AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​

Abhishek Ambareesh Engagement Rumors: ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಆದರೆ ಇದನ್ನು ಸ್ವತಃ ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

Abhishek Ambareesh: ‘ಅಭಿಷೇಕ್​ ಮದುವೆ ವದಂತಿ ಸುಳ್ಳು’; ಟಿವಿ9 ಡಿಜಿಟಲ್​ಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್​
ಅಭಿಷೇಕ್. ಸುಮಲತಾ ಅಂಬರೀಷ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 24, 2022 | 2:02 PM

Share

ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್​ ಅಂಬರೀಷ್ (Abhishek Ambareesh) ಬಗ್ಗೆ ವದಂತಿ ಹಬ್ಬಿದೆ. ಶೀಘ್ರದಲ್ಲೇ ಅವರ ನಿಶ್ಚಿತಾರ್ಥ (Abhishek Ambareesh Engagement) ನೆರವೇರುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಆ ಸುದ್ದಿಯನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ. ನಿಶ್ಚಿತಾರ್ಥಕ್ಕೆ ತಯಾರಿ ನಡೆಯುತ್ತಿದೆ ಎಂಬ ವರದಿ ನಿಜವಲ್ಲ ಎಂದು ಅವರು ಟಿವಿ9 ಡಿಜಿಟಲ್​ಗೆ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. ಅಭಿಷೇಕ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಏಕಾಏಕಿ ಮದುವೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ವದಂತಿ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಈಗ ಸ್ವತಃ ಸುಮಲತಾ ಅಂಬರೀಷ್​ (Sumalatha Ambareesh) ಅವರು ಪ್ರತಿಕ್ರಿಯೆ ನೀಡಿರುವುದರಿಂದ ನಿಶ್ಚಿತಾರ್ಥ ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಸುಮಲತಾ ಅಂಬರೀಷ್​ ಹೇಳಿದ್ದೇನು?

ಮಗನ ಎಂಗೇಜ್​ಮೆಂಟ್​ ಬಗ್ಗೆ ಹರಡಿರುವ ಸುದ್ದಿಯ ಕುರಿತು ಸುಮಲತಾ ಅಂಬರೀಷ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಳೆದ ಎರಡು ವರ್ಷಗಳಿಂದಲೂ ಇಂಥ ವದಂತಿ ಹರಡುತ್ತಲೇ ಇದೆ. ಡಿಸೆಂಬರ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತದೆ ಎಂಬುದೆಲ್ಲ ಸುಳ್ಳು. ಆ ರೀತಿ ಯಾವುದೇ ಪ್ಲ್ಯಾನ್​ ಇಲ್ಲ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಹಬ್ಬಿರುವ ವದಂತಿ ಏನು?

ಅಭಿಷೇಕ್​ ಅಂಬರೀಷ್​ ಅವರ ನಿಶ್ಚಿತಾರ್ಥದ ಕುರಿತು ಸಾಕಷ್ಟು ಅಂತೆ-ಕಂತೆಗಳು ಹಬ್ಬಿವೆ. ಅರಮನೆ ಮೈದಾನದಲ್ಲಿ ಎಂಗೇಜ್​ ಮೆಂಟ್​ ನಡೆಯಲಿದೆಯಂತೆ. ಅಭಿಷೇಕ್​ ಕೈ ಹಿಡಿಯುವ ಹುಡುಗಿ ಮಾಡೆಲ್​ ಆಗಿದ್ದಾರಂತೆ. ಎಲ್ಲ ತಯಾರಿಯೂ ಗೌಪ್ಯವಾಗಿ ನಡೆಯುತ್ತಿದ್ದು, ಅರಮನೆ ಮೈದಾನದಲ್ಲಿ ಡಿಸೆಂಬರ್​ 11ರಂದು ಎಂಗೇಜ್​ಮೆಂಟ್​ ನಡೆಯಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅದನ್ನು ಸುಮಲತಾ ಅಂಬರೀಷ್​ ಅವರು ತಳ್ಳಿ ಹಾಕಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಅಂಬರೀಷ್​ ಬ್ಯುಸಿ:

ಅಂಬರೀಷ್​ ಮತ್ತು ಸುಮಲತಾ ರೀತಿಯೇ ಅವರ ಪುತ್ರ ಅಭಿಷೇಕ್​ ಅಂಬರೀಷ್​ ಕೂಡ ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಅವರ ಚೊಚ್ಚಲ ಸಿನಿಮಾ ‘ಅಮರ್​’ 2019ರಲ್ಲಿ ತೆರೆಕಂಡಿತು. ಈ ಚಿತ್ರದ ಹಾಡುಗಳು ಸಖತ್​ ಸದ್ದು ಮಾಡಿದವು. ಈಗ ‘ಬ್ಯಾಡ್​ ಮ್ಯಾನರ್ಸ್​’, ‘ಕಾಳಿ’ ಮುಂತಾದ ಸಿನಿಮಾ ಕೆಲಸಗಳಲ್ಲಿ ಅಭಿಷೇಕ್​ ಬ್ಯುಸಿ ಆಗಿದ್ದಾರೆ.

‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರಿಗೆ ರಗಡ್​​ ಗೆಟಪ್​ ಇರಲಿದೆ. ಆ ಚಿತ್ರದ ಫಸ್ಟ್​ ಲುಕ್​ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅವರು ಖ್ಯಾತ ನಿರ್ದೇಶಕ ‘ದುನಿಯಾ’ ಸೂರಿ ಜೊತೆ ಕೆಲಸ ಮಾಡುತ್ತಿರುವುದರಿಂದ ನಿರೀಕ್ಷೆ ಹೆಚ್ಚಿದೆ. ‘ಕಾಳಿ’ ಚಿತ್ರಕ್ಕೆ ‘ಪೈಲ್ವಾನ್​’ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Thu, 24 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ