AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?

ಈ ವರ್ಷ ಅಭಿಷೇಕ್ ಅಂಬರೀಷ್ ಅವರು ಅವಿವಾರನ್ನು ಮದುವೆ ಆಗಿದ್ದಾರೆ. ಮದುವೆಯ ಬಳಿಕ ಮೊದಲ ವರ್ಷದ ಜನ್ಮದಿನ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಆದರೆ, ಅಭಿಷೇಕ್ ಆ ರೀತಿ ಮಾಡುತ್ತಿಲ್ಲ. ಅವರು ಬರ್ತ್​ಡೇನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?
ಅಭಿಷೇಕ್ ಅಂಬರೀಷ್
TV9 Web
| Edited By: |

Updated on: Oct 02, 2023 | 7:12 AM

Share

ಅಂಬರೀಷ್ (Ambareesh) ಅವರನ್ನು ಕಂಡರೆ ಫ್ಯಾನ್ಸ್​ಗೆ ಸಾಕಷ್ಟು ಪ್ರೀತಿ ಇತ್ತು. ಅಭಿಮಾನಿಗಳನ್ನು ಅಂಬಿ ನಡೆಸಿಕೊಳ್ಳುತ್ತಿದ್ದ ರೀತಿ ಹಾಗಿತ್ತು. ಈ ಪ್ರೀತಿಯನ್ನು ಅಭಿಮಾನಿಗಳು ಮಗನ ಮೇಲೂ ತೋರಿಸುತ್ತಿದ್ದಾರೆ. ಅಂಬಿಗೆ ಕೊಟ್ಟಷ್ಟೇ ಪ್ರೀತಿಯನ್ನು ಫ್ಯಾನ್ಸ್​ ಅಭಿಷೇಕ್​ಗೂ ನೀಡುತ್ತಿದ್ದಾರೆ. ಅಭಿಷೇಕ್ ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅಕ್ಟೋಬರ್ 3 ಅವರ ಜನ್ಮದಿನ. ಆದರೆ, ಬರ್ತ್​ಡೇನ ಅದ್ದೂರಿಯಾಗಿ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿದ್ದಾರೆ.

ಈ ವರ್ಷ ಅಭಿಷೇಕ್ ಅಂಬರೀಷ್ ಅವರು ಅವಿವಾರನ್ನು ಮದುವೆ ಆಗಿದ್ದಾರೆ. ಮದುವೆಯ ಬಳಿಕ ಮೊದಲ ವರ್ಷದ ಜನ್ಮದಿನ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಆದರೆ, ಅಭಿಷೇಕ್ ಆ ರೀತಿ ಮಾಡುತ್ತಿಲ್ಲ. ಈ ಬಾರಿ ಮಳೆ ಸರಿಯಾಗ ಆಗದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಕಾರಣದಿಂದಲೇ ಅವರು ಬರ್ತ್​ಡೇನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

‘ಕೆಲವೇ ದಿನಗಳಲ್ಲಿ ನನ್ನ ಹುಟ್ಟುಹಬ್ಬ ಇರುವುದರಿಂದ ಕೆಲವೊಂದು ವಿಷಯಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಈ ವರ್ಷ ನಮ್ಮ ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಹಾಗೂ ನಮ್ಮ ಕಾವೇರಿಗಾಗಿ ಹಲವಾರು ಜನರು ಹೋರಾಟ ಮಾಡುತ್ತಿರುವುದರಿಂದ ಈ ವರ್ಷ ನಾನು ನನ್ನ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಳ್ಳಲು ಇಚ್ಛಿಸಿದ್ದೇನೆ’ ಎಂದು ಅಭಿಷೇಕ್ ಪತ್ರ ಆರಂಭಿಸಿದ್ದಾರೆ.

‘ಎಲ್ಲಾ ರೆಬೆಲ್ ಅಭಿಮಾನಿಗಳು ನಿಮ್ಮ ಊರುಗಳಲ್ಲಿಯೇ, ನೀವು ಇರುವಲ್ಲಿಯೇ ನನಗೆ ಶುಭಹಾರೈಸಿ ಆಶೀರ್ವದಿಸಿ. ಅಭಿಮಾನಿಗಳು ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನುವುದು ನಮ್ಮ ಸಂಪ್ರದಾಯವಲ್ಲ. ಆದರೆ, ಬಂದವರು ಯಾವುದೇ ಹಾರ, ಕೇಕ್, ಪಟಾಕಿಗಳನ್ನು ಹಾಗೂ ಉಡುಗೊರೆಗಳನ್ನು ತರದೆ ಬಂದು ಶುಭ ಹಾರೈಸಿ. ಇಂತಿ ನಿಮ್ಮ ಪ್ರೀತಿಯ ಅಭಿಷೇಕ್ ಅಂಬರೀಷ್​’ ಎಂದು ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ತಲಕಾವೇರಿಯಲ್ಲಿ ಅಭಿಷೇಕ್ ಅಂಬರೀಷ್​-ಅವಿವಾ ದಂಪತಿಯಿಂದ ವಿಶೇಷ ಪೂಜೆ

ಅದ್ದೂರಿಯಾಗಿ ಅಭಿಷೇಕ್ ಬರ್ತ್​ಡೇ ಆಚರಿಸಬೇಕು ಎನ್ನುವ ಅಭಿಮಾನಿಗಳ ಆಸೆ ಈಡೇರುತ್ತಿಲ್ಲ. ಕೊನೆಪಕ್ಷ ಮನೆ ಬಳಿ ಬಂದು ವಿಶ್ ಮಾಡಲು ಅವಕಾಶ ಸಿಕ್ಕಿದೆಯಲ್ಲ ಎಂದು ಫ್ಯಾನ್ಸ್ ಸಮಾಧಾನಪಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ