AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ ಅಂಬರೀಷ್​​ ಮತ್ತು ರಚಿತಾ ರಾಮ್ ಜನ್ಮದಿನ; ಕಾಮನ್​ ಡಿಪಿ ರಿಲೀಸ್​ ಮಾಡಿದ ಸುಮಲತಾ

ಕೊವಿಡ್​ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಆದಾಗ್ಯೂ ಅಭಿಷೇಕ್​ ದೊಡ್ಡ ಮಟ್ಟದಲ್ಲಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಅಭಿಮಾನಿಗಳನ್ನು ಇಂದು ಭೇಟಿ ಮಾಡುವ ಸಾಧ್ಯತೆ ಇದೆ.

ಅಭಿಷೇಕ್​ ಅಂಬರೀಷ್​​ ಮತ್ತು ರಚಿತಾ ರಾಮ್ ಜನ್ಮದಿನ; ಕಾಮನ್​ ಡಿಪಿ ರಿಲೀಸ್​ ಮಾಡಿದ ಸುಮಲತಾ
ಅಭಿಷೇಕ್​ ಅಂಬರೀಶ್​-ರಚಿತಾ ರಾಮ್​
TV9 Web
| Edited By: |

Updated on: Oct 03, 2021 | 7:27 AM

Share

ರೆಬೆಲ್​ ಸ್ಟಾರ್​ ಅಂಬರೀಷ್​ ಪುತ್ರ ಅಭಿಷೇಕ್​ ಅಂಬರೀಷ್​ ಹಾಗೂ ನಟಿ ರಚಿತಾ ರಾಮ್​ಗೆ ಇಂದು (ಅಕ್ಟೋಬರ್​ 3) ಜನ್ಮದಿನದ ಸಂಭ್ರಮ. ಈ ವಿಶೇಷ ದಿನದ ಪ್ರಯುಕ್ತ ಇವರ ನಟನೆಯ ಸಿನಿಮಾ ತಂಡಗಳಿಂದ ಪೋಸ್ಟರ್​ ಹಾಗೂ ಟೀಸರ್​ಗಳು ಗಿಫ್ಟ್​ ಆಗಿ ಸಿಗುತ್ತಿವೆ.

ಅಭಿಷೇಕ್​ ಅಂಬರೀಷ್​ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಇದಕ್ಕೆ ಕಾರಣ ರೆಬೆಲ್​ ಸ್ಟಾರ್​ ಕುಟುಂಬ. ಅಂಬರೀಷ್​ ಹಾಗೂ ಸುಮಲತಾ ಪುತ್ರ ಎನ್ನುವುದು ಒಂದು ಕಾರಣವಾದರೆ,  ಅಭಿಷೇಕ್​ ತಮ್ಮ ನಟನೆ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಕಾಮನ್​ ಡಿಪಿ ಅನಾವರಣ ಮಾಡಲಾಗಿದೆ. ನಟಿ, ಸಂಸದೆ ಸುಮಲತಾ ಅಂಬರೀಷ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಅಭಿಷೇಕ್​ಗೆ ಶುಭಾಶಯ ಕೋರುತ್ತಿದ್ದಾರೆ.

ಅಭಿಷೇಕ್​ ‘ಬ್ಯಾಡ್​ ಮ್ಯಾನರ್ಸ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದ ಸಣ್ಣ ವಿಡಿಯೋ ತುಣುಕು ಇಂದು ರಿಲೀಸ್​ ಆಗಲಿದೆ. ದುನಿಯಾ ಸೂರಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್​ ನಾಯಕಿ. ಈ ವಿಶೇಷ ವಿಡಿಯೋದಲ್ಲಿ ರಚಿತಾ ರಾಮ್​ ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕೊವಿಡ್​ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಆದಾಗ್ಯೂ ಅಭಿಷೇಕ್​ ದೊಡ್ಡ ಮಟ್ಟದಲ್ಲಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಅಭಿಮಾನಿಗಳನ್ನು ಇಂದು ಭೇಟಿ ಮಾಡುವ ಸಾಧ್ಯತೆ ಇದೆ.

ರಚಿತಾ ರಾಮ್​ ಜನ್ಮದಿನಕ್ಕೂ ಎಲ್ಲ ಕಡೆಗಳಿಂದ ಶುಭಾಶಯ ಹರಿದು ಬರುತ್ತಿದೆ. ರಚಿತಾ ರಾಮ್​ ಡಿಂಪಲ್​ ಕ್ವೀನ್​ ಎಂದೇ ಖ್ಯಾತಿ ಪಡೆದವರು. ಅವರ ಜನ್ಮದಿನಕ್ಕೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ರಚಿತಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳ ಪೋಸ್ಟರ್​ ಅಥವಾ ಟೀಸರ್​ಗಳು ಇಂದು ರಿಲೀಸ್ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸುಮಲತಾ ಅಂಬರೀಶ್​ ಮನೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ; ಸಾತ್​ ನೀಡಿದ ಅಭಿಷೇಕ್​

ಮೊದಲ ಅವಾರ್ಡ್​​ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್​ ಅಂಬರೀಷ್​; ಸುಮಲತಾ ಮೊಗದಲ್ಲಿ ಸಂಭ್ರಮ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?