AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ
ದೇವರಾಜ್​-ಕೋಟಿ ರಾಮು
ರಾಜೇಶ್ ದುಗ್ಗುಮನೆ
|

Updated on: Apr 26, 2021 | 9:58 PM

Share

ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ. ಅಷ್ಟೇ ಅಲ್ಲ, ಸಾವಿನ ಬಗ್ಗೆ ಹಿರಿಯ ನಟ ದೇವರಾಜ್​ ಭಾವುಕರಾಗಿ ಮಾತನಾಡಿದ್ದಾರೆ.

ರಾಮು ಸಾವಿನ ಬಗ್ಗೆ ಟಿವಿ9 ಜತೆಗೆ ಮಾತಾಡಿರುವ ದೇವರಾಜ್​, ರಾಮು ಅವರು ಆಸ್ಪತ್ರೆ ಸೇರಿದ್ದೂ ಗೊತ್ತಿರಲಿಲ್ಲ. ನನಗೂ ಅವರಿಗೂ 30 ವರ್ಷಗಳ ಗೆಳೆತನ. ರಾಮು ಒಳ್ಳೆಯ ವ್ಯಕ್ತಿ, ನಿರ್ಮಾಪಕ. ಮಾಲಾಶ್ರೀಯೂ ನನಗೆ ಉತ್ತಮ ಗೆಳತಿ. ರಾಮು ನಿಧನ ಕನ್ನಡ ಸಿನಿಮಾ ಉದ್ಯಮಕ್ಕೆ ಇದು ದೊಡ್ಡ ನಷ್ಟ. 2 ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅದೇ ನನ್ನ ಕೊನೆಯ ಭೇಟಿ ಎಂದು ದೇವರಾಜ್​ ಹೇಳಿದ್ದಾರೆ.

ರಾಮು-ಮಾಲಾಶ್ರೀ ದಂಪತಿಗಳು ಚಿತ್ರರಂಗದಲ್ಲಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅವರು ಅದ್ದೂರಿ ನಿರ್ಮಾಪಕ ಎಂದು ಹೆಸರುವಾಸಿಯಾಗಿದ್ದರು. ರಾಮು ಎಂದಿಗೂ ಕೇರ್​ಲೆಸ್ ಆಗಿ ಇರುತ್ತಾ ಇರಲಿಲ್ಲ. ಬೇರೆ ಭಾಷೆಗಳಿಗಿಂತಲೂ ಕನ್ನಡದ ಸಿನಿಮಾಗಳು ಕಡಿಮೆ ಆಗಬಾರದು ಎಂಬ ತುಡಿತ ಅವರದ್ದಾಗಿತ್ತು. ಅವರ ಗೆಳೆಯರಿಗೆ ಭರಿಸಲಾಗದ ನಷ್ಟವಿದು. ನಾವೆಲ್ಲರೂ ಮಾಲಾಶ್ರೀ ಜೊತೆಗೆ ಬೆಂಬಲವಾಗಿ ನಿಂತುಕೊಳ್ತೀವಿ ಎಂದು ದೇವರಾಜ್​ ಭರವಸೆ ನೀಡಿದರು.

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ಇದನ್ನೂ ಓದಿ:  Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ