AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ
ಅರ್ಜುನ್ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: May 15, 2021 | 7:24 AM

Share

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವಾಗಲೇ ಮೂರನೇ ಅಲೆಯ ಭಯ ಜನರನ್ನು ಕಾಡುತ್ತಿದೆ. ಕೊರೊನಾ ಮುಂದಿನ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎನ್ನುವ ಸುದ್ದಿ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಹೀಗಿರುವಾಗಲೇ ಆಂಬುಲೆನ್ಸ್​ ಚಾಲಕನಾಗಿರುವ ಸ್ಯಾಂಡಲ್​ವುಡ್​ ಹೀರೋ ಅರ್ಜುನ್​ ಗೌಡ ಎಚ್ಚರಿಕೆ ಒಂದನ್ನು ನೀಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

‘ಎಲ್ಲಿಗೂ ನಮಸ್ಕಾರ. ಕೊರೊನಾ ಮೂರನೇ ಅಲೆ​ ಬರಲಿದೆ. ಅದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮೂರನೇ ಅಲೆ ಬರತ್ತೆ ಎಂದು ಎಲ್ಲರೂ ಕಾಯುತ್ತಾ ಕೂತಿದೀರಾ ಅನಿಸುತ್ತೆ. ಆದರೆ, ಅದು ಈಗಲೇ ಬಂದಿದೆ. ಅಪ್ಪ-ಅಮ್ಮನಿಗೆ ಕೊರೊನಾ ಬರುತ್ತದೆ. ಈ ವೇಳೆ ಮಕ್ಕಳು ಐಸೋಲೇಟ್​ ಆಗ್ತಿದಾರೆ. ಅದೇ ರೀತಿ ಅಪ್ಪ-ಅಮ್ಮ ನಿಧನ​ ಆಗ್ತಿದಾರೆ. ಅಂಥವರ ಮಕ್ಕಳು ಏನು ಮಾಡ್ತಾರೆ’ ಎಂದು ಅರ್ಜುನ್​ ಮಾತು ಆರಂಭಿಸಿದಾರೆ.

‘ನನಗೆ ನಿತ್ಯ 25 ಫೋನ್​ಗಳು ಬರುತ್ತಿವೆ. ನಮಗೆ ಕೊರೊನಾ ಬಂದಿದೆ. ನಮ್ಮ ಮಕ್ಕಳನ್ನು ಎಲ್ಲಾದರೂ  ಐಸೋಲೇಷನ್​ ಮಾಡಬೇಕು. ಆ ಬಗ್ಗೆ ಗೊತ್ತಾ ಎಂದು ಕೇಳುತ್ತಾರೆ. ಇನ್ನೂ ಕೆಲವರು, ನಮ್ಮ ಸಂಬಂಧಿಕರಲ್ಲಿ ಅಪ್ಪ-ಅಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಅವರ ಮಕ್ಕಳನ್ನು ಅಡಾಪ್ಟ್​ ಮಾಡಿಕೊಳ್ಳುವವರು ಯಾರಾದಾರೂ ಸಿಕ್ತಾರ ಎಂದು ಕೇಳುತ್ತಾ ಇದಾರೆ. ಇದಕ್ಕೆಲ್ಲಾ ಹೊಣೆ ಯಾರು?’ ಎಂದು ಅರ್ಜುನ್​ ಮರುಗಿದ್ದಾರೆ.

‘ಇದಕ್ಕೆ ಸಂಬಂಧಕ್ಕೆ ಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಒಂದೊಳ್ಳೆಯ ಔಟ್​ಕಮ್​ ಜತೆ ಬರುತ್ತೇನೆ. ಕೊರೊನಾ ಬರೋದಕ್ಕೂ ಮೊದಲೇ ಪ್ರಿಪೇರ್​ ಆಗಿದ್ರೆ ಒಳ್ಳೆಯದು. ಇದೇ ಗಾಡಿಲೀ ತುಂಬಾ ಹೆಣಗಳನ್ನು ಸಾಗಿಸಿದೀನಿ. ಈಗ ಮಕ್ಕಳ ಹೆಣವನ್ನೂ ತೆಗೆದುಕೊಂಡು ಹೋಗಬೇಕು ಎಂದರೆ ಅದೇಕೋ ಅಷ್ಟು ಸರಿಯಾಗಿ ಕಾಣಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ