AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್-ಅವಿವಾ ಭರ್ಜರಿ ಬೀಗರೂಟಕ್ಕೆ ತಯಾರಿ, 7 ಟನ್ ಮಟನ್, 7 ಟನ್ ಚಿಕನ್, ಅಡುಗೆ ಏನೇನು?

Abhishek-Aviva: ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದಪ್ಪ ಅವರ ಮದುವೆ ಬೀಗರೂಟ ಕಾರ್ಯಕ್ರಮ ಮಂಡ್ಯದಲ್ಲಿ ಬಹುಅದ್ಧೂರಿಯಾಗಿ ನಡೆಯಲಿದೆ. ಸುಮಾರು 50 ಸಾವಿರ ಜನರಕ್ಕೆ ನಾನ್ ವೆಜ್ ಊಟಕ್ಕೆ ತಯಾರಿ ಆರಂಭವಾಗಿದೆ. ಮೆನುವಿನಲ್ಲಿ ಏನೇನಿದೆ?

ಅಭಿಷೇಕ್-ಅವಿವಾ ಭರ್ಜರಿ ಬೀಗರೂಟಕ್ಕೆ ತಯಾರಿ, 7 ಟನ್ ಮಟನ್, 7 ಟನ್ ಚಿಕನ್, ಅಡುಗೆ ಏನೇನು?
ಅಭಿ-ಅವಿವಾ
ಮಂಜುನಾಥ ಸಿ.
|

Updated on:Jun 12, 2023 | 2:54 PM

Share

ಅಭಿಷೇಕ್ ಅಂಬರೀಶ್ (Abhishek Ambareesh) ಹಾಗೂ ಅವಿವಾ ಬಿದ್ದಪ್ಪ (Aviva Bidappa) ಮದುವೆ ಇತ್ತೀಚೆಗಷ್ಟೆ ಭಾರಿ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆದಿದೆ. ಆದರೆ ಮಂಡ್ಯದ ಗಂಡು ಎಂದು ಕರೆಸಿಕೊಂಡಿದ್ದ ಅಂಬರೀಶ್ (Ambareesh) ಕುಟುಂಬಕ್ಕೆ ಮಂಡ್ಯದೊಟ್ಟಿಗಿನ ನಂಟು ಬಹು ಆತ್ಮೀಯವಾದುದು ಹಾಗಾಗಿ ಅಭಿಷೇಕ್-ಅವಿವಾರ ಮದುವೆ ಬೀಗರೂಟ ಕಾರ್ಯಕ್ರಮವನ್ನು ಮಂಡ್ಯದಲ್ಲಿ ಆಯೋಜಿಸಲಾಗಿದೆ. ಮದುವೆಯಷ್ಟೆ ಅದ್ಧೂರಿಯಾಗಿ ಬೀಗರೂಟ ಕಾರ್ಯಕ್ರಮ ಆಯೋಜಿತವಾಗಿದ್ದು ಭಾರಿ ಸಂಖ್ಯೆಯ ಜನರಿಗೆ ಭರ್ಜರಿ ಮಾಂಸದೂಟ ಹಾಕಿಸಲು ತಯಾರಿ ಈಗಾಗಲೇ ಆರಂಭವಾಗಿದೆ.

ಜೂನ್ 16ರಂದು ನಡೆಯಲಿರುವ ಬೀಗರೂಟಕ್ಕೆ ಭರ್ಜರಿ ತಯಾರಿ ಆರಂಭವಾಗಿದೆ. ನರೇಂದ್ರ ಮೋದಿಯವರ ಕಾರ್ಯಕ್ರಮ ನಡೆದಿದ್ದ ಮದ್ದೂರಿನ ಗೆಜ್ಜಲಗೆರೆಯ ಬೃಹತ್ ಮೈದಾನದಲ್ಲಿ ಬೀಗರೂಟಕ್ಕೆ ಸಿದ್ಧತೆ ಆರಂಭವಾಗಿವೆ. ಸುಮಾರು 15 ಎರಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್​ಗಳನ್ನು ಹಾಕಲಾಗುತ್ತಿದ್ದು, ಎಲ್ಲರಿಗೂ ನೆರಳಿನಲ್ಲಿ ಕುಳಿತು ಆರಾಮದಿಂದ ಊಟ ಸೇವಿಸುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು ಐವತ್ತು ಸಾವಿರ ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಿಸಲಾಗುತ್ತಿದ್ದು, ವಿಐಪಿ ಹಾಗೂ ಸಾಮಾನ್ಯರಿಗಾಗಿ ಎರಡು ಕೌಂಟರ್​ಗಳನ್ನು ಮಾಡಲಾಗುತ್ತಿದೆ.

ಜನರು ನೂತನ ವಧು ವರರಿಗೆ ಶುಭ ಕೋರಲು ವ್ಯವಸ್ಥೆ ಇರುವ ಬಗ್ಗೆ ಸ್ಪಷ್ಟತೆ ಇಲ್ಲ. ಬೀಗರೂಟ ನಡೆಯುವ ಸಮಯದಲ್ಲಿಯೇ ನೂತನ ವಧು-ವರರು ಜನರಿಗೆ ನಮಸ್ಕಾರ ತಿಳಿಸಿ ಅಲ್ಲಿಯೇ ಅವರ ಅಭಿನಂದನೆ ಸ್ವೀಕರಿಸಲಿದ್ದಾರೆ ವಧು-ವರರಿಗಾಗಿ ವೇದಿಕೆ ವ್ಯವಸ್ಥೆ ಮಾಡಿಲ್ಲ ಎನ್ನಲಾಗುತ್ತಿದೆ. ಭಾರಿ ಸಂಖ್ಯೆಯ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವೇದಿಕೆ ಮಾಡಿ ವಧು-ವರರನ್ನು ನಿಲ್ಲಿಸಿದರೆ ನೂಕು-ನುಗ್ಗಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅದ್ಧೂರಿಯಾಗಿದೆ, ಎಲ್ಲವೂ ಅದ್ಭುತವಾಗಿದೆ ಆದರೆ ಒಂದೇ ಒಂದು ಕೊರತೆ

ಇನ್ನು ಬೀಗರೂಟಕ್ಕೆ ಖಾದ್ಯಗಳನ್ನು ತಯಾರಿಸಲು ಈಗಾಗಲೇ ಪಟ್ಟಿ ತಯಾರಾಗಿದ್ದು ಸಾಮಗ್ರಿಗಳ ಖರೀದಿ ಕಾರ್ಯವೂ ಮುಗಿದಿದೆ ಎನ್ನಲಾಗಿದೆ. ಬೀಗರೂಟಕ್ಕೆ ಭರ್ಜರಿ ಬಾಡೂಟದ ಮೆನು ತಯಾರಾಗಿದೆ. 7 ಟನ್ ಮಟನ್ ಹಾಗೂ 7 ಟನ್ ಚಿಕನ್ ಅನ್ನು ಬಳಸಿ ಬೀಗರೂಟ ತಯಾರು ಮಾಡಲಾಗುತ್ತಿದೆ. ಮೆನುವಿನಲ್ಲಿ ರಾಗಿ ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಗೀ ರೈಸ್, ಅನ್ನ, ತಿಳಿ ಸಾಂಬಾರ್, ಮಜ್ಜಿಗೆ, ಬಾಳೆಹಣ್ಣು, ಬೀಡಾ ನಂದಿನಿ ಐಸ್ ಕ್ರೀಂ, ವಾಟರ್ ಬಾಟಲ್​ಗಳು ಇರಲಿವೆ.

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದಪ್ಪ ಜೂನ್ 5ರಂದು ಅದ್ಧೂರಿಯಾಗಿ ವಿವಾಹವಾದರು. ಅದರ ಮರುದಿನವೇ ಅರಮನೆ ಮೈದಾನದಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ಸಹ ನಡೆಯಿತು. ತೆಲುಗು, ತಮಿಳು, ಬಾಲಿವುಡ್​ನಿಂದ ಹಲವು ತಾರೆಯರು ಅಭಿಷೇಕ್-ಅವಿವಾ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೊತೆಗೆ ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಸಹ ಈ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೂತನ ವಧು-ವರರನ್ನು ಹರಸಿದರು. ಅದಾದ ಬಳಿಕ ಅದ್ಧೂರಿ ಸಂಗೀತ್ ಪಾರ್ಟಿಯನ್ನು ಸಹ ಅರೇಂಜ್ ಮಾಡಲಾಗಿತ್ತು, ನಟ ಯಶ್ ಸೇರಿದಂತೆ ಚಿತ್ರರಂಗದ ಪ್ರಮುಖರು, ಅಂಬರೀಶ್ ಕುಟುಂಬದ ಆಪ್ತರು ಈ ಪಾರ್ಟಿಯಲ್ಲಿ ಭಾಗವಹಿಸಿ ಎಂಜಾಯ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Mon, 12 June 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ