Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Bachchan: ‘ಕಬ್ಜ’ ಟ್ರೇಲರ್​ ನೋಡಿ ಅಭಿಷೇಕ್​ ಬಚ್ಚನ್​ ಫಿದಾ; ವಿತರಕರಿಗೆ ಮೆಚ್ಚುಗೆ ಸಂದೇಶ ಕಳಿಸಿದ ನಟ

Kabzaa Movie | Upendra: ಆನಂದ್​ ಪಂಡಿತ್​ ಅವರು ಅಭಿಷೇಕ್​ ಬಚ್ಚನ್​ಗೆ ‘ಕಬ್ಜ’ ಚಿತ್ರದ ಟ್ರೇಲರ್​ ಕಳಿಸಿದ್ದಾರೆ. ಅದನ್ನು ನೋಡಿ ಅವರು ಪ್ರತಿಕ್ರಿಯೆ ತಿಳಿಸಿದ್ದಾರೆ.

Abhishek Bachchan: ‘ಕಬ್ಜ’ ಟ್ರೇಲರ್​ ನೋಡಿ ಅಭಿಷೇಕ್​ ಬಚ್ಚನ್​ ಫಿದಾ; ವಿತರಕರಿಗೆ ಮೆಚ್ಚುಗೆ ಸಂದೇಶ ಕಳಿಸಿದ ನಟ
ಅಭಿಷೇಕ್ ಬಚ್ಚನ್, ಉಪೇಂದ್ರ
Follow us
ಮದನ್​ ಕುಮಾರ್​
|

Updated on: Mar 06, 2023 | 3:34 PM

ಉಪೇಂದ್ರ, ಕಿಚ್ಚ ಸುದೀಪ್​, ಶಿವರಾಜ್​ಕುಮಾರ್​, ಶ್ರೀಯಾ ಶರಣ್​ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ ಮಾಡಿದ್ದು, ದೇಶಾದ್ಯಂತ ನಿರೀಕ್ಷೆ ಮೂಡಿಸಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್​ (Kabzaa Trailer) ರಿಲೀಸ್​ ಆಯಿತು. ಅದನ್ನು ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಫ್ಯಾನ್ಸ್​ ಮಾತ್ರವಲ್ಲದೇ ಬಾಲಿವುಡ್​ ಮಂದಿ ಕೂಡ ಫಿದಾ ಆಗಿದ್ದಾರೆ. ಖ್ಯಾತ ನಟ ಅಭಿಷೇಕ್​ ಬಚ್ಚನ್​ ಅವರಿಗೆ ‘ಕಬ್ಜ’ ಸಿನಿಮಾದ ಟ್ರೇಲರ್​ ಇಷ್ಟ ಆಗಿದೆ. ಹಿಂದಿ ವಿತರಕರಾದ ಆನಂದ್​ ಪಂಡಿತ್​ ಅವರಿಗೆ ಅಭಿಷೇಕ್​ ಬಚ್ಚನ್ (Abhishek Bachchan) ಮೆಸೇಜ್​ ಮಾಡಿ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ.

ಕರ್ನಾಟಕದಲ್ಲಿ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಕಬ್ಜ’ ಸಿನಿಮಾ ಸದ್ದು ಮಾಡಲಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಸಿನಿಮಾ ತೆರೆಕಾಣಲಿದೆ. ಆನಂದ್​ ಪಂಡಿತ್​ ಅವರು ಈ ಚಿತ್ರವನ್ನು ಹಿಂದಿಯಲ್ಲಿ ವಿತರಣೆ ಮಾಡಲಿದ್ದಾರೆ. ಬಚ್ಚನ್​ ಕುಟುಂಬದ ಜೊತೆ ಅವರಿಗೆ ಒಡನಾಟ ಇದೆ. ಅಭಿಷೇಕ್​ ಬಚ್ಚನ್​ ಅವರಿಗೆ ಟ್ರೇಲರ್​ ಕಳಿಸಲಾಗಿದ್ದು, ಅದನ್ನು ನೋಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ತುಂಬ ದೊಡ್ಡದಾಗಿ. ಅಭಿನಂದನೆಗಳು ಆನಂದ್​ ಭಾಯ್​’ ಎಂದು ಅಭಿಷೇಕ್​ ಬಚ್ಚನ್​ ಮೆಸೇಜ್​ ಕಳಿಸಿದ್ದಾರೆ.

ಇದನ್ನೂ ಓದಿ: Kabzaa Trailer: ಕಬ್ಜ ಟ್ರೈಲರ್ ಬಿಡುಗಡೆ, ಕತ್ತರಿಸುವ ಕೈಗಳು ಬರೆದ ಇತಿಹಾಸವಿದು, ಎರಡು ಶೇಡ್​ನಲ್ಲಿ ಉಪ್ಪಿ

ಇದನ್ನೂ ಓದಿ
Image
Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ
Image
Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ
Image
‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಮಾರ್ಚ್​ 4ರಂದು ‘ಕಬ್ಜ’ ಟ್ರೇಲರ್​ ಬಿಡುಗಡೆ ಆಯಿತು. ಅಮಿತಾಭ್​ ಬಚ್ಚನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಲಿಂಕ್​ ಹಂಚಿಕೊಳ್ಳುವ ಮೂಲಕ ಟ್ರೇಲರ್​ ಅನಾವರಣ ಮಾಡಿದರು. ‘ನನ್ನ ಪ್ರೀತಿಯ ಸ್ನೇಹಿತ ಆನಂದ್​ ಪಂಡಿತ್​ ನಿರ್ಮಾಣ ಮಾಡಿರುವ ಮತ್ತು ಆರ್​. ಚಂದ್ರು ನಿರ್ದೇಶನ ಮಾಡಿರುವ ಕಬ್ಜ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲು ಹೆಮ್ಮೆ ಎನಿಸುತ್ತಿದೆ. ಉಪೇಂದ್ರ, ಕಿಚ್ಚ ಸುದೀಪ್​, ಶ್ರೀಯಾ ಶರಣ್​ ಹಾಗೂ ಶಿವರಾಜ್​ಕುಮಾರ್​ ಅವರಿಗೆ ಆಲ್​ ದಿ ಬೆಸ್ಟ್​’ ಎಂದು ಅಮಿತಾಭ್​​ ಬಚ್ಚನ್​ ಟ್ವೀಟ್​ ಮಾಡಿದರು. ಅದರ ಬೆನ್ನಲ್ಲೇ ಅಭಿಷೇಕ್​ ಬಚ್ಚನ್​ ಕೂಡ ಟ್ರೇಲರ್​ ನೋಡಿ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: Tanya Hope: ಸುಡು ಬೇಸಿಗೆಯಲ್ಲೂ ‘ಕಬ್ಜ’ ಚಿತ್ರದ ‘ಚುಂ ಚುಂ ಚಳಿ..’ ಹಾಡಿಗೆ ಉಪೇಂದ್ರ ಅಭಿಮಾನಿಗಳು ಫಿದಾ

ಪುನೀತ್ ರಾಜ್​ಕುಮಾರ್​ ಜನ್ಮದಿನದ ಪ್ರಯುಕ್ತ ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಈ ಸಿನಿಮಾ ಬಗ್ಗೆ ಕ್ರೇಜ್​ ಸೃಷ್ಟಿ ಆಗಿದೆ. ಟ್ರೇಲರ್​ನಲ್ಲಿ ಕಾಣಿಸಿದ ತಾಂತ್ರಿಕ ಗುಣಮಟ್ಟ ಕಂಡು ಸಿನಿಪ್ರಿಯರು ಫಿದಾ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ