AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​

Abhishek Ambareesh Engagement Rumors: ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಆದರೆ ಇದನ್ನು ಸ್ವತಃ ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​
ಅಭಿಷೇಕ್. ಸುಮಲತಾ ಅಂಬರೀಷ್
TV9 Web
| Edited By: |

Updated on:Nov 24, 2022 | 2:02 PM

Share

ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್​ ಅಂಬರೀಷ್ (Abhishek Ambareesh) ಬಗ್ಗೆ ವದಂತಿ ಹಬ್ಬಿದೆ. ಶೀಘ್ರದಲ್ಲೇ ಅವರ ನಿಶ್ಚಿತಾರ್ಥ (Abhishek Ambareesh Engagement) ನೆರವೇರುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಆ ಸುದ್ದಿಯನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ. ನಿಶ್ಚಿತಾರ್ಥಕ್ಕೆ ತಯಾರಿ ನಡೆಯುತ್ತಿದೆ ಎಂಬ ವರದಿ ನಿಜವಲ್ಲ ಎಂದು ಅವರು ಟಿವಿ9 ಡಿಜಿಟಲ್​ಗೆ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. ಅಭಿಷೇಕ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಏಕಾಏಕಿ ಮದುವೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ವದಂತಿ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಈಗ ಸ್ವತಃ ಸುಮಲತಾ ಅಂಬರೀಷ್​ (Sumalatha Ambareesh) ಅವರು ಪ್ರತಿಕ್ರಿಯೆ ನೀಡಿರುವುದರಿಂದ ನಿಶ್ಚಿತಾರ್ಥ ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಸುಮಲತಾ ಅಂಬರೀಷ್​ ಹೇಳಿದ್ದೇನು?

ಮಗನ ಎಂಗೇಜ್​ಮೆಂಟ್​ ಬಗ್ಗೆ ಹರಡಿರುವ ಸುದ್ದಿಯ ಕುರಿತು ಸುಮಲತಾ ಅಂಬರೀಷ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಳೆದ ಎರಡು ವರ್ಷಗಳಿಂದಲೂ ಇಂಥ ವದಂತಿ ಹರಡುತ್ತಲೇ ಇದೆ. ಡಿಸೆಂಬರ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತದೆ ಎಂಬುದೆಲ್ಲ ಸುಳ್ಳು. ಆ ರೀತಿ ಯಾವುದೇ ಪ್ಲ್ಯಾನ್​ ಇಲ್ಲ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಹಬ್ಬಿರುವ ವದಂತಿ ಏನು?

ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಅರಮನೆ ಮೈದಾನದಲ್ಲಿ ಎಂಗೇಜ್​ ಮೆಂಟ್​ ನಡೆಯಲಿದೆಯಂತೆ. ಅಭಿಷೇಕ್​ ಕೈ ಹಿಡಿಯುವ ಹುಡುಗಿ ಮಾಡೆಲ್​ ಆಗಿದ್ದಾರಂತೆ. ಎಲ್ಲ ತಯಾರಿಯೂ ಗೌಪ್ಯವಾಗಿ ನಡೆಯುತ್ತಿದ್ದು, ಅರಮನೆ ಮೈದಾನದಲ್ಲಿ ಡಿಸೆಂಬರ್​ 11ರಂದು ಎಂಗೇಜ್​ಮೆಂಟ್​ ನಡೆಯಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅದನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಅಂಬರೀಷ್​ ಬ್ಯುಸಿ:

ಅಂಬರೀಷ್​ ಮತ್ತು ಸುಮಲತಾ ರೀತಿಯೇ ಅವರ ಪುತ್ರ ಅಭಿಷೇಕ್​ ಅಂಬರೀಷ್​ ಕೂಡ ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಅವರ ಚೊಚ್ಚಲ ಸಿನಿಮಾ ‘ಅಮರ್​’ 2019ರಲ್ಲಿ ತೆರೆಕಂಡಿತು. ಈ ಚಿತ್ರದ ಹಾಡುಗಳು ಸಖತ್​ ಸದ್ದು ಮಾಡಿದವು. ಈಗ ‘ಬ್ಯಾಡ್​ ಮ್ಯಾನರ್ಸ್​’, ‘ಕಾಳಿ’ ಮುಂತಾದ ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಬ್ಯುಸಿ ಆಗಿದ್ದಾರೆ.

‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರಿಗೆ ರಗಡ್​​ ಗೆಟಪ್​ ಇರಲಿದೆ. ಆ ಚಿತ್ರದ ಫಸ್ಟ್​ ಲುಕ್​ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅವರು ಖ್ಯಾತ ನಿರ್ದೇಶಕ ‘ದುನಿಯಾ’ ಸೂರಿ ಜೊತೆ ಕೆಲಸ ಮಾಡುತ್ತಿರುವುದರಿಂದ ನಿರೀಕ್ಷೆ ಹೆಚ್ಚಿದೆ. ‘ಕಾಳಿ’ ಚಿತ್ರಕ್ಕೆ ‘ಪೈಲ್ವಾನ್​’ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Thu, 24 November 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ