AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ನಾವೆಲ್ಲರೂ ಮಾಲಾಶ್ರೀಗೆ ಬೆಂಬಲವಾಗಿ ನಿಂತುಕೊಳ್ತೀವಿ; ದೇವರಾಜ್​ ಭಾವುಕ ನುಡಿ
ದೇವರಾಜ್​-ಕೋಟಿ ರಾಮು
ರಾಜೇಶ್ ದುಗ್ಗುಮನೆ
|

Updated on: Apr 26, 2021 | 9:58 PM

Share

ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ. ಅಷ್ಟೇ ಅಲ್ಲ, ಸಾವಿನ ಬಗ್ಗೆ ಹಿರಿಯ ನಟ ದೇವರಾಜ್​ ಭಾವುಕರಾಗಿ ಮಾತನಾಡಿದ್ದಾರೆ.

ರಾಮು ಸಾವಿನ ಬಗ್ಗೆ ಟಿವಿ9 ಜತೆಗೆ ಮಾತಾಡಿರುವ ದೇವರಾಜ್​, ರಾಮು ಅವರು ಆಸ್ಪತ್ರೆ ಸೇರಿದ್ದೂ ಗೊತ್ತಿರಲಿಲ್ಲ. ನನಗೂ ಅವರಿಗೂ 30 ವರ್ಷಗಳ ಗೆಳೆತನ. ರಾಮು ಒಳ್ಳೆಯ ವ್ಯಕ್ತಿ, ನಿರ್ಮಾಪಕ. ಮಾಲಾಶ್ರೀಯೂ ನನಗೆ ಉತ್ತಮ ಗೆಳತಿ. ರಾಮು ನಿಧನ ಕನ್ನಡ ಸಿನಿಮಾ ಉದ್ಯಮಕ್ಕೆ ಇದು ದೊಡ್ಡ ನಷ್ಟ. 2 ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅದೇ ನನ್ನ ಕೊನೆಯ ಭೇಟಿ ಎಂದು ದೇವರಾಜ್​ ಹೇಳಿದ್ದಾರೆ.

ರಾಮು-ಮಾಲಾಶ್ರೀ ದಂಪತಿಗಳು ಚಿತ್ರರಂಗದಲ್ಲಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಅವರು ಅದ್ದೂರಿ ನಿರ್ಮಾಪಕ ಎಂದು ಹೆಸರುವಾಸಿಯಾಗಿದ್ದರು. ರಾಮು ಎಂದಿಗೂ ಕೇರ್​ಲೆಸ್ ಆಗಿ ಇರುತ್ತಾ ಇರಲಿಲ್ಲ. ಬೇರೆ ಭಾಷೆಗಳಿಗಿಂತಲೂ ಕನ್ನಡದ ಸಿನಿಮಾಗಳು ಕಡಿಮೆ ಆಗಬಾರದು ಎಂಬ ತುಡಿತ ಅವರದ್ದಾಗಿತ್ತು. ಅವರ ಗೆಳೆಯರಿಗೆ ಭರಿಸಲಾಗದ ನಷ್ಟವಿದು. ನಾವೆಲ್ಲರೂ ಮಾಲಾಶ್ರೀ ಜೊತೆಗೆ ಬೆಂಬಲವಾಗಿ ನಿಂತುಕೊಳ್ತೀವಿ ಎಂದು ದೇವರಾಜ್​ ಭರವಸೆ ನೀಡಿದರು.

ರಾಜ್ಯದ ಎಲ್ಲಾ ಜನರನ್ನೂ, ಚಿತ್ರಪ್ರೇಮಿಗಳನ್ನೂ ಕೈಮುಗಿದು ಕೇಳಿಕೊಳ್ತೀನಿ. ದಯವಿಟ್ಟು ಕೊರೊನಾ ಸೋಂಕಿನ ವಿಚಾರ ನಿರ್ಲಕ್ಷಿಸಬೇಡಿ. ಮಾಸ್ಕ್ ಹಾಕಿಕೊಳ್ಳಿ, ಲಸಿಕೆ ಹಾಕಿಸಿಕೊಳ್ಳಿ ಎಂದು ದೇವರಾಜ್​ ಮನವಿ ಮಾಡಿದರು.

ಇದನ್ನೂ ಓದಿ:  Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್