AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಗೆಟಪ್​ನಲ್ಲಿ ಬ್ಯಾಡ್​ ಮ್ಯಾನರ್ಸ್​ ತೋರಿಸಲು ಬಂದ ಅಭಿಷೇಕ್​ ಅಂಬರೀಷ್​; ಇಲ್ಲಿದೆ ಸ್ಯಾಂಪಲ್​

‘ಬ್ಯಾಡ್​ ಮ್ಯಾನರ್ಸ್​’ ಚಿತ್ರದಲ್ಲಿ ರಫ್​ ಆ್ಯಂಡ್​ ಟಫ್​ ಪೊಲೀಸ್​ ಅಧಿಕಾರಿಯಾಗಿ ಅಭಿಷೇಕ್​ ಅಂಬರೀಷ್​ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಸಿನಿಮಾ ‘ಅಮರ್​’ನಲ್ಲಿ ಲವರ್​ಬಾಯ್​ ಆಗಿದ್ದ ಅವರು ಈಗ ಖಾಕಿ ಧರಿಸಿದ್ದಾರೆ.

ಪೊಲೀಸ್​ ಗೆಟಪ್​ನಲ್ಲಿ ಬ್ಯಾಡ್​ ಮ್ಯಾನರ್ಸ್​ ತೋರಿಸಲು ಬಂದ ಅಭಿಷೇಕ್​ ಅಂಬರೀಷ್​; ಇಲ್ಲಿದೆ ಸ್ಯಾಂಪಲ್​
ಬ್ಯಾಡ್​ ಮ್ಯಾನರ್ಸ್​ ಟೀಸರ್​ನಲ್ಲಿ ಅಭಿಷೇಕ್​ ಅಂಬರೀಷ್​​
TV9 Web
| Edited By: |

Updated on: Oct 03, 2021 | 3:43 PM

Share

‘ರೆಬೆಲ್​ ಸ್ಟಾರ್​’ ಅಂಬರೀಷ್​ ನಟಿಸುತ್ತಿರುವ ಎರಡನೇ ಸಿನಿಮಾ ‘ಬ್ಯಾಡ್​ ಮ್ಯಾನರ್ಸ್​’ ಬಗ್ಗೆ ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ದುನಿಯಾ ಸೂರಿ ನಿರ್ದೇಶಿಸುತ್ತಿರುವ ಚಿತ್ರವಾದ್ದರಿಂದ ಕಾತರ ಮೂಡಿಸಿದೆ. ಇಂದು (ಅ.3) ಅಭಿಷೇಕ್​ ಅಂಬರೀಷ್​ ಜನ್ಮದಿನ. ಆ ಪ್ರಯುಕ್ತ ‘ಬ್ಯಾಡ್​ ಮ್ಯಾನರ್ಸ್​’ ತಂಡದಿಂದ ಒಂದು ಸ್ನೀಕ್​ ಪೀಕ್​ ವಿಡಿಯೋ ಟೀಸರ್​​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಅಭಿಷೇಕ್​ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದರ ಝಲಕ್​ ಅನ್ನು ಇದರಲ್ಲಿ ತೋರಿಸಲಾಗಿದೆ. ಆ ಮೂಲಕ ಅವರ ಅಭಿಮಾನಿಗಳಿಗೆ ‘ಬ್ಯಾಡ್​ ಮ್ಯಾನರ್ಸ್​’ ಚಿತ್ರತಂಡ ಉಡುಗೊರೆ ನೀಡಿದೆ.

ಈ ಮೊದಲು ಬಿಡುಗಡೆಯಾದ ಪೋಸ್ಟರ್​ಗಳಲ್ಲಿ ಅಭಿಷೇಕ್​ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಈಗ ಟೀಸರ್​ ಹೊರಬಂದಿದ್ದು, ಈ ಸಿನಿಮಾದಲ್ಲಿ ಅವರಿಗೆ ಪೊಲೀಸ್​ ಗೆಟಪ್​ ಇರುವುದು ಗೊತ್ತಾಗಿದೆ. ರಫ್​ ಆ್ಯಂಡ್​ ಟಫ್​ ಪೊಲೀಸ್​ ಅಧಿಕಾರಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಮೊದಲ ಸಿನಿಮಾ ‘ಅಮರ್​’ನಲ್ಲಿ ಲವರ್​ಬಾಯ್​ ಆಗಿದ್ದ ಅಭಿಷೇಕ್​, ‘ಬ್ಯಾಡ್​ ಮ್ಯಾನರ್ಸ್​’ ಚಿತ್ರದಲ್ಲಿ ಖಾಕಿ ಧರಿಸಿದ್ದಾರೆ.

ಪೊಲೀಸ್​ ಕಥೆಗಳನ್ನು ಹೇಳುವಲ್ಲಿ ಸೂರಿ ಸಿದ್ಧಹಸ್ತರು. ಈ ಹಿಂದೆ ‘ಕೆಂಡಸಂಪಿಗೆ’ ಚಿತ್ರದಲ್ಲಿ ಅವರು ಮೋಡಿ ಮಾಡಿದ್ದರು. ಈಗ ‘ಬ್ಯಾಡ್​ ಮ್ಯಾನರ್ಸ್​’ ಮೂಲಕ ಮತ್ತೆ ಪೊಲೀಸ್​ ಇಲಾಖೆಗೆ ಸಂಬಂಧಿಸಿದ ಕಥೆಯನ್ನು ಅವರು ತೆರೆ ಮೇಲೆ ತರುತ್ತಿದ್ದಾರೆ. ಸೂರಿ ಮತ್ತು ಅಭಿಷೇಕ್​ ಕಾಂಬಿನೇಷನ್​ಗೆ ಒಳ್ಳೆಯ ತಾಂತ್ರಿಕವರ್ಗ ಸಾಥ್​ ನೀಡಿದೆ. ‘ಟಗರು’ ಚಿತ್ರದಲ್ಲಿ ಸೂರಿ ಜೊತೆ ಭರ್ಜರಿಯಾಗಿ ಸೌಂಡು ಮಾಡಿದ್ದ ಸಂಗೀತ ನಿರ್ದೇಶಕ ಚರಣ್​ ರಾಜ್​ ಅವರೇ ಈಗ ‘ಬ್ಯಾಡ್​ ಮ್ಯಾನರ್ಸ್​’ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಟೀಸರ್​ನಲ್ಲಿ ಹಿನ್ನೆಲೆ ಸಂಗೀತ ಕೇಳಿದ ಬಳಿಕ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ.

(ಬ್ಯಾಡ್​ ಮ್ಯಾನರ್ಸ್​ ಚಿತ್ರದ ಸ್ನೀಕ್​ ಪೀಕ್​ ವಿಡಿಯೋ ಟೀಸರ್​)

ಅಭಿಷೇಕ್​ ಹುಟ್ಟುಹಬ್ಬದ ಪ್ರಯುಕ್ತ ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಅಭಿಷೇಕ್​ಗೆ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ:

ಮೊದಲ ಅವಾರ್ಡ್​​ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್​ ಅಂಬರೀಷ್​; ಸುಮಲತಾ ಮೊಗದಲ್ಲಿ ಸಂಭ್ರಮ

ಅಭಿಷೇಕ್​ ಅಂಬರೀಷ್​​ ಮತ್ತು ರಚಿತಾ ರಾಮ್ ಜನ್ಮದಿನ; ಕಾಮನ್​ ಡಿಪಿ ರಿಲೀಸ್​ ಮಾಡಿದ ಸುಮಲತಾ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ