AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಾತ್ತಾಪಕ್ಕೆಲ್ಲ ಹೊಡಿ ಗೋಲಿ, ಕೊಲೆ ಆರೋಪಿ ದರ್ಶನ್ ನಿಜ ವ್ಯಕ್ತಿತ್ವ ಮತ್ತೆ ಬಯಲು

ಕೊಲೆ ಆರೋಪಿ ದರ್ಶನ್ ತೂಗುದೀಪ, ಇಂದು ಬಳ್ಳಾರಿ ಜೈಲಿನಲ್ಲಿ ತಮ್ಮ ಹಳೆಯ ವಿಲನ್ ವ್ಯಕ್ತಿತ್ವ ಪ್ರದರ್ಶಿಸಿದ್ದಾರೆ. ಜೀವವೊಂದು ಹೋಗಲು ಕಾರಣವಾಗಿರುವ ಯಾವ ಪಶ್ಚಾತ್ತಾಪವೂ ಇಲ್ಲದೆ ಕ್ಯಾಮೆರಾಗಳಿಗೆ ಅಸಹ್ಯ ಸಜ್ಞೆಗಳನ್ನು ಮಾಡುತ್ತಾ ವಿಲನ್​ತನ ಮೆರೆದಿದ್ದಾರೆ.

ಪಶ್ಚಾತ್ತಾಪಕ್ಕೆಲ್ಲ ಹೊಡಿ ಗೋಲಿ, ಕೊಲೆ ಆರೋಪಿ ದರ್ಶನ್ ನಿಜ ವ್ಯಕ್ತಿತ್ವ ಮತ್ತೆ ಬಯಲು
ಮಂಜುನಾಥ ಸಿ.
|

Updated on: Sep 12, 2024 | 5:28 PM

Share

ರೇಣುಕಾ ಸ್ವಾಮಿಯ ಅಮಾನುಷ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ ಇನ್ನಿತರೆ ಆರೋಪಿಗಳು ಜೈಲು ಸೇರಿದ್ದಾರೆ. ಆರಂಭದಲ್ಲಿ ಪೊಲೀಸರ ಭಯಕ್ಕೆ ಬಳಲಿ ಬೆಂಡಾಗಿದ್ದ ದರ್ಶನ್ ಈಗ ತಿಂಗಳುಗಳು ಕಳೆಯುತ್ತಾ ಜೈಲಿನ ಪರಿಸ್ಥಿತಿಗೆ ಒಗ್ಗಿಕೊಂಡಂತಿದೆ. ಪರಪ್ಪನ ಅಗ್ರಹಾರ ಜೈಲಿಗೆ ಹಾಕಿದ್ದಾಗ, ಅಲ್ಲಿ ನಿಯಮ ಮುರಿದು ಜೈಲನ್ನು ರೆಸಾರ್ಟ್ ಮಾಡಿಕೊಂಡಿದ್ದ ದರ್ಶನ್, 9 ಅಧಿಕಾರಿಗಳ ಅಮಾನತ್ತಿಗೆ ಕಾರಣವಾಗಿ ಈಗ ಬಳ್ಳಾರಿ ಜೈಲಿಗೆ ಬಂದಿದ್ದಾರೆ. ಇಲ್ಲಿಯೂ ಸಹ ಆರಂಭದ ಕೆಲ ದಿನ ಹುಳ್ಳಗೆ ಇದ್ದ ದರ್ಶನ್ ಈಗ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ಮತ್ತೆ ಚಿಗುರಿದಂತೆ ಕಾಣುತ್ತಿದ್ದಾರೆ.

ಇಂದು (ಸೆಪ್ಟೆಂಬರ್ 12) ಮಧ್ಯಾಹ್ನ ಜೈಲಿನಿಂದ ಸಂದರ್ಶಕರ ಕೊಠಡಿಗೆ ಹೋಗುವ ಸಂದರ್ಭದಲ್ಲಿ ಗೇಟಿನ ಹೊರಗೆ ಕಂಡ ಮಾಧ್ಯಮಗಳ ಕ್ಯಾಮೆರಾ ನೋಡುತ್ತಿದ್ದಂತೆ ನಡಿಗೆಯನ್ನೇ ಬದಲಿಸಿ, ವಿಲನ್ ನಡಿಗೆ ಆವಾಹಿಸಿಕೊಂಡಿದ್ದಲ್ಲದೆ, ಮಧ್ಯದ ಬೆರಳು ತೋರಿಸುವ ಮೂಲಕ ತಮ್ಮ ಕೃತ್ರಿಮ ವ್ಯಕ್ತಿತ್ವವನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದ್ದಾರೆ. ಇತರರ ತುಚ್ಛೀಕರಿಸುವ, ತಾನು ಮೇಲೆಂದು ತೋರ್ಪಡಿಸುವ, ಸರ್ವ ಶಕ್ತನೆಂದು ಪ್ರದರ್ಶಿಸುವ ಹಮ್ಮಿನಲ್ಲಿಯೇ ಜೀವವೇ ಹೋಗಲು ಕಾರಣವಾಗಿರುವ ದರ್ಶನ್, ಜೈಲಿನಲ್ಲಿದ್ದರೂ ಅದೇ ವ್ಯಕ್ತಿತ್ವವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ:ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ದಾಸನಿಗೆ ಬೇಸರ

ದರ್ಶನ್, ಕೊಲೆ ಆರೋಪಿಯಾಗಿ ಜೈಲು ಸೇರಿದ ಆರಂಭದಲ್ಲಿ, ದರ್ಶನ್ ಪಶ್ಚಾತ್ತಾಪದಲ್ಲಿದ್ದಾರೆ ಎಂಬೆಲ್ಲ ಮಾತುಗಳು ಕೇಳಿ ಬಂದಿದ್ದವು, ನ್ಯಾಯಾಲಯಕ್ಕೆ ಬರುತ್ತಿದ್ದಾಗ ಅವರ ಮುಖಚಹರೆಯೂ ಹಾಗೆಯೇ ಇತ್ತು. ಆದರೆ ಈಗ ಆರೋಪ ಪಟ್ಟಿ ಸಲ್ಲಿಕೆಯಾಗಿ ಜಾಮೀನಿಗೆ ಅರ್ಜಿ ಹಾಕುವ ಸಮಯ ಹತ್ತಿರ ಬರುತ್ತಿದ್ದಂತೆ ವರಸೆ ಬದಲು ಮಾಡಿಕೊಂಡಿದ್ದಾರೆ ನಟ ದರ್ಶನ್. ತಮ್ಮ ಅಟ್ಟಹಾಸದಿಂದ ಜೀವವೊಂದು ಹೋಗಿರುವ ಬಗ್ಗೆ ಕಿಂಚಿತ್ತೂ ಪಶ್ಚತ್ತಾಪವಿಲ್ಲದೆ, ಸಿನಿಮಾಗಳಲ್ಲಿ ವಿಲನ್​ಗಳು ಬಂದಂತೆ ಅಟ್ಟಹಾಸದ ನಡಿಗೆ ನಡೆಯುತ್ತಾ, ವಿನಾಕಾರಣ ಕ್ಯಾಮೆರಾಗಳಿಗೆ ಮಧ್ಯದ ಬೆರಳು ತೋರಿಸಿದ್ದಾರೆ.

ಇಂದು, ದರ್ಶನ್ ಪರ ವಕೀಲರು ಹಾಗೂ ವಿಜಯಲಕ್ಷ್ಮಿ, ದಿನಕರ್ ತೂಗುದೀಪ ಅವರುಗಳು ದರ್ಶನ್ ಅನ್ನು ನೋಡಲು ಬಳ್ಳಾರಿಗೆ ಆಗಮಿಸಿದ್ದರು. ಆರೋಪ ಪಟ್ಟಿ ಸಲ್ಲಿಕ ಆಗಿದ್ದು, ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ಇಂದು ಚರ್ಚಿಸಲಾಗಿದೆ. ಜಾಮೀನು ಅರ್ಜಿಯ ಜೊತೆಗೆ, ದರ್ಶನ್ ಅನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ