Bad Manners Teaser: ಅಭಿಷೇಕ್​ ಅಂಬರೀಷ್​​ ಜನ್ಮದಿನಕ್ಕೆ ‘ಬ್ಯಾಡ್​ ಮ್ಯಾನರ್ಸ್​’ ಟೀಸರ್​ ಉಡುಗೊರೆ

Abhishek Ambareesh Birthday: ಸೂರಿ ನಿರ್ದೇಶನದಲ್ಲಿ ‘ಬ್ಯಾಡ್​ ಮ್ಯಾನರ್ಸ್​’ ಚಿತ್ರ ಸಿದ್ಧವಾಗುತ್ತಿದೆ. ಅಭಿಷೇಕ್​ ಅಂಬರೀಷ್​ ಬರ್ತ್​ಡೇ ಪ್ರಯುಕ್ತ ಈ ಸಿನಿಮಾದ ಟೀಸರ್​ ರಿಲೀಸ್​ ಆಗಿದೆ.

Bad Manners Teaser: ಅಭಿಷೇಕ್​ ಅಂಬರೀಷ್​​ ಜನ್ಮದಿನಕ್ಕೆ ‘ಬ್ಯಾಡ್​ ಮ್ಯಾನರ್ಸ್​’ ಟೀಸರ್​ ಉಡುಗೊರೆ
ಅಭಿಷೇಕ್ ಅಂಬರೀಷ್
Follow us
| Updated By: Digi Tech Desk

Updated on:Oct 03, 2022 | 1:59 PM

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಅ.3) ಅವರಿಗೆ ಹುಟ್ಟುಹಬ್ಬದ (Abhishek Ambareesh Birthday) ಸಂಭ್ರಮ. ಆ ಪ್ರಯುಕ್ತ ಹೊಸ ಟೀಸರ್​ ಹಾಗೂ ಪೋಸ್ಟರ್​ಗಳನ್ನು ರಿಲೀಸ್​ ಮಾಡಲಾಗುತ್ತಿದೆ. ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ‘ರೆಬಲ್​ ಸ್ಟಾರ್​’ ಅಂಬರೀಷ್​ ಪುತ್ರ ಎಂಬ ಕಾರಣಕ್ಕೆ ಅಭಿಷೇಕ್​ ಮೇಲೆ ಸಿನಿಪ್ರಿಯರಿಗೆ ವಿಶೇಷ ಅಭಿಮಾನ. ಅಂಬಿ ಪುತ್ರನಿಗೆ ಇಂದು ಸೆಲೆಬ್ರಿಟಿಗಳು, ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ‘ಬ್ಯಾಡ್​ ಮ್ಯಾನರ್ಸ್​’ (Bad Manners) ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ.

ಅಭಿಷೇಕ್​ ಅಂಬರೀಷ್​ ನಟಿಸುತ್ತಿರುವ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿಯಾಗಲು ಅನೇಕ ಕಾರಣಗಳಿವೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ‘ದುನಿಯಾ’ ಸೂರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಕೂಡ ಗಮನ ಸೆಳೆಯುತ್ತಿದೆ. ರಗಡ್​ ಸಿನಿಮಾಗಳನ್ನು ಮಾಡುವಲ್ಲಿ ಸೂರಿ ಫೇಮಸ್​. ಅಭಿಷೇಕ್​ ಅವರನ್ನು ಆ ರೀತಿ ನೋಡಲು ಫ್ಯಾನ್ಸ್​ ಬಯಸುತ್ತಾರೆ. ಈಗ ಟೀಸರ್​ ಮೂಲಕ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ
Image
ಕೆಲವು ರಾಜಕೀಯ ಪಕ್ಷಗಳಿಂದ ಪುತ್ರ ಅಭಿಷೇಕ್​ಗೆ ಆಫರ್ ಬಂದಿರುವುದು ನಿಜ: ಸಂಸದೆ ಸುಮಲತಾ ಅಂಬರೀಷ್
Image
ಅಭಿಷೇಕ್​ ಅಂಬರೀಷ್ ನಟನೆಯ ‘ಬ್ಯಾಡ್​ ಮ್ಯಾನರ್ಸ್​​’ ಸೆಟ್​ನಲ್ಲಿ ಡಾಲಿ ಧನಂಜಯ; ಇಲ್ಲಿದೆ ವಿಡಿಯೋ
Image
ಅಭಿಷೇಕ್​ ಅಂಬರೀಷ್​ ರಾಜಕೀಯಕ್ಕೆ ಬರ್ತಾರಾ?; ಸುಮಲತಾ ಅಂಬರೀಷ್​ ಹೇಳಿದ್ದಿಷ್ಟು
Image
ಮೊದಲ ಅವಾರ್ಡ್​​ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್​ ಅಂಬರೀಷ್​; ಸುಮಲತಾ ಮೊಗದಲ್ಲಿ ಸಂಭ್ರಮ

‘ಅಮರ್​’ ಚಿತ್ರದ ಮೂಲಕ ಅಭಿಷೇಕ್​ ಅಂಬರೀಷ್​ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿ ಅವರಿಗೆ ನಾಗಶೇಖರ್​ ನಿರ್ದೇಶನ ಮಾಡಿದ್ದರು. ಆ ಚಿತ್ರದ ಹಾಡುಗಳು ಸೂಪರ್​ ಹಿಟ್​ ಆದವು. ಈಗ ‘ಬ್ಯಾಡ್​ ಮ್ಯಾನರ್ಸ್​’ ಮಾತ್ರವಲ್ಲದೇ ಮಹೇಶ್​ ಕುಮಾರ್​ ನಿರ್ದೇಶನದ ಹೊಸ ಚಿತ್ರವನ್ನು ಕೂಡ ಅಭಿಷೇಕ್​ ಒಪ್ಪಿಕೊಂಡಿದ್ದಾರೆ. ಕೃಷ್ಣ ನಿರ್ದೇಶನ ಮಾಡಲಿರುವ ‘ಕಾಳಿ’ ಚಿತ್ರಕ್ಕೂ ಅಭಿಷೇಕ್​ ಹೀರೋ ಆಗಿದ್ದಾರೆ.

‘ಬ್ಯಾಡ್​ ಮ್ಯಾನರ್ಸ್​’ ಚಿತ್ರದಲ್ಲಿ ಅಭಿಷೇಕ್ ಅವರು ಭರ್ಜರಿ ಸಾಹಸ ದೃಶ್ಯಗಳಲ್ಲಿ ನಟಿಸಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಇನ್ನು, ಖಡಕ್​ ಡೈಲಾಗ್​ಗಳನ್ನೂ ಅವರು ಹೊಡೆದಿದ್ದಾರೆ. ‘ಐಡಿಯಾ ಸೃಷ್ಟಿ ಮಾಡಿದವನು ಸತ್ರೂ ಪರವಾಗಿಲ್ಲ. ಐಡಿಯಾ ಸಾಯಲ್ಲ’, ‘ವ್ಯವಸ್ಥೆ ತಪ್ಪಲ್ಲ.. ಮನುಷ್ಯನ ಯೋಚನೆ ತಪ್ಪು’ ಎಂದು ಅವರು ಹೇಳಿರುವ ಡೈಲಾಗ್​ಗಳು ಗಮನ ಸೆಳೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Mon, 3 October 22

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ