AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಿಯರ್ ಅವತಾರ ತಾಳಿದ ಅಭಿಷೇಕ್ ಅಂಬರೀಶ್​; ಮಹೇಶ್ ಕುಮಾರ್ ನಿರ್ದೇಶನಕ್ಕೆ ರಾಕ್​ಲೈನ್ ಬಂಡವಾಳ  

ಮಹೇಶ್ ಕುಮಾರ್ ಅವರು ‘ಅಯೋಗ್ಯ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಪಡೆದುಕೊಂಡರು. ಆ ಬಳಿಕ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದರು. ಇದಾದ ಬಳಿಕ ಅವರ ಯಾವುದೇ ಚಿತ್ರ ಘೋಷಣೆ ಆಗಿರಲಿಲ್ಲ.

ವಾರಿಯರ್ ಅವತಾರ ತಾಳಿದ ಅಭಿಷೇಕ್ ಅಂಬರೀಶ್​; ಮಹೇಶ್ ಕುಮಾರ್ ನಿರ್ದೇಶನಕ್ಕೆ ರಾಕ್​ಲೈನ್ ಬಂಡವಾಳ  
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 27, 2022 | 1:41 PM

Share

ಅಭಿಷೇಕ್ ಅಂಬರೀಶ್ (Abhishek Ambareesh) ಅವರು ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಹಾಗಂತ ಅವರು ತಮ್ಮ ಬಳಿ ಬಂದ ಎಲ್ಲ ಕಥೆಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಅವರ ತಾಯಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು (ಆಗಸ್ಟ್ 27) ಅಭಿಷೇಕ್ ಹೊಸ ಸಿನಿಮಾದ ಪೋಸ್ಟರ್ ರಿವೀಲ್ ಮಾಡಲಾಗಿದೆ. ವಾರಿಯರ್ ಲುಕ್​ನಲ್ಲಿ ಅವರು ಮಿಂಚಿದ್ದಾರೆ. ಸದ್ಯ ಈ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸುತ್ತಿದೆ.

ಮಹೇಶ್ ಕುಮಾರ್ ಅವರು ‘ಅಯೋಗ್ಯ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಪಡೆದುಕೊಂಡರು. ಆ ಬಳಿಕ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದರು. ಇದಾದ ಬಳಿಕ ಅವರ ಯಾವುದೇ ಚಿತ್ರ ಘೋಷಣೆ ಆಗಿರಲಿಲ್ಲ. ಈಗ ಒಂದೊಳ್ಳೆಯ ಸಿದ್ಧತೆಯೊಂದಿಗೆ, ಒಳ್ಳೆಯ ದಿನ ಹೊಸ ಸಿನಿಮಾ ಘೋಷಿಸಿದ್ದಾರೆ.

ಇದನ್ನೂ ಓದಿ
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇವರು ಅಂಬರೀಷ್​ ತಂಗಿ ರಂಜನಿ..’: ವೇದಿಕೆಯಲ್ಲಿ ಪರಿಚಯ ಮಾಡಿಸಿದ ಸುಮಲತಾ ಅಂಬರೀಷ್​
Image
‘ನಮ್ಮ ಕುಟುಂಬದಿಂದ ಮತ್ತೊಬ್ಬರು ಚಿತ್ರರಂಗಕ್ಕೆ ಬರುತ್ತಿದ್ದಾರೆ’; ಸುಮಲತಾ ಅಂಬರೀಷ್

ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ಖ್ಯಾತ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಈಗ ರಿಲೀಸ್ ಆಗಿರುವ ಹೊಸ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ.

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಈ ಚಿತ್ರದ ಪೋಸ್ಟರ್​ ಇದೆ.  ಪಿರಿಯಡ್ ಡ್ರಾಮಾ ಕಥೆಯಲ್ಲಿ ಯಂಗ್ ರೆಬೆಲ್ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ ಚಿತ್ರದ ಕಥೆ 1,000 ವರ್ಷಗಳ ಹಿಂದೆ ನಡೆಯಲಿದೆ ಎಂದು ತಂಡದವರು ಹೇಳಿಕೊಂಡಿದ್ದಾರೆ. ಈ ಕಾರಣದಿಂದಲೂ ಕುತೂಹಲ ಮನೆ ಮಾಡಿದೆ.

ಇದನ್ನೂ ಓದಿ:  ರೆಬೆಲ್ ಸ್ಟಾರ್ ಅಂಬರೀಶ್ ಕನಸನ್ನು ಸೂಪರ್ ಸ್ಟಾರ್ ಸೋಮಣ್ಣ ನೆರೆವೇರಿಸಿದ್ದಾರೆ ಎಂದು ಹಾಡಿಹೊಗಳಿದ ಸುಮಲತಾ

ಸುಮಲತಾ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಸುಮಲತಾ ಅವರಿಗೆ ಶುಭ ಹಾರೈಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಭಿಷೇಕ್ ಅವರ ಹೊಸ ಸಿನಿಮಾ ಕೂಡ ಲಾಂಚ್ ಆಗಿರುವುದು ಈ ಖುಷಿಯನ್ನು ಡಬಲ್ ಮಾಡಿದೆ. ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ, ಚಿತ್ರದ ನಾಯಕಿ ಯಾರು, ಶೂಟಿಂಗ್ ಯಾವಾಗಿನಿಂದ ಆರಂಭ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Published On - 1:40 pm, Sat, 27 August 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ