AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ
ಅರ್ಜುನ್ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: May 15, 2021 | 7:24 AM

Share

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವಾಗಲೇ ಮೂರನೇ ಅಲೆಯ ಭಯ ಜನರನ್ನು ಕಾಡುತ್ತಿದೆ. ಕೊರೊನಾ ಮುಂದಿನ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎನ್ನುವ ಸುದ್ದಿ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಹೀಗಿರುವಾಗಲೇ ಆಂಬುಲೆನ್ಸ್​ ಚಾಲಕನಾಗಿರುವ ಸ್ಯಾಂಡಲ್​ವುಡ್​ ಹೀರೋ ಅರ್ಜುನ್​ ಗೌಡ ಎಚ್ಚರಿಕೆ ಒಂದನ್ನು ನೀಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

‘ಎಲ್ಲಿಗೂ ನಮಸ್ಕಾರ. ಕೊರೊನಾ ಮೂರನೇ ಅಲೆ​ ಬರಲಿದೆ. ಅದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮೂರನೇ ಅಲೆ ಬರತ್ತೆ ಎಂದು ಎಲ್ಲರೂ ಕಾಯುತ್ತಾ ಕೂತಿದೀರಾ ಅನಿಸುತ್ತೆ. ಆದರೆ, ಅದು ಈಗಲೇ ಬಂದಿದೆ. ಅಪ್ಪ-ಅಮ್ಮನಿಗೆ ಕೊರೊನಾ ಬರುತ್ತದೆ. ಈ ವೇಳೆ ಮಕ್ಕಳು ಐಸೋಲೇಟ್​ ಆಗ್ತಿದಾರೆ. ಅದೇ ರೀತಿ ಅಪ್ಪ-ಅಮ್ಮ ನಿಧನ​ ಆಗ್ತಿದಾರೆ. ಅಂಥವರ ಮಕ್ಕಳು ಏನು ಮಾಡ್ತಾರೆ’ ಎಂದು ಅರ್ಜುನ್​ ಮಾತು ಆರಂಭಿಸಿದಾರೆ.

‘ನನಗೆ ನಿತ್ಯ 25 ಫೋನ್​ಗಳು ಬರುತ್ತಿವೆ. ನಮಗೆ ಕೊರೊನಾ ಬಂದಿದೆ. ನಮ್ಮ ಮಕ್ಕಳನ್ನು ಎಲ್ಲಾದರೂ  ಐಸೋಲೇಷನ್​ ಮಾಡಬೇಕು. ಆ ಬಗ್ಗೆ ಗೊತ್ತಾ ಎಂದು ಕೇಳುತ್ತಾರೆ. ಇನ್ನೂ ಕೆಲವರು, ನಮ್ಮ ಸಂಬಂಧಿಕರಲ್ಲಿ ಅಪ್ಪ-ಅಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಅವರ ಮಕ್ಕಳನ್ನು ಅಡಾಪ್ಟ್​ ಮಾಡಿಕೊಳ್ಳುವವರು ಯಾರಾದಾರೂ ಸಿಕ್ತಾರ ಎಂದು ಕೇಳುತ್ತಾ ಇದಾರೆ. ಇದಕ್ಕೆಲ್ಲಾ ಹೊಣೆ ಯಾರು?’ ಎಂದು ಅರ್ಜುನ್​ ಮರುಗಿದ್ದಾರೆ.

‘ಇದಕ್ಕೆ ಸಂಬಂಧಕ್ಕೆ ಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಒಂದೊಳ್ಳೆಯ ಔಟ್​ಕಮ್​ ಜತೆ ಬರುತ್ತೇನೆ. ಕೊರೊನಾ ಬರೋದಕ್ಕೂ ಮೊದಲೇ ಪ್ರಿಪೇರ್​ ಆಗಿದ್ರೆ ಒಳ್ಳೆಯದು. ಇದೇ ಗಾಡಿಲೀ ತುಂಬಾ ಹೆಣಗಳನ್ನು ಸಾಗಿಸಿದೀನಿ. ಈಗ ಮಕ್ಕಳ ಹೆಣವನ್ನೂ ತೆಗೆದುಕೊಂಡು ಹೋಗಬೇಕು ಎಂದರೆ ಅದೇಕೋ ಅಷ್ಟು ಸರಿಯಾಗಿ ಕಾಣಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ