AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ
ಅರ್ಜುನ್ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: May 15, 2021 | 7:24 AM

Share

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವಾಗಲೇ ಮೂರನೇ ಅಲೆಯ ಭಯ ಜನರನ್ನು ಕಾಡುತ್ತಿದೆ. ಕೊರೊನಾ ಮುಂದಿನ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎನ್ನುವ ಸುದ್ದಿ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಹೀಗಿರುವಾಗಲೇ ಆಂಬುಲೆನ್ಸ್​ ಚಾಲಕನಾಗಿರುವ ಸ್ಯಾಂಡಲ್​ವುಡ್​ ಹೀರೋ ಅರ್ಜುನ್​ ಗೌಡ ಎಚ್ಚರಿಕೆ ಒಂದನ್ನು ನೀಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

‘ಎಲ್ಲಿಗೂ ನಮಸ್ಕಾರ. ಕೊರೊನಾ ಮೂರನೇ ಅಲೆ​ ಬರಲಿದೆ. ಅದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮೂರನೇ ಅಲೆ ಬರತ್ತೆ ಎಂದು ಎಲ್ಲರೂ ಕಾಯುತ್ತಾ ಕೂತಿದೀರಾ ಅನಿಸುತ್ತೆ. ಆದರೆ, ಅದು ಈಗಲೇ ಬಂದಿದೆ. ಅಪ್ಪ-ಅಮ್ಮನಿಗೆ ಕೊರೊನಾ ಬರುತ್ತದೆ. ಈ ವೇಳೆ ಮಕ್ಕಳು ಐಸೋಲೇಟ್​ ಆಗ್ತಿದಾರೆ. ಅದೇ ರೀತಿ ಅಪ್ಪ-ಅಮ್ಮ ನಿಧನ​ ಆಗ್ತಿದಾರೆ. ಅಂಥವರ ಮಕ್ಕಳು ಏನು ಮಾಡ್ತಾರೆ’ ಎಂದು ಅರ್ಜುನ್​ ಮಾತು ಆರಂಭಿಸಿದಾರೆ.

‘ನನಗೆ ನಿತ್ಯ 25 ಫೋನ್​ಗಳು ಬರುತ್ತಿವೆ. ನಮಗೆ ಕೊರೊನಾ ಬಂದಿದೆ. ನಮ್ಮ ಮಕ್ಕಳನ್ನು ಎಲ್ಲಾದರೂ  ಐಸೋಲೇಷನ್​ ಮಾಡಬೇಕು. ಆ ಬಗ್ಗೆ ಗೊತ್ತಾ ಎಂದು ಕೇಳುತ್ತಾರೆ. ಇನ್ನೂ ಕೆಲವರು, ನಮ್ಮ ಸಂಬಂಧಿಕರಲ್ಲಿ ಅಪ್ಪ-ಅಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಅವರ ಮಕ್ಕಳನ್ನು ಅಡಾಪ್ಟ್​ ಮಾಡಿಕೊಳ್ಳುವವರು ಯಾರಾದಾರೂ ಸಿಕ್ತಾರ ಎಂದು ಕೇಳುತ್ತಾ ಇದಾರೆ. ಇದಕ್ಕೆಲ್ಲಾ ಹೊಣೆ ಯಾರು?’ ಎಂದು ಅರ್ಜುನ್​ ಮರುಗಿದ್ದಾರೆ.

‘ಇದಕ್ಕೆ ಸಂಬಂಧಕ್ಕೆ ಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಒಂದೊಳ್ಳೆಯ ಔಟ್​ಕಮ್​ ಜತೆ ಬರುತ್ತೇನೆ. ಕೊರೊನಾ ಬರೋದಕ್ಕೂ ಮೊದಲೇ ಪ್ರಿಪೇರ್​ ಆಗಿದ್ರೆ ಒಳ್ಳೆಯದು. ಇದೇ ಗಾಡಿಲೀ ತುಂಬಾ ಹೆಣಗಳನ್ನು ಸಾಗಿಸಿದೀನಿ. ಈಗ ಮಕ್ಕಳ ಹೆಣವನ್ನೂ ತೆಗೆದುಕೊಂಡು ಹೋಗಬೇಕು ಎಂದರೆ ಅದೇಕೋ ಅಷ್ಟು ಸರಿಯಾಗಿ ಕಾಣಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು