AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh Reception: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಆರತಕ್ಷತೆಯ ಅದ್ದೂರಿ ವೇದಿಕೆ; ಈ ಡೆಕೋರೇಷನ್​ನ ವಿಶೇಷತೆ ಏನು ಗೊತ್ತಾ?

Abhishek Ambareesh Aviva Bidapa Reception: ಭಾರತದಲ್ಲೇ ಮೊದಲ ಬಾರಿಗೆ ಈ ರೀತಿ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ಈ ಪರಿಕರಗಳನ್ನು ತರಿಸಲಾಗಿದೆ. ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ ವೇದಿಕೆ ಸಖತ್​ ಆಕರ್ಷಕವಾಗಿದೆ.

Abhishek Ambareesh Reception: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಆರತಕ್ಷತೆಯ ಅದ್ದೂರಿ ವೇದಿಕೆ; ಈ ಡೆಕೋರೇಷನ್​ನ ವಿಶೇಷತೆ ಏನು ಗೊತ್ತಾ?
ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ರಿಸೆಪ್ಷನ್​ ವೇದಿಕೆ
ಮದನ್​ ಕುಮಾರ್​
|

Updated on:Jun 07, 2023 | 6:48 PM

Share

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಜೂನ್​ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳತಿ ಅವಿವಾ ಬಿಡಪ (Aviva Bidapa) ಜೊತೆ ಅವರ ವಿವಾಹ ನೆರವೇರಿತು. ಇಂದು (ಜೂನ್​ 7) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ನೆರವೇರಿಸಲಾಗುತ್ತಿದೆ. ಸಂಜೆ 7 ಗಂಟೆಯಿಂದ ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಕಲರ್​ಫುಲ್​ ವೇದಿಕೆ ಸಿದ್ಧವಾಗಿದೆ. ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ ವೇದಿಕೆಯನ್ನು ವಿಶೇಷ ಥೀಮ್​ನಲ್ಲಿ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ತುಂಬ ದಿನಗಳಿಂದ ತಯಾರಿ ಮತ್ತು ಪ್ಲಾನಿಂಗ್​ ಮಾಡಲಾಗಿತ್ತು. ಚಿತ್ರರಂಗ, ರಾಜಕೀಯ, ಮಾಧ್ಯಮ ಲೋಕ ಸೇರಿದಂತೆ ಅನೇಕ ಕ್ಷೇತ್ರಗಳ ಅತಿಥಿಗಳು ಆರತಕ್ಷತೆಗೆ ಹಾಜರಿ ಹಾಕಲಿದ್ದಾರೆ. ಸುಮಲತಾ ಅಂಬರೀಷ್​ (Sumalatha Ambareesh) ಅವರು ಮಗನ ರಿಸೆಪ್ಷನ್​ ಅನ್ನು ವೈಭವದಿಂದ ಮಾಡುತ್ತಿದ್ದಾರೆ.

ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿದೆ. 300 ಶಾಂಡ್ಲಿಯರ್​ ಬಳಕೆ ಆಗಿದೆ. 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇದೆ. ಭಾರತದಲ್ಲೇ ಮೊದಲ ಬಾರಿಗೆ ಈ ರೀತಿ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ಈ ಪರಿಕರಗಳನ್ನು ತರಿಸಲಾಗಿದೆ. ವಿವಿಧ ಬಗೆಯ ಹೂವುಗಳನ್ನು ಕೂಡ ತರಿಸಲಾಗಿದ್ದು ಬಹಳ ಆಕರ್ಷಕವಾಗಿ ರಿಸೆಪ್ಷನ್​ ವೇದಿಕೆಯನ್ನು ಸಿಂಗರಿಸಲಾಗಿದೆ. ಸ್ವತಃ ಸುಮಲತಾ ಅಂಬರೀಷ್​ ಅವರೇ ಎಲ್ಲದರ ಉಸ್ತುವಾರಿ ವಹಿಸಿಕೊಂಡು ಈ ಡೆಕೋರೇಷನ್​ ಮಾಡಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: Prasad Bidapa: ಅಂಬರೀಷ್​ ಕುಟುಂಬದ ಜತೆ ಸಂಬಂಧ ಬೆಳೆಸಿದ್ದರ ಬಗ್ಗೆ ಮೊದಲ ಬಾರಿ ಮಾತಾಡಿದ ಅವಿವಾ ತಂದೆ ಪ್ರಸಾದ್ ಬಿಡಪ

ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ಗೆ ಆಗಮಿಸುವವರಿಗಾಗಿ ಮೂರು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. 25 ಸಾವಿರ ಜನರಿಗೆ ಭೋಜನ ಸಿದ್ಧವಾಗುತ್ತಿದೆ. ವಿಐಪಿ ಮತ್ತು ವಿವಿಐಪಿ ಅತಿಥಿಗಳಿಗೆ ಪ್ರತ್ಯೇಕವಾಗಿ ಜಾಗದ ವ್ಯವಸ್ಥೆ ಇದೆ. ಆರತಕ್ಷತೆಯ ಊಟದಲ್ಲಿ ದಕ್ಷಿಣ ಭಾರತದ ಖಾದ್ಯಗಳ ಜೊತೆ 34 ಬಗೆಯ ತಿನಿಸುಗಳನ್ನು ಮಾಡಿಸಲಾಗಿದೆ. ಅಭಿಮಾನಿಗಳಿಗೆ ಮತ್ತು ಗಣ್ಯರಿಗೆ ಒಂದೇ ರೀತಿಯ ಊಟ ಇರಲಿದೆ.

ಇದನ್ನೂ ಓದಿ: Abhishek Ambareesh: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅದ್ದೂರಿ ವಿವಾಹದ ಸುಂದರ ವಿಡಿಯೋ ವೈರಲ್​

ಆರತಕ್ಷತೆಗೆ ಆಗಮಿಸುವ ಗಣ್ಯರು:

ಕಾಲಿವುಡ್​ ನಟ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ , ಫಾರುಖ್ ಅಬ್ದುಲ್, ಗುಲಾಮ್ ನಬಿ‌ ಆಜಾದ್, ‘ಮೆಗಾ ಸ್ಟಾರ್​’ ಚಿರಂಜೀವಿ ಪತ್ನಿ ಸುರೇಖಾ, ರಾಮ್ ಚರಣ್, ಯಶ್ ಕುಟುಂಬದವರು, ಶಿವರಾಜ್​ಕುಮಾರ್​ ಹಾಗು ರಾಘವೇಂದ್ರ ರಾಜ್​ಕುಮಾರ್​ ಕುಟುಂಬದ ಸದಸ್ಯರು, ಮೋಹನ್ ಬಾಬು ಕುಟುಂಬದವರು, ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಸೇರಿದಂತೆ ಅನೇಕ ಗಣ್ಯರು ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ಆರತಕ್ಷತೆಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:07 pm, Wed, 7 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!