿಷೇಕ್​ಗೆ ಜೊತೆಯಾಗಿ ರಚಿತಾ ರಾಮ್, ಪ್ರಿಯಾಂಕಾ ಕಾಣಿಸಿಕೊಳ್ಳುತ್ತಿದ್ದಾರೆ. ದುನಿಯಾ ಸೂರಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದ ಕೆಲಸಗಳಲ್ಲಿ ಅಭಿ ತೊಡಗಿಕೊಂಡಿದ್ದಾರೆ.

ಮದುವೆ ಬಗ್ಗೆ ಮಾಹಿತಿ..

ಜೂನ್​ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ