AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್

ನಟ ಅಭಿಷೇಕ್ ಅಂಬರೀಷ್ ತಮ್ಮ ಮುಂದಿನ ಚಿತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ವಿಲಕ್ಷಣ ಉತ್ತರ ನೀಡಿದ್ದಾರೆ. 'ಅಯೋಗ್ಯ 2' ಚಿತ್ರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿನಿಮಾದ ಬಗ್ಗೆ ಬಿಟ್ಟು 'ಈ ಅಯೋಗ್ಯನ ಬಗ್ಗೆ ಮಾತನಾಡುವುದು ಬೇಡ' ಎಂದು ತಮ್ಮನ್ನು ತಾವೇ ಕಾಲೆಳೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್
ಅಭಿಷೇಕ್ ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on: Aug 03, 2026 | 10:58 AM

Share

ಮುಖ್ಯಾಂಶಗಳು

  • ತಮ್ಮನ್ನು ತಾವು 'ಅಯೋಗ್ಯ' ಎಂದು ಕರೆದುಕೊಂಡ ಅಭಿಷೇಕ್ ಅಂಬರೀಷ್
  • ಮುಂದಿನ ಸಿನಿಮಾ ಅಪ್ಡೇಟ್ ಕೇಳಿದ ಆ್ಯಂಕರ್‌ಗೆ ಶಾಕ್
  • ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ಅಭಿಷೇಕ್ ವಿಡಿಯೋ

ಅಭಿಷೇಕ್ ಅಂಬರೀಷ್ (Abhishek Ambareesh) ಇತ್ತೀಚೆಗೆ ಸೈಲೆಂಟ್ ಆಗಿದ್ದಾರೆ. ಖ್ಯಾತ ನಟ ಅಂಬರೀಷ್ ಅವರ ಮಗನಾಗಿದ್ದರೂ ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಅವರು ತಮ್ಮನ್ನು ತಾವು ಅಯೋಗ್ಯ ಎಂದು ಕರೆದುಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣ ಆಗಿದೆ. ಅನೇಕರು ಈ ವಿಡಿಯೋ ಹಂಚಿಕೊಳ್ಳುತ್ತಾ ಇದ್ದಾರೆ.

ಅಭಿಷೇಕ್ ಅವರು ಮೊದಲು ನಟಿಸಿದ್ದು 2019ರ ‘ಅಮರ್’ ಸಿನಿಮಾದಲ್ಲಿ. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಆ ಬಳಿಕ 2023ರಲ್ಲಿ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಮಾಡಿದರು. ಈ ಚಿತ್ರ ಕೂಡ ಫೇಲ್ ಆಯಿತು. ಸಿನಿಮಾ ಸಂಪೂರ್ಣವಾಗಿ ಸೋತಿತ್ತು. ಆ ಬಳಿಕ ಅಭಿಷೇಕ್ ಅಂಬರೀಷ್ ಅವರು ‘ಕಾಳಿ’ ಚಿತ್ರ ಒಪ್ಪಿಕೊಂಡರು. ಈ ಸಿನಿಮಾದ ಲುಕ್ 2022ರಲ್ಲೇ ರಿಲೀಸ್ ಆಗಿದ್ದರೂ ಸಿನಿಮಾ ಸೆಟ್ಟೇರಿಲಿಲ್ಲ.

ಅಭಿಷೇಕ್ ವೃತ್ತಿ ಜೀವನದಲ್ಲಿ ಮಾಡಿದ್ದು ಕೇವಲ ಎರಡು ಸಿನಿಮಾ ಮಾತ್ರ. ಹೀಗಾಗಿ, ಅವರ ಮುಂದಿನ ಸಿನಿಮಾ ಯಾವಾಗ ಎಂಬ ಪ್ರಶ್ನೆ ಮುಡೋದು ಸಹಜ. ಇತ್ತೀಚೆಗೆ ನಡೆದ ‘ಅಯೋಗ್ಯ 2’ ಸಿನಿಮಾ ಈವೆಂಟ್​​ನಲ್ಲಿ ಅಭಿಷೇಕ್ ಅಂಬರೀಷ್​​ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಿಮ್ಮ ಮುಂದಿನ ಸಿನಿಮಾ ಯಾವಾಗ’ ಎಂದು ಆ್ಯಂಕರ್ ನಿರಂಜನ್ ದೇಶಪಾಂಡೆ ಕೇಳಿದರು. ಇದಕ್ಕೆ ಅಭಿಷೇಕ್ ಕೊಟ್ಟ ಉತ್ತರ ವಿಚಿತ್ರವಾಗಿತ್ತು.

ಇದನ್ನೂ ಓದಿ: ‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?

‘ನಾವಿಲ್ಲಿ ಅಯೋಗ್ಯ 2 ಸಿನಿಮಾ ಬಗ್ಗೆ ಮಾತನಾಡೋಕೆ ಬಂದಿದ್ದೇವೆ. ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’ ಎಂದು ನೇರವಾಗಿ ಹೇಳಿದರು. ಆಗ ಇದಕ್ಕೂ ಕೆಲವರು ಚಪ್ಪಾಳೆ ತಟ್ಟಿ,  ಶಿಳ್ಳೆ ಹೊಡೆದರು. ‘ಬಹುಶಃ ಹೆಚ್ಚಿನ ಹಣ ಕೊಟ್ಟಿದ್ದೇನೆ’ ಎಂದು ಅವರೇ ಒಪ್ಪಿಕೊಂಡರು. ಈ ವಿಡಿಯೋ ವೈರಲ್ ಆಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ