AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗಿಂತ ಆ ನಟಿಯನ್ನು ರಕ್ಷಿತ್ ಶೆಟ್ಟಿ ಕಾಳಜಿ ಮಾಡಿದ: ಯೋಗಿ-ದಿಗಂತ್ ಅಳಲು, ಯಾರು ಆ ನಟಿ?

Rakshit Shetty: ‘ಬ್ಯಾಚುಲರ್ ಪಾರ್ಟಿ’ ಸಿನಿಮಾದ ನಿರ್ಮಾಪಕ ರಕ್ಷಿತ್ ಶೆಟ್ಟಿ, ತಮ್ಮಿಬ್ಬರಿಗಿಂತಲೂ ಆ ನಟಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದ ಎಂದು ಯೋಗಿ-ದಿಗಂತ್ ಅಳಲು ತೋಡಿಕೊಂಡಿದ್ದಾರೆ. ಯಾರು ಆ ನಟಿ?

ನಮಗಿಂತ ಆ ನಟಿಯನ್ನು ರಕ್ಷಿತ್ ಶೆಟ್ಟಿ ಕಾಳಜಿ ಮಾಡಿದ: ಯೋಗಿ-ದಿಗಂತ್ ಅಳಲು, ಯಾರು ಆ ನಟಿ?
ಮಂಜುನಾಥ ಸಿ.
|

Updated on:Jan 18, 2024 | 12:01 AM

Share

ರಕ್ಷಿತ್ ಶೆಟ್ಟಿ (Rakshit Shetty) ನಿರ್ಮಾಣ ಮಾಡಿದ ದಿಗಂತ್ ಹಾಗೂ ಯೋಗಿ ಒಟ್ಟಿಗೆ ನಟಿಸಿರುವ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜನವರಿ 26ಕ್ಕೆ ತೆರೆಗೆ ಬರಲಿದೆ. ಯೋಗಿ ಹಾಗೂ ದಿಗಂತ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ಮಾಪಕರು ಸೆಟ್​ಗೆ ಬರ್ತಿದ್ದರಾ? ಎಂಬ ಪ್ರಶ್ನೆಗೆ ಯೋಗಿ, ಶೂಟಿಂಗ್​ ಸಮಯದಲ್ಲಿ ಸೆಟ್​ನಲ್ಲಿ ಒಂದು ಭಾರಿ ಮಾತ್ರ ನಾನು ರಕ್ಷಿತ್ ಅನ್ನು ಭೇಟಿ ಮಾಡಿದೆ ಎಂದರು. ಅದಕ್ಕೆ ದಿಗಂತ್ ಅಂದು ಆ ನಟಿ ಸೆಟ್​ಗೆ ಬಂದಿದ್ದರು ಅದಕ್ಕೆ ಬಂದಿದ್ದ ಎಂದರು. ಅದಕ್ಕೆ ಯೋಗಿ ಅಯ್ಯೋ ಹೌದು, ನೋಡಿ ಬಹುಷಃ ಆ ನಟಿ ಸೆಟ್​ಗೆ ಬಂದಿದ್ದರು ಎಂಬ ಕಾರಣಕ್ಕೆ ರಕ್ಷಿತ್ ಶೆಟ್ಟಿ ಸೆಟ್​ಗೆ ಬಂದಿದ್ದ ಅನ್ನಿಸುತ್ತದೆ ಎಂದರು. ಅಂದಹಾಗೆ ಆ ಹುಡುಗಿ ಯಾರು?

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಸಿನಿಮಾ ನಟರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಹಲವರನ್ನು ಬಳಸಿಕೊಳ್ಳಲಾಗಿದೆ. ಕನ್ನಡದ ಜನಪ್ರಿಯ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಒಬ್ಬ ಅಂತರಾಷ್ಟ್ರೀಯ ಯೂಟ್ಯೂಬರ್ ಸಹ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ ಅವರೇ ಅಚಾರಾ ಕರ್ಕ್.

ಬಾಯ್​ಫ್ರೆಂಡ್ ಜೊತೆ ಸೇರಿಕೊಂಡು ರಿಯಾಕ್ಷನ್ ವಿಡಿಯೋಗಳನ್ನು ಮಾಡುತ್ತಾ ಬಹಳ ಜನಪ್ರಿಯತೆ ಗಳಿಸಿರುವ ಅಚಾರಾ ಕರ್ಕ್ ಅವರು ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಭಾರತಕ್ಕೆ ಬಂದು ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಯೋಗಿ ತಮಾಷೆಯಾಗಿ ಹೇಳಿದ್ದು ಇದೇ ನಟಿಯ ಬಗ್ಗೆ.

ಅಚಾರಾ ಕರ್ಕ್ ಹಾಗೂ ಜಾಬಿ ಕೇ ಒಟ್ಟಿಗೆ ಭಾರತೀಯ ಸಿನಿಮಾ, ಟ್ರೈಲರ್, ಭಾರತದ ವೈರಲ್ ಕಂಟೆಂಟ್​ ಗಳ ಬಗ್ಗೆ ರಿಯಾಕ್ಷನ್ ವಿಡಿಯೋಗಳನ್ನು ಕೆಲವು ವರ್ಷಗಳಿಂದ ಮಾಡುತ್ತಿದ್ದಾರೆ. ಭಾರತದ ಕೆಲವು ಯೂಟ್ಯೂಬರ್​ಗಳು, ಸಿನಿಮಾ ಕರ್ಮಿಗಳ ಜೊತೆಗೆ ಬಾಂಧವ್ಯವನ್ನೂ ಹೊಂದಿದ್ದಾರೆ. ಭಾರತದ ಕೆಲವು ಸಿನಿಮಾಗಳ ಪ್ರೀಮಿಯರ್ ಶೋಗೂ ಅವರಿಗೆ ಆಹ್ವಾನ ಹೋಗುತ್ತದೆ. ಅವರೂ ಸಹ ಆಸಕ್ತಿಯಿಂದ ಭಾಗವಹಿಸುತ್ತಾರೆ. ಈ ಇಬ್ಬರಿಗೂ ಭಾರತದ ಕಂಟೆಂಟ್ ಬಗ್ಗೆ ಸಿನಿಮಾ ರಂಗಗಳ ಬಗ್ಗೆ ಅತೀವ ಆಸಕ್ತಿ ಹಾಗೂ ಗೌರವಗಳಿವೆ. ಇದೇ ಕಾರಣಕ್ಕೆ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದ ಪಾತ್ರವೊಂದಕ್ಕೆ ಅಚಾರ ಕರ್ಕ್ ಅನ್ನು ಪರಮವಃ ಆಯ್ಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 pm, Wed, 17 January 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ