Sign In

By signing in or creating an account, you agree with Associated Broadcasting Company's Terms & Conditions and Privacy Policy.

”ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅದ್ಧೂರಿಯಾಗಿದೆ, ಎಲ್ಲವೂ ಅದ್ಭುತವಾಗಿದೆ ಆದರೆ ಒಂದೇ ಒಂದು ಕೊರತೆ”

Abhishek-Aviva: ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಸಿನಿಮಾ ತಾರೆಯರು, ರಾಜಕೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಿರಿಯ ನಟ ದೊಡ್ಡಣ್ಣನಿಗೆ ಎಲ್ಲವೂ ಅದ್ಭುತ ಅನಿಸಿದರೆ ಆದರೆ ಕೊರತೆಯೊಂದು ಕಾಣುತ್ತಿದೆ.

''ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅದ್ಧೂರಿಯಾಗಿದೆ, ಎಲ್ಲವೂ ಅದ್ಭುತವಾಗಿದೆ ಆದರೆ ಒಂದೇ ಒಂದು ಕೊರತೆ''
ಅಭಿ-ಅವಿವಾ
Follow us
ಮಂಜುನಾಥ ಸಿ.
|

Updated on:Jun 07, 2023 | 9:26 PM

ಅಭಿಷೇಕ್ ಅಂಬರೀಶ್ (Abhishek Ambareesh) ಹಾಗೂ ಅವಿವಾ ಬಿದಪ್ಪ (Aviva Bidappa) ವಿವಾಹ ಶಾಸ್ತ್ರೋಕ್ತವಾಗಿ ನಡೆದಿದೆ. ಇಂದು (ಜೂನ್ 06) ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯುತ್ತಿದೆ. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವರು ಆರತಕ್ಷತೆಗೆ ಆಗಮಿಸಿ ನೂತನ ವಧು-ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಅಂಬರೀಶ್ (Ambareesh)​ ಇದ್ದಾಗ ಅವರಿಗೆ ಬಹು ಆತ್ಮೀಯರಾಗಿದ್ದ ಹಲವರನ್ನು ಮರೆಯದೇ ಮದುವೆ ಆಹ್ವಾನಿಸಿದ್ದಾರೆ ಸುಮಲತಾ ಹಾಗೂ ಅಭಿಷೇಕ್. ಆರತಕ್ಷತೆ ಕಾರ್ಯಕ್ರಮಕ್ಕೆ ಬಂದ ಗಣ್ಯರಲ್ಲಿ ಕೆಲವರು ಮಾಧ್ಯಮಗಳೊಟ್ಟಿಗೆ ಮಾತನಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅಂಬರೀಶ್ ಇದ್ದಾಗ ಅವರಿಗೆ ಅತ್ಯಂತ ಆಪ್ತರಾಗಿದ್ದವರಲ್ಲಿ ನಟ ದೊಡ್ಡಣ್ಣ ಸಹ ಒಬ್ಬರು. ಅಂಬರೀಶ್​ಗೆ ಅಂಬರೀಶ್ ಕುಟುಂಬಕ್ಕೆ ಅತ್ಯಾಪ್ತರಾಗಿದ್ದ ನಟ ದೊಡ್ಡಣ್ಣ ಕುಟುಂಬದೊಂದಿಗೆ ಆಗಮಿಸಿ ಅಭಿಷೇಕ್-ಅವಿವಾ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ದೊಡ್ಡಣ್ಣ, ಅಭಿಷೇಕ್ ಹಾಗೂ ಅವಿವಾ ಅವರ ಆರತಕ್ಷತೆಯಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಎಲ್ಲವೂ ಅದ್ಭುತವಾಗಿದೆ. ಆದರೆ ಈ ಸಂದರ್ಭದಲ್ಲಿ ಒಂದು ಕೊರತೆ ಕಾಡುತ್ತಿದೆ. ಅದೆಂದರೆ ನಮ್ಮ ರೆಬಲ್ ಸ್ಟಾರ್ ನಮ್ಮೊಂದಿಗೆ ಇಲ್ಲದೇ ಇರುವುದು. ಅಂಬಿ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂದಿದ್ದಾರೆ ದೊಡ್ಡಣ್ಣ.

ಆರತಕ್ಷತೆಯಲ್ಲಿ ಭಾಗವಹಿಸಿದ್ದ ನಟ, ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್, ನಮ್ಮ ಕುಟುಂಬಕ್ಕೆ ಬಹಳ ಹತ್ತಿರವಾದ ಮದುವೆ ಇದು. ನಮ್ಮ ಕುಟುಂಬದ ಎಲ್ಲರ ಮದುವೆಯೂ ಅಂಬರೀಶ್ ಅವರು ಬಂದಿದ್ದರು. ಶಿವರಾಜ್ ಕುಮಾರ್, ನನ್ನ ಮದುವೆ, ಅಪ್ಪು ಮದುವೆಗೆ ಬಂದಿದ್ದರು. ಇಲ್ಲಿ ಮೂರು ಏ ಡಿಸೈನ್ ಮಾಡಲಾಗಿದೆ. ಅಂದರೆ ಅಂಬರೀಶ್, ಅಭಿಷೇಕ್ ಹಾಗೂ ಅವಿವಾ ಎಂದು ಎಲ್ಲರಿಗೂ ಶುಭವಾಗಲಿ, ನವಜೋಡಿಗೆ ಶುಭವಾಗಲಿ ಎಂದು ಹಾರೈಸಿದರು. ರಾಘವೇಂದ್ರ ರಾಜ್​ಕುಮಾರ್ ಮಾತ್ರವೇ ಅಲ್ಲದೆ ದೊಡ್ಮನೆಯಿಂದ ಶಿವರಾಜ್ ಕುಮಾರ್, ಗೀತಾ ಶಿವರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಸಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕನ್ನಡ ಚಿತ್ರರಂಗದ ಹಲವು ಗಣ್ಯರು, ಸ್ಟಾರ್ ನಟರು ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮೊನ್ನೆ ನಡೆದ ಮದುವೆ ಕಾರ್ಯಕ್ರಮದಲ್ಲಿ ನಟ ಸುದೀಪ್, ಯಶ್ ಅವರುಗಳು ಕುಟುಂಬ ಸಮೇತ ಭಾಗಿಯಾಗಿದ್ದರು. ತಮಿಳಿನ ಸ್ಟಾರ್ ನಟ ರಜನೀಕಾಂತ್ ಸಹ ಮದುವೆಗೆ ಆಗಮಿಸಿ ಶುಭ ಕೋರಿದ್ದರು. ಇಂದು ನಟ ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ಸ್ಟಾರ್ ಶತ್ರುಘನ್ ಸಿನ್ಹಾ ಸೇರಿದಂತೆ ಹಲವರು ಭಾಗಿ ಆಗಲಿದ್ದಾರೆ.

ಸಿನಿಮಾ ತಾರೆಯರು ಮಾತ್ರವೇ ಅಲ್ಲದೆ ಹಲವು ರಾಜಕಾರಣಿಗಳು ಸಹ ಮದುವೆಯಲ್ಲಿ ಭಾಗಿ ಆಗಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ನೂತನ ವಧು-ವರರಿಗೆ ಶುಭ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಅಂಬರೀಶ್​ಗೆ ಅತ್ಯಾಪ್ತರಾಗಿದ್ದವು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಗುಲಾಂ ನಬಿ ಆಜಾದ್ ಇನ್ನೂ ಹಲವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 7 June 23

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!