AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Bachchan: ‘ಕಬ್ಜ’ ಟ್ರೇಲರ್​ ನೋಡಿ ಅಭಿಷೇಕ್​ ಬಚ್ಚನ್​ ಫಿದಾ; ವಿತರಕರಿಗೆ ಮೆಚ್ಚುಗೆ ಸಂದೇಶ ಕಳಿಸಿದ ನಟ

Kabzaa Movie | Upendra: ಆನಂದ್​ ಪಂಡಿತ್​ ಅವರು ಅಭಿಷೇಕ್​ ಬಚ್ಚನ್​ಗೆ ‘ಕಬ್ಜ’ ಚಿತ್ರದ ಟ್ರೇಲರ್​ ಕಳಿಸಿದ್ದಾರೆ. ಅದನ್ನು ನೋಡಿ ಅವರು ಪ್ರತಿಕ್ರಿಯೆ ತಿಳಿಸಿದ್ದಾರೆ.

Abhishek Bachchan: ‘ಕಬ್ಜ’ ಟ್ರೇಲರ್​ ನೋಡಿ ಅಭಿಷೇಕ್​ ಬಚ್ಚನ್​ ಫಿದಾ; ವಿತರಕರಿಗೆ ಮೆಚ್ಚುಗೆ ಸಂದೇಶ ಕಳಿಸಿದ ನಟ
ಅಭಿಷೇಕ್ ಬಚ್ಚನ್, ಉಪೇಂದ್ರ
ಮದನ್​ ಕುಮಾರ್​
|

Updated on: Mar 06, 2023 | 3:34 PM

Share

ಉಪೇಂದ್ರ, ಕಿಚ್ಚ ಸುದೀಪ್​, ಶಿವರಾಜ್​ಕುಮಾರ್​, ಶ್ರೀಯಾ ಶರಣ್​ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ ಮಾಡಿದ್ದು, ದೇಶಾದ್ಯಂತ ನಿರೀಕ್ಷೆ ಮೂಡಿಸಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್​ (Kabzaa Trailer) ರಿಲೀಸ್​ ಆಯಿತು. ಅದನ್ನು ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಫ್ಯಾನ್ಸ್​ ಮಾತ್ರವಲ್ಲದೇ ಬಾಲಿವುಡ್​ ಮಂದಿ ಕೂಡ ಫಿದಾ ಆಗಿದ್ದಾರೆ. ಖ್ಯಾತ ನಟ ಅಭಿಷೇಕ್​ ಬಚ್ಚನ್​ ಅವರಿಗೆ ‘ಕಬ್ಜ’ ಸಿನಿಮಾದ ಟ್ರೇಲರ್​ ಇಷ್ಟ ಆಗಿದೆ. ಹಿಂದಿ ವಿತರಕರಾದ ಆನಂದ್​ ಪಂಡಿತ್​ ಅವರಿಗೆ ಅಭಿಷೇಕ್​ ಬಚ್ಚನ್ (Abhishek Bachchan) ಮೆಸೇಜ್​ ಮಾಡಿ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ.

ಕರ್ನಾಟಕದಲ್ಲಿ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಕಬ್ಜ’ ಸಿನಿಮಾ ಸದ್ದು ಮಾಡಲಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಸಿನಿಮಾ ತೆರೆಕಾಣಲಿದೆ. ಆನಂದ್​ ಪಂಡಿತ್​ ಅವರು ಈ ಚಿತ್ರವನ್ನು ಹಿಂದಿಯಲ್ಲಿ ವಿತರಣೆ ಮಾಡಲಿದ್ದಾರೆ. ಬಚ್ಚನ್​ ಕುಟುಂಬದ ಜೊತೆ ಅವರಿಗೆ ಒಡನಾಟ ಇದೆ. ಅಭಿಷೇಕ್​ ಬಚ್ಚನ್​ ಅವರಿಗೆ ಟ್ರೇಲರ್​ ಕಳಿಸಲಾಗಿದ್ದು, ಅದನ್ನು ನೋಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ತುಂಬ ದೊಡ್ಡದಾಗಿ. ಅಭಿನಂದನೆಗಳು ಆನಂದ್​ ಭಾಯ್​’ ಎಂದು ಅಭಿಷೇಕ್​ ಬಚ್ಚನ್​ ಮೆಸೇಜ್​ ಕಳಿಸಿದ್ದಾರೆ.

ಇದನ್ನೂ ಓದಿ: Kabzaa Trailer: ಕಬ್ಜ ಟ್ರೈಲರ್ ಬಿಡುಗಡೆ, ಕತ್ತರಿಸುವ ಕೈಗಳು ಬರೆದ ಇತಿಹಾಸವಿದು, ಎರಡು ಶೇಡ್​ನಲ್ಲಿ ಉಪ್ಪಿ

ಇದನ್ನೂ ಓದಿ
Image
Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ
Image
Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ
Image
‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಮಾರ್ಚ್​ 4ರಂದು ‘ಕಬ್ಜ’ ಟ್ರೇಲರ್​ ಬಿಡುಗಡೆ ಆಯಿತು. ಅಮಿತಾಭ್​ ಬಚ್ಚನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಲಿಂಕ್​ ಹಂಚಿಕೊಳ್ಳುವ ಮೂಲಕ ಟ್ರೇಲರ್​ ಅನಾವರಣ ಮಾಡಿದರು. ‘ನನ್ನ ಪ್ರೀತಿಯ ಸ್ನೇಹಿತ ಆನಂದ್​ ಪಂಡಿತ್​ ನಿರ್ಮಾಣ ಮಾಡಿರುವ ಮತ್ತು ಆರ್​. ಚಂದ್ರು ನಿರ್ದೇಶನ ಮಾಡಿರುವ ಕಬ್ಜ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲು ಹೆಮ್ಮೆ ಎನಿಸುತ್ತಿದೆ. ಉಪೇಂದ್ರ, ಕಿಚ್ಚ ಸುದೀಪ್​, ಶ್ರೀಯಾ ಶರಣ್​ ಹಾಗೂ ಶಿವರಾಜ್​ಕುಮಾರ್​ ಅವರಿಗೆ ಆಲ್​ ದಿ ಬೆಸ್ಟ್​’ ಎಂದು ಅಮಿತಾಭ್​​ ಬಚ್ಚನ್​ ಟ್ವೀಟ್​ ಮಾಡಿದರು. ಅದರ ಬೆನ್ನಲ್ಲೇ ಅಭಿಷೇಕ್​ ಬಚ್ಚನ್​ ಕೂಡ ಟ್ರೇಲರ್​ ನೋಡಿ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: Tanya Hope: ಸುಡು ಬೇಸಿಗೆಯಲ್ಲೂ ‘ಕಬ್ಜ’ ಚಿತ್ರದ ‘ಚುಂ ಚುಂ ಚಳಿ..’ ಹಾಡಿಗೆ ಉಪೇಂದ್ರ ಅಭಿಮಾನಿಗಳು ಫಿದಾ

ಪುನೀತ್ ರಾಜ್​ಕುಮಾರ್​ ಜನ್ಮದಿನದ ಪ್ರಯುಕ್ತ ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಈ ಸಿನಿಮಾ ಬಗ್ಗೆ ಕ್ರೇಜ್​ ಸೃಷ್ಟಿ ಆಗಿದೆ. ಟ್ರೇಲರ್​ನಲ್ಲಿ ಕಾಣಿಸಿದ ತಾಂತ್ರಿಕ ಗುಣಮಟ್ಟ ಕಂಡು ಸಿನಿಪ್ರಿಯರು ಫಿದಾ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು