AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ
ದೇವರಾಜ್​-ಕೋಟಿ ರಾಮು
ರಾಜೇಶ್ ದುಗ್ಗುಮನೆ
|

Updated on: Apr 26, 2021 | 9:58 PM

Share

ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ. ಅಷ್ಟೇ ಅಲ್ಲ, ಸಾವಿನ ಬಗ್ಗೆ ಹಿರಿಯ ನಟ ದೇವರಾಜ್​ ಭಾವುಕರಾಗಿ ಮಾತನಾಡಿದ್ದಾರೆ.

ರಾಮು ಸಾವಿನ ಬಗ್ಗೆ ಟಿವಿ9 ಜತೆಗೆ ಮಾತಾಡಿರುವ ದೇವರಾಜ್​, ರಾಮು ಅವರು ಆಸ್ಪತ್ರೆ ಸೇರಿದ್ದೂ ಗೊತ್ತಿರಲಿಲ್ಲ. ನನಗೂ ಅವರಿಗೂ 30 ವರ್ಷಗಳ ಗೆಳೆತನ. ರಾಮು ಒಳ್ಳೆಯ ವ್ಯಕ್ತಿ, ನಿರ್ಮಾಪಕ. ಮಾಲಾಶ್ರೀಯೂ ನನಗೆ ಉತ್ತಮ ಗೆಳತಿ. ರಾಮು ನಿಧನ ಕನ್ನಡ ಸಿನಿಮಾ ಉದ್ಯಮಕ್ಕೆ ಇದು ದೊಡ್ಡ ನಷ್ಟ. 2 ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅದೇ ನನ್ನ ಕೊನೆಯ ಭೇಟಿ ಎಂದು ದೇವರಾಜ್​ ಹೇಳಿದ್ದಾರೆ.

ರಾಮು-ಮಾಲಾಶ್ರೀ ದಂಪತಿಗಳು ಚಿತ್ರರಂಗದಲ್ಲಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅವರು ಅದ್ದೂರಿ ನಿರ್ಮಾಪಕ ಎಂದು ಹೆಸರುವಾಸಿಯಾಗಿದ್ದರು. ರಾಮು ಎಂದಿಗೂ ಕೇರ್​ಲೆಸ್ ಆಗಿ ಇರುತ್ತಾ ಇರಲಿಲ್ಲ. ಬೇರೆ ಭಾಷೆಗಳಿಗಿಂತಲೂ ಕನ್ನಡದ ಸಿನಿಮಾಗಳು ಕಡಿಮೆ ಆಗಬಾರದು ಎಂಬ ತುಡಿತ ಅವರದ್ದಾಗಿತ್ತು. ಅವರ ಗೆಳೆಯರಿಗೆ ಭರಿಸಲಾಗದ ನಷ್ಟವಿದು. ನಾವೆಲ್ಲರೂ ಮಾಲಾಶ್ರೀ ಜೊತೆಗೆ ಬೆಂಬಲವಾಗಿ ನಿಂತುಕೊಳ್ತೀವಿ ಎಂದು ದೇವರಾಜ್​ ಭರವಸೆ ನೀಡಿದರು.

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ಇದನ್ನೂ ಓದಿ:  Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?