AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ
ದೇವರಾಜ್​-ಕೋಟಿ ರಾಮು
ರಾಜೇಶ್ ದುಗ್ಗುಮನೆ
|

Updated on: Apr 26, 2021 | 9:58 PM

Share

ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ. ಅಷ್ಟೇ ಅಲ್ಲ, ಸಾವಿನ ಬಗ್ಗೆ ಹಿರಿಯ ನಟ ದೇವರಾಜ್​ ಭಾವುಕರಾಗಿ ಮಾತನಾಡಿದ್ದಾರೆ.

ರಾಮು ಸಾವಿನ ಬಗ್ಗೆ ಟಿವಿ9 ಜತೆಗೆ ಮಾತಾಡಿರುವ ದೇವರಾಜ್​, ರಾಮು ಅವರು ಆಸ್ಪತ್ರೆ ಸೇರಿದ್ದೂ ಗೊತ್ತಿರಲಿಲ್ಲ. ನನಗೂ ಅವರಿಗೂ 30 ವರ್ಷಗಳ ಗೆಳೆತನ. ರಾಮು ಒಳ್ಳೆಯ ವ್ಯಕ್ತಿ, ನಿರ್ಮಾಪಕ. ಮಾಲಾಶ್ರೀಯೂ ನನಗೆ ಉತ್ತಮ ಗೆಳತಿ. ರಾಮು ನಿಧನ ಕನ್ನಡ ಸಿನಿಮಾ ಉದ್ಯಮಕ್ಕೆ ಇದು ದೊಡ್ಡ ನಷ್ಟ. 2 ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅದೇ ನನ್ನ ಕೊನೆಯ ಭೇಟಿ ಎಂದು ದೇವರಾಜ್​ ಹೇಳಿದ್ದಾರೆ.

ರಾಮು-ಮಾಲಾಶ್ರೀ ದಂಪತಿಗಳು ಚಿತ್ರರಂಗದಲ್ಲಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅವರು ಅದ್ದೂರಿ ನಿರ್ಮಾಪಕ ಎಂದು ಹೆಸರುವಾಸಿಯಾಗಿದ್ದರು. ರಾಮು ಎಂದಿಗೂ ಕೇರ್​ಲೆಸ್ ಆಗಿ ಇರುತ್ತಾ ಇರಲಿಲ್ಲ. ಬೇರೆ ಭಾಷೆಗಳಿಗಿಂತಲೂ ಕನ್ನಡದ ಸಿನಿಮಾಗಳು ಕಡಿಮೆ ಆಗಬಾರದು ಎಂಬ ತುಡಿತ ಅವರದ್ದಾಗಿತ್ತು. ಅವರ ಗೆಳೆಯರಿಗೆ ಭರಿಸಲಾಗದ ನಷ್ಟವಿದು. ನಾವೆಲ್ಲರೂ ಮಾಲಾಶ್ರೀ ಜೊತೆಗೆ ಬೆಂಬಲವಾಗಿ ನಿಂತುಕೊಳ್ತೀವಿ ಎಂದು ದೇವರಾಜ್​ ಭರವಸೆ ನೀಡಿದರು.

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ಇದನ್ನೂ ಓದಿ:  Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು