AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ನಿಖಿಲ್ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ.

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ
ನಿಖಿಲ್​ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 26, 2021 | 5:10 PM

Share

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ. ಹೀಗಾಗಿ, ಈ ಸುದ್ದಿ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಸ್ಪಷ್ಟತೆ ಇರಲಿಲ್ಲ. ಈಗ ನಿಖಿಲ್ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದು, ತಾವು ತಂದೆ ಆಗುತ್ತಿರುವುದು ಹೌದು ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯೊಂದರಲ್ಲಿ ಈ ಬಗ್ಗೆ ನಿಖಿಲ್​ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಇದು ವೈಯಕ್ತಿಕ ವಿಚಾರ. ಕೆಲವೊಂದು ವೈಯಕ್ತಿಕ ವಿಚಾರವನ್ನು ನಾನು ಹೊರಗೆ ಹೇಳೋಕೆ ಇಷ್ಟ ಪಡುವುದಿಲ್ಲ. ಆದರೆ, ನಾವು ಸಾರ್ವಜನಿಕ ಬದುಕಲ್ಲಿ ಇದ್ದಮೇಲೆ ಕೆಲವೊಂದಷ್ಟು ವಿಚಾರಗಳು ಹರಿದು ಬರುತ್ತವೆ. ನೀವು ಕೇಳಿರುವ ವಿಚಾರ ನಿಜ. ಅತಿ ಶೀಘ್ರದಲ್ಲಿ ನಾನು ತಂದೆ ಆಗುತ್ತಿದ್ದೇನೆ’ ಎಂದು ಸಂತಸ ಹೊರ ಹಾಕಿದರು.

ನಿಖಿಲ್ ಹಾಗೂ ರೇವತಿ ಕಳೆದ ವರ್ಷ ಅದ್ದೂರಿಯಾಗಿ ಮದುವೆ ಆಗಲು ನಿರ್ಧರಿಸಿದ್ದರು. ಮಂಡ್ಯದಲ್ಲಿ ಸಾವಿರಾರು ಜನರಿಗೆ ಊಟ ಹಾಕೋಕೆ ಸಿದ್ಧತೆ ನಡೆದಿತ್ತು. ಆದರೆ, ಆಗ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಹೀಗಾಗಿ, ಮದುವೆ ಸಮಾರಂಭ ಸಿಂಪಲ್ ಆಗಿ ನಡೆದಿತ್ತು. ಕುಟುಂಬದವರ ಸಮ್ಮುಖದಲ್ಲಿ ನಿಖಿಲ್ ಹಾಗೂ ರೇವತಿ ಮದುವೆ ಆದರು. ಈಗ ನಿಖಿಲ್ ತಂದೆ ಆಗುತ್ತಿರುವ ವಿಚಾರ ಅವರ ಅಭಿಮಾನಿ ಬಳಗಕ್ಕೆ ಖುಷಿ ನೀಡಿದೆ.

ನಿಖಿಲ್ ‘ರೈಡರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಸೀತಾರಾಮ ಕಲ್ಯಾಣ’ ಚಿತ್ರದ ನಂತರ ಅವರ ನಟನೆಯ ಬೇರೆ ಯಾವುದೇ ಸಿನಿಮಾಗಳು ತೆರೆಕಂಡಿಲ್ಲ. ರೈಡರ್ ಸಿನಿಮಾದ ಶೂಟಿಂಗ್​ಗಾಗಿ ಕೆಲ ತಿಂಗಳ ಹಿಂದೆ ಲೇಹ್-ಲಡಾಕ್​ಗೆ ತೆರಳಿದ್ದರು. ಆಗ ಅವರು ಕೊವಿಡ್​ ಪರೀಕ್ಷೆಗೆ ಒಳಗಾಗಿದ್ದು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅವರು ಚೇತರಿಕೆ ಕಂಡಿದ್ದರು.

ಇದನ್ನೂ ಓದಿ:

Nikhil Kumarswamy: ಕುಮಾರಸ್ವಾಮಿ ಕುಟುಂಬದಿಂದ ಸಿಹಿ ಸುದ್ದಿ; ಶೀಘ್ರವೇ ತಂದೆ ಆಗಲಿದ್ದಾರೆ ನಿಖಿಲ್​ ​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ