AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​

Abhishek Ambareesh Engagement Rumors: ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಆದರೆ ಇದನ್ನು ಸ್ವತಃ ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​
ಅಭಿಷೇಕ್. ಸುಮಲತಾ ಅಂಬರೀಷ್
TV9 Web
| Edited By: |

Updated on:Nov 24, 2022 | 2:02 PM

Share

ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್​ ಅಂಬರೀಷ್ (Abhishek Ambareesh) ಬಗ್ಗೆ ವದಂತಿ ಹಬ್ಬಿದೆ. ಶೀಘ್ರದಲ್ಲೇ ಅವರ ನಿಶ್ಚಿತಾರ್ಥ (Abhishek Ambareesh Engagement) ನೆರವೇರುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಆ ಸುದ್ದಿಯನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ. ನಿಶ್ಚಿತಾರ್ಥಕ್ಕೆ ತಯಾರಿ ನಡೆಯುತ್ತಿದೆ ಎಂಬ ವರದಿ ನಿಜವಲ್ಲ ಎಂದು ಅವರು ಟಿವಿ9 ಡಿಜಿಟಲ್​ಗೆ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. ಅಭಿಷೇಕ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಏಕಾಏಕಿ ಮದುವೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ವದಂತಿ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಈಗ ಸ್ವತಃ ಸುಮಲತಾ ಅಂಬರೀಷ್​ (Sumalatha Ambareesh) ಅವರು ಪ್ರತಿಕ್ರಿಯೆ ನೀಡಿರುವುದರಿಂದ ನಿಶ್ಚಿತಾರ್ಥ ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಸುಮಲತಾ ಅಂಬರೀಷ್​ ಹೇಳಿದ್ದೇನು?

ಮಗನ ಎಂಗೇಜ್​ಮೆಂಟ್​ ಬಗ್ಗೆ ಹರಡಿರುವ ಸುದ್ದಿಯ ಕುರಿತು ಸುಮಲತಾ ಅಂಬರೀಷ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಳೆದ ಎರಡು ವರ್ಷಗಳಿಂದಲೂ ಇಂಥ ವದಂತಿ ಹರಡುತ್ತಲೇ ಇದೆ. ಡಿಸೆಂಬರ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತದೆ ಎಂಬುದೆಲ್ಲ ಸುಳ್ಳು. ಆ ರೀತಿ ಯಾವುದೇ ಪ್ಲ್ಯಾನ್​ ಇಲ್ಲ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಹಬ್ಬಿರುವ ವದಂತಿ ಏನು?

ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಅರಮನೆ ಮೈದಾನದಲ್ಲಿ ಎಂಗೇಜ್​ ಮೆಂಟ್​ ನಡೆಯಲಿದೆಯಂತೆ. ಅಭಿಷೇಕ್​ ಕೈ ಹಿಡಿಯುವ ಹುಡುಗಿ ಮಾಡೆಲ್​ ಆಗಿದ್ದಾರಂತೆ. ಎಲ್ಲ ತಯಾರಿಯೂ ಗೌಪ್ಯವಾಗಿ ನಡೆಯುತ್ತಿದ್ದು, ಅರಮನೆ ಮೈದಾನದಲ್ಲಿ ಡಿಸೆಂಬರ್​ 11ರಂದು ಎಂಗೇಜ್​ಮೆಂಟ್​ ನಡೆಯಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅದನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಅಂಬರೀಷ್​ ಬ್ಯುಸಿ:

ಅಂಬರೀಷ್​ ಮತ್ತು ಸುಮಲತಾ ರೀತಿಯೇ ಅವರ ಪುತ್ರ ಅಭಿಷೇಕ್​ ಅಂಬರೀಷ್​ ಕೂಡ ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಅವರ ಚೊಚ್ಚಲ ಸಿನಿಮಾ ‘ಅಮರ್​’ 2019ರಲ್ಲಿ ತೆರೆಕಂಡಿತು. ಈ ಚಿತ್ರದ ಹಾಡುಗಳು ಸಖತ್​ ಸದ್ದು ಮಾಡಿದವು. ಈಗ ‘ಬ್ಯಾಡ್​ ಮ್ಯಾನರ್ಸ್​’, ‘ಕಾಳಿ’ ಮುಂತಾದ ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಬ್ಯುಸಿ ಆಗಿದ್ದಾರೆ.

‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರಿಗೆ ರಗಡ್​​ ಗೆಟಪ್​ ಇರಲಿದೆ. ಆ ಚಿತ್ರದ ಫಸ್ಟ್​ ಲುಕ್​ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅವರು ಖ್ಯಾತ ನಿರ್ದೇಶಕ ‘ದುನಿಯಾ’ ಸೂರಿ ಜೊತೆ ಕೆಲಸ ಮಾಡುತ್ತಿರುವುದರಿಂದ ನಿರೀಕ್ಷೆ ಹೆಚ್ಚಿದೆ. ‘ಕಾಳಿ’ ಚಿತ್ರಕ್ಕೆ ‘ಪೈಲ್ವಾನ್​’ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Thu, 24 November 22

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್