Abhishek Ambareesh: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅದ್ದೂರಿ ವಿವಾಹದ ಸುಂದರ ವಿಡಿಯೋ ವೈರಲ್​

Abhishek Ambareesh Wedding: ಬಹಳ ಅದ್ದೂರಿಯಾಗಿ ನಡೆದ ಈ ಮದುವೆ ಶಾಸ್ತ್ರಗಳು ಹೇಗಿದ್ದವು? ನವ ದಂಪತಿಯ ಉಡುಗೆ-ತೊಡುಗೆ ಹೇಗಿತ್ತು? ಅವಿವಾ ಬಿಡಪ ಧರಿಸಿದ ಆಭರಣಗಳ ವೈಭವ ಯಾವ ರೀತಿ ಇತ್ತು?

Abhishek Ambareesh: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅದ್ದೂರಿ ವಿವಾಹದ ಸುಂದರ ವಿಡಿಯೋ ವೈರಲ್​
ಅವಿವಾ ಬಿಡಪ, ಅಭಿಷೇಕ್​ ಅಂಬರೀಷ್​
Follow us
|

Updated on: Jun 05, 2023 | 3:17 PM

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಇಂದು (ಜೂನ್​ 5) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಅವಿವಾ ಬಿಡಪ (Aviva Bidapa) ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನಲ್ಲಿ ಈ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆದಿದೆ. ದಕ್ಷಿಣ ಭಾರತ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ. ರಜನಿಕಾಂತ್​, ಮೋಹನ್​ ಬಾಬು, ಕಿಚ್ಚ ಸುದೀಪ್​, ಯಶ್​, ಅನಿಲ್​ ಕುಂಬ್ಳೆ, ಸುಹಾಸಿನಿ ಮಣಿರತ್ನಂ, ಪವಿತ್ರಾ ಲೋಕೇಶ್​, ನರೇಶ್​, ವೆಂಕಯ್ಯ ನಾಯ್ಡು, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುಂತಾದವರು ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಮದುವೆಗೆ (Abhishek Aviva Wedding) ಸಾಕ್ಷಿಯಾದರು. ಈ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

‘ರೆಬೆಲ್​ ಸ್ಟಾರ್​’ ಅಂಬರೀಷ್​ ಮತ್ತು ಸುಮಲತಾ ಅಂಬರೀಷ್​ ಅವರು ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಹಾಗಾಗಿ ಅವರಿಗೆ ಈ ಎರಡೂ ಕ್ಷೇತ್ರದಲ್ಲಿ ಸ್ನೇಹಿತರಿದ್ದಾರೆ. ಬಹಳ ಅದ್ದೂರಿಯಾಗಿ ನಡೆದ ಈ ಮದುವೆ ಶಾಸ್ತ್ರಗಳು ಹೇಗಿದ್ದವು? ನವ ದಂಪತಿಯ ಉಡುಗೆ-ತೊಡುಗೆ ಹೇಗಿತ್ತು? ಅವಿವಾ ಬಿಡಪ ಧರಿಸಿದ ಆಭರಣಗಳ ವೈಭವ ಯಾವ ರೀತಿ ಇತ್ತು? ಮಗನ ಮದುವೆಯನ್ನು ಕಣ್ತುಂಬಿಕೊಂಡ ಸುಮಲತಾ ಅಂಬರೀಷ್​ ಅವರ ಭಾವುಕ ಕ್ಷಣ ಹೇಗಿತ್ತು ಎಂಬುದನ್ನು ವಿವರಿಸುವಂತಿದೆ ಈ ವಿಡಿಯೋ.

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಈ ಅದ್ದೂರಿ ಮದುವೆ ನಡೆದಿದೆ. ಮುಂಜಾನೆಯೇ ಸುಮಲತಾ ಕುಟುಂಬದವರು ಚಾಮರ ವಜ್ರಕ್ಕೆ ಆಗಮಿಸಿದರು. ಅಭಿಷೇಕ್​ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟರು. ಈ ವಿಡಿಯೋ ವೈರಲ್ ಆಗಿದೆ. ಒಕ್ಕಲಿಗರ ಸಮುದಾಯದಂತೆ ಮದುವೆ ಶಾಸ್ತ್ರಗಳು ನೆರವೇರಿವೆ. ಮೇಘನಾ ರಾಜ್ ಕೂಡ ಆಗಮಿಸಿ, ಖುಷಿಖುಷಿಯಿಂದ ಮಾತನಾಡಿದ್ದಾರೆ. ‘ಅಂಬರೀಷ್ ಅಂಕಲ್ ನಮಗೆ ಕುಟುಂಬದವರು ಇದ್ದ ಹಾಗೆ. ಅಭಿಷೇಕ್ ಕೂಡ ನಮ್ಮ ಫ್ಯಾಮಿಲಿ. ಈಗ ಅವಿವಾ ಕೂಡ ನಮ್ಮ ಕುಟುಂಬ ಸೇರಿಕೊಂಡಿದ್ದಾರೆ. ತುಂಬಾ ಖುಷಿಯ ವಿಚಾರ. ಸೌತ್ ಇಂಡಿಯಾ ಸಿನಿಮಾ ಇಂಡಸ್ಟ್ರಿಗೆ ಸೆಲೆಬ್ರೇಷನ್ ಸಮಯ’ ಎಂದಿದ್ದಾರೆ ಮೇಘನಾ ರಾಜ್.

ಇದನ್ನೂ ಓದಿ: Abhishek Aviva Wedding Highlights: ಅಭಿಷೇಕ್​-ಅವಿವಾಗೆ ಸುದೀಪ್​, ಯಶ್, ರಜನಿ ವಿಶ್

ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಎಲ್ಲಾ ಸೆಲೆಬ್ರಿಟಿಗಳು ಭಾಗಿ ಆಗಿ ಔತಣ ಸ್ವೀಕರಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ