AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಚಿತ್ರಕ್ಕೆ ಶುಭ ಹಾರೈಸಿದ ಅಭಿಷೇಕ್ ಅಂಬರೀಶ್; ಪ್ರೀ-ರಿಲೀಸ್ ಈವೆಂಟ್​ನಲ್ಲಿ ಭಾಗವಹಿಸಲಿದ್ದಾರೆ ಈ ಖ್ಯಾತ ತಾರೆಯರು

Salaga: ಚಂದನವನದಲ್ಲಿ ಈಗಾಗಲೇ ‘ಸಲಗ’ ಚಿತ್ರದ ಸದ್ದು ಜೋರಾಗಿದೆ. ಇದೀಗ ಅಭಿಷೇಕ್ ಅಂಬರೀಶ್ ಸಲಗ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ಅಕ್ಟೋಬರ್ 10ರಂದು ನಡೆಯಲಿರುವ ಪ್ರೀ- ರಿಲೀಸ್ ಈವೆಂಟ್​ನಲ್ಲಿ ಖ್ಯಾತ ನಾಯಕರು, ರಾಜಕಾರಣಿಗಳು ಭಾಗವಹಿಸಲಿದ್ದಾರೆ.

‘ಸಲಗ’ ಚಿತ್ರಕ್ಕೆ ಶುಭ ಹಾರೈಸಿದ ಅಭಿಷೇಕ್ ಅಂಬರೀಶ್; ಪ್ರೀ-ರಿಲೀಸ್ ಈವೆಂಟ್​ನಲ್ಲಿ ಭಾಗವಹಿಸಲಿದ್ದಾರೆ ಈ ಖ್ಯಾತ ತಾರೆಯರು
‘ಸಲಗ’ ಚಿತ್ರದ ಪೋಸ್ಟರ್, ಅಭಿಷೇಕ್ ಅಂಬರೀಶ್ (ಬಲ)
TV9 Web
| Edited By: |

Updated on: Oct 09, 2021 | 2:40 PM

Share

ಅಕ್ಟೋಬರ್ 14ರಂದು ದುನಿಯಾ ವಿಜಯ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ‘ಸಲಗ’ ಚಿತ್ರ ಬಿಡುಗಡೆಯಾಗುತ್ತಿದೆ. ಇದಕ್ಕೆ ಚಿತ್ರರಂಗದಿಂದ ಖ್ಯಾತ ತಾರೆಯರೂ ಸೇರಿದಂತೆ ಅನೇಕರು ಶುಭಕೋರುತ್ತಿದ್ದಾರೆ. ನಟ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಕೂಡ ವಿಶೇಷ ಸಂದೇಶದ ಮುಖಾಂತರ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಸಂದೇಶದಲ್ಲಿ ಅವರು ತಮ್ಮ ತಂದೆ ಅಂಬರೀಶ್ ಅವರ ‘ಒಂಟಿ ಸಲಗ’ ಚಿತ್ರದ ನೆನಪನ್ನು ಮಾಡಿಕೊಂಡಿದ್ದಾರೆ. ‘‘ಅಂದು ‘ಒಂಟಿ ಸಲಗ’, ಇಂದು ‘ಸಲಗ’. ಇದೇ ಅಕ್ಟೋಬರ್ 14ರಂದು ಸಲಗ ಬಿಡುಗಡೆಯಾಗುತ್ತದೆ. ದುನಿಯಾ ವಿಜಯ್, ಡಾಲಿ ಧನಂಜಯ್, ನಿರ್ಮಾಪಕ ಶ್ರೀಕಾಂತ್ ಅವರಿಗೆ ಶುಭಹಾರೈಕೆಗಳು. ಎಲ್ಲಾ ಸಿನಿ ಪ್ರೇಮಿಗಳು ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡಿ’’ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

ಅಭಿಷೇಕ್ ಅಂಬರೀಶ್ ಶುಭ ಕೋರಿರುವ ವಿಡಿಯೊ ಇಲ್ಲಿದೆ:

ಸಲಗ ಚಿತ್ರದ ಸೆನ್ಸಾರ್ ಸರ್ಟಿಫಿಕೇಟ್ ‌ಇಟ್ಟು‌ ಅಣ್ಣಮ್ಮ ದೇವಿಗೆ ಪೂಜೆ‌ ಸಲ್ಲಿಸಿದ ಸಲಗ ಚಿತ್ರತಂಡ: ಲಗ ಚಿತ್ರತಂಡವು ಚಿತ್ರದ ಸೆನ್ಸಾರ್ ಸರ್ಟಿಫಿಕೇಟ್ ‌ಇಟ್ಟು‌ ಅಣ್ಣಮ್ಮ ದೇವಿಗೆ ಪೂಜೆ‌ ಸಲ್ಲಿಸಿದೆ. ನಿರ್ದೇಶಕ, ನಟ ದುನಿಯಾ ವಿಜಯ್, ಪತ್ನಿ‌ ಕೀರ್ತಿ, ಪುತ್ರ ಸಾಮ್ರಾಟ್ ಜೊತೆ ಪೂಜೆ ಸಲ್ಲಿಸಿದ್ದಾರೆ. ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್ ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು. ಇದೇ ಅಕ್ಟೋಬರ್ 14ರಂದು ಸಲಗ ಚಿತ್ರವು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ.

ಅದ್ದೂರಿ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಖ್ಯಾತ ತಾರೆಯರು ಭಾಗಿ: ‘ಸಲಗ’ ಚಿತ್ರದ ಪ್ರಿ-ರಿಲೀಸ್ ಅಕ್ಟೋಬರ್ 10ರ ಭಾನುವಾರ ಅದ್ದೂರಿಯಾಗಿ ನಡೆಯಲಿದೆ. ಈವೆಂಟ್​ಗೆ ನಟರಾದ ಪುನೀತ್ ರಾಜಕುಮಾರ್, ಶಿವರಾಜ್​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮೊದಲಾದವರು ಭಾಗವಹಿಸಲಿದ್ದಾರೆ. ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೂಡ ಉಪಸ್ಥಿತರಿರಲಿದ್ದಾರೆ ಎಂದು ನಿರ್ಮಾಪಕ ಕೆಪಿ ಶ್ರೀಕಾಂತ್ ಮಾಹಿತಿ ಹಂಚಿಕೊಂಡಿದ್ದಾರೆ.

‘ಸಲಗ’ ಚಿತ್ರವು ದುನಿಯಾ ವಿಜಯ್ ಆಕ್ಷನ್ ಕಟ್ ಹೇಳಿರುವ ಮೊದಲ ಚಿತ್ರವಾಗಿದೆ. ಈಗಾಗಲೇ ಚಿತ್ರದ ಹಾಡುಗಳು, ಪೋಸ್ಟರ್ ಸಿನಿ ಪ್ರಿಯರ ಮನಗೆದ್ದಿದೆ. ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದ್ದು, ರಾಜ್ಯಾದ್ಯಂತ ಸುಮಾರು ಅಕ್ಟೋಬರ್ 14ರಂದು ಬಿಡುಗಡೆಯಾಗಲಿದೆ. ಅದೇ ದಿನ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಕೂಡ ಬಿಡುಗಡೆಯಾಗಲಿದೆ.

ಇದನ್ನೂ ಓದಿ:

ನನಗೆ ಸುಪ್ರಿತಾ ಜತೆ ಮದುವೆ ಫಿಕ್ಸ್​ ಆಗಿದೆ ಎಂದ ಬಿಗ್​ ಬಾಸ್​ ಶೈನ್ ಶೆಟ್ಟಿ

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

ದುನಿಯಾ ವಿಜಯ್​ ‘ಸಲಗ’ಕ್ಕೆ ಸಿದ್ದರಾಮಯ್ಯ ಬೆಂಬಲ; ತಂಡಕ್ಕೆ ಒಳ್ಳೆಯದಾಗಲಿ ಎಂದ ಮಾಜಿ ಸಿಎಂ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ