AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?

ಈ ವರ್ಷ ಅಭಿಷೇಕ್ ಅಂಬರೀಷ್ ಅವರು ಅವಿವಾರನ್ನು ಮದುವೆ ಆಗಿದ್ದಾರೆ. ಮದುವೆಯ ಬಳಿಕ ಮೊದಲ ವರ್ಷದ ಜನ್ಮದಿನ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಆದರೆ, ಅಭಿಷೇಕ್ ಆ ರೀತಿ ಮಾಡುತ್ತಿಲ್ಲ. ಅವರು ಬರ್ತ್​ಡೇನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?
ಅಭಿಷೇಕ್ ಅಂಬರೀಷ್
TV9 Web
| Edited By: |

Updated on: Oct 02, 2023 | 7:12 AM

Share

ಅಂಬರೀಷ್ (Ambareesh) ಅವರನ್ನು ಕಂಡರೆ ಫ್ಯಾನ್ಸ್​ಗೆ ಸಾಕಷ್ಟು ಪ್ರೀತಿ ಇತ್ತು. ಅಭಿಮಾನಿಗಳನ್ನು ಅಂಬಿ ನಡೆಸಿಕೊಳ್ಳುತ್ತಿದ್ದ ರೀತಿ ಹಾಗಿತ್ತು. ಈ ಪ್ರೀತಿಯನ್ನು ಅಭಿಮಾನಿಗಳು ಮಗನ ಮೇಲೂ ತೋರಿಸುತ್ತಿದ್ದಾರೆ. ಅಂಬಿಗೆ ಕೊಟ್ಟಷ್ಟೇ ಪ್ರೀತಿಯನ್ನು ಫ್ಯಾನ್ಸ್​ ಅಭಿಷೇಕ್​ಗೂ ನೀಡುತ್ತಿದ್ದಾರೆ. ಅಭಿಷೇಕ್ ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅಕ್ಟೋಬರ್ 3 ಅವರ ಜನ್ಮದಿನ. ಆದರೆ, ಬರ್ತ್​ಡೇನ ಅದ್ದೂರಿಯಾಗಿ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿದ್ದಾರೆ.

ಈ ವರ್ಷ ಅಭಿಷೇಕ್ ಅಂಬರೀಷ್ ಅವರು ಅವಿವಾರನ್ನು ಮದುವೆ ಆಗಿದ್ದಾರೆ. ಮದುವೆಯ ಬಳಿಕ ಮೊದಲ ವರ್ಷದ ಜನ್ಮದಿನ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಆದರೆ, ಅಭಿಷೇಕ್ ಆ ರೀತಿ ಮಾಡುತ್ತಿಲ್ಲ. ಈ ಬಾರಿ ಮಳೆ ಸರಿಯಾಗ ಆಗದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಕಾರಣದಿಂದಲೇ ಅವರು ಬರ್ತ್​ಡೇನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

‘ಕೆಲವೇ ದಿನಗಳಲ್ಲಿ ನನ್ನ ಹುಟ್ಟುಹಬ್ಬ ಇರುವುದರಿಂದ ಕೆಲವೊಂದು ವಿಷಯಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಈ ವರ್ಷ ನಮ್ಮ ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಹಾಗೂ ನಮ್ಮ ಕಾವೇರಿಗಾಗಿ ಹಲವಾರು ಜನರು ಹೋರಾಟ ಮಾಡುತ್ತಿರುವುದರಿಂದ ಈ ವರ್ಷ ನಾನು ನನ್ನ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಳ್ಳಲು ಇಚ್ಛಿಸಿದ್ದೇನೆ’ ಎಂದು ಅಭಿಷೇಕ್ ಪತ್ರ ಆರಂಭಿಸಿದ್ದಾರೆ.

‘ಎಲ್ಲಾ ರೆಬೆಲ್ ಅಭಿಮಾನಿಗಳು ನಿಮ್ಮ ಊರುಗಳಲ್ಲಿಯೇ, ನೀವು ಇರುವಲ್ಲಿಯೇ ನನಗೆ ಶುಭಹಾರೈಸಿ ಆಶೀರ್ವದಿಸಿ. ಅಭಿಮಾನಿಗಳು ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನುವುದು ನಮ್ಮ ಸಂಪ್ರದಾಯವಲ್ಲ. ಆದರೆ, ಬಂದವರು ಯಾವುದೇ ಹಾರ, ಕೇಕ್, ಪಟಾಕಿಗಳನ್ನು ಹಾಗೂ ಉಡುಗೊರೆಗಳನ್ನು ತರದೆ ಬಂದು ಶುಭ ಹಾರೈಸಿ. ಇಂತಿ ನಿಮ್ಮ ಪ್ರೀತಿಯ ಅಭಿಷೇಕ್ ಅಂಬರೀಷ್​’ ಎಂದು ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ತಲಕಾವೇರಿಯಲ್ಲಿ ಅಭಿಷೇಕ್ ಅಂಬರೀಷ್​-ಅವಿವಾ ದಂಪತಿಯಿಂದ ವಿಶೇಷ ಪೂಜೆ

ಅದ್ದೂರಿಯಾಗಿ ಅಭಿಷೇಕ್ ಬರ್ತ್​ಡೇ ಆಚರಿಸಬೇಕು ಎನ್ನುವ ಅಭಿಮಾನಿಗಳ ಆಸೆ ಈಡೇರುತ್ತಿಲ್ಲ. ಕೊನೆಪಕ್ಷ ಮನೆ ಬಳಿ ಬಂದು ವಿಶ್ ಮಾಡಲು ಅವಕಾಶ ಸಿಕ್ಕಿದೆಯಲ್ಲ ಎಂದು ಫ್ಯಾನ್ಸ್ ಸಮಾಧಾನಪಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ