AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮದಿನದಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತ್​ ನಾಗ್​

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ಮಾಡಿ ಕೃಷ್ಣ ದೇವರ ದರ್ಶನ‌ ಕೈಗೊಂಡಿದ್ದಾರೆ ಅನಂತನಾಗ್.  ಅವರ ಪತ್ನಿ ಗಾಯತ್ರಿ ಕೂಡ ಇದ್ದರು. ಅವರನ್ನು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ವಿಶೇಷವಾಗಿ ಗೌರವಿಸಿದ್ದಾರೆ.

ಜನ್ಮದಿನದಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತ್​ ನಾಗ್​
ಜನ್ಮದಿನದಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತ್​ ನಾಗ್​
TV9 Web
| Edited By: |

Updated on: Sep 04, 2021 | 4:32 PM

Share

ಕನ್ನಡದ ಹಿರಿಯ ನಟ ಅನಂತನಾಗ್ ಅವರಿಗೆ ಇಂದು (ಸೆಪ್ಟೆಂಬರ್ 4) ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.  74ನೇ ವಸಂತಕ್ಕೆ ಕಾಲಿಟ್ಟರೂ ಅವರು ಆ್ಯಕ್ಟೀವ್​ ಆಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹುಟ್ಟುಹಬ್ಬದ ದಿನ ಅನಂತ್​ ನಾಗ್​ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.  

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ಮಾಡಿ ಕೃಷ್ಣ ದೇವರ ದರ್ಶನ‌ ಕೈಗೊಂಡಿದ್ದಾರೆ ಅನಂತನಾಗ್.  ಅವರ ಪತ್ನಿ ಗಾಯತ್ರಿ ಕೂಡ ಇದ್ದರು. ಅವರನ್ನು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ವಿಶೇಷವಾಗಿ ಗೌರವಿಸಿದ್ದಾರೆ. ಚಿತ್ರವೊಂದರ ಶೂಟಿಂಗ್​​ಗೆ ಅನಂತ್​ ನಾಗ್​ ಉಡುಪಿಗೆ ಬಂದಿದ್ದರು.

ವಿಜಯ್​ ಸಂಕೇಶ್ವರ್​ ಬಯೋಪಿಕ್​ನಲ್ಲಿ ಅನಂತ್​ ನಾಗ್​

ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್​ಲುಕ್​ ಪೋಸ್ಟ್​ ರಿಲೀಸ್​ ಮಾಡಲಾಗಿದೆ.

ಸಾರಿಗೆ ಉದ್ಯಮದಲ್ಲಿ ವಿಜಯ ಸಂಕೇಶ್ವರ ಅವರ ಸಾಧನೆ ಅಪಾರ. ಅವರ ಪಾತ್ರದಲ್ಲಿ ನಿಹಾಲ್​ ನಟಿಸುತ್ತಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅನಂತ್​ ನಾಗ್​ಗೆ ಯಾವ ಪಾತ್ರ? ಅದಕ್ಕೂ ಉತ್ತರವಿದೆ. ವಿಜಯ ಸಂಕೇಶ್ವರ ಅವರ ತಂದೆ ಬಿ.ಜಿ. ಸಂಕೇಶ್ವರ್​ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಳ್ಳಲಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ‘ವಿಜಯಾನಂದ’ ಸಿನಿಮಾ ತಂಡ ಬರ್ತ್​ಡೇ ವಿಶ್​ ಮಾಡಿದೆ.

ಈ ಚಿತ್ರಕ್ಕೆ ನಿರ್ದೇಶಕಿ ರಿಷಿಕಾ ಶರ್ಮಾ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗೋಪಿ ಸುಂದರ್​ ಸಂಗೀತ ನಿರ್ದೇಶನ, ಕೀರ್ತನ್​ ಪೂಜಾರಿ ಛಾಯಾಗ್ರಹಣ, ಹೇಮಂತ್​ ಕುಮಾರ್​ ಡಿ. ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡಕ್ಕೆ ಅನಂತ್​ ನಾಗ್​ ಸೇರ್ಪಡೆ ಆಗಿರುವುದರಿಂದ ‘ವಿಜಯಾನಂದ’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ