AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ
ಅರ್ಜುನ್ ಗೌಡ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 15, 2021 | 7:24 AM

Share

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವಾಗಲೇ ಮೂರನೇ ಅಲೆಯ ಭಯ ಜನರನ್ನು ಕಾಡುತ್ತಿದೆ. ಕೊರೊನಾ ಮುಂದಿನ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎನ್ನುವ ಸುದ್ದಿ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಹೀಗಿರುವಾಗಲೇ ಆಂಬುಲೆನ್ಸ್​ ಚಾಲಕನಾಗಿರುವ ಸ್ಯಾಂಡಲ್​ವುಡ್​ ಹೀರೋ ಅರ್ಜುನ್​ ಗೌಡ ಎಚ್ಚರಿಕೆ ಒಂದನ್ನು ನೀಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರು ಆಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​​ವುಡ್​ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅರ್ಜುನ್ ಗೌಡ ಹೊಸ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ.

‘ಎಲ್ಲಿಗೂ ನಮಸ್ಕಾರ. ಕೊರೊನಾ ಮೂರನೇ ಅಲೆ​ ಬರಲಿದೆ. ಅದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮೂರನೇ ಅಲೆ ಬರತ್ತೆ ಎಂದು ಎಲ್ಲರೂ ಕಾಯುತ್ತಾ ಕೂತಿದೀರಾ ಅನಿಸುತ್ತೆ. ಆದರೆ, ಅದು ಈಗಲೇ ಬಂದಿದೆ. ಅಪ್ಪ-ಅಮ್ಮನಿಗೆ ಕೊರೊನಾ ಬರುತ್ತದೆ. ಈ ವೇಳೆ ಮಕ್ಕಳು ಐಸೋಲೇಟ್​ ಆಗ್ತಿದಾರೆ. ಅದೇ ರೀತಿ ಅಪ್ಪ-ಅಮ್ಮ ನಿಧನ​ ಆಗ್ತಿದಾರೆ. ಅಂಥವರ ಮಕ್ಕಳು ಏನು ಮಾಡ್ತಾರೆ’ ಎಂದು ಅರ್ಜುನ್​ ಮಾತು ಆರಂಭಿಸಿದಾರೆ.

‘ನನಗೆ ನಿತ್ಯ 25 ಫೋನ್​ಗಳು ಬರುತ್ತಿವೆ. ನಮಗೆ ಕೊರೊನಾ ಬಂದಿದೆ. ನಮ್ಮ ಮಕ್ಕಳನ್ನು ಎಲ್ಲಾದರೂ  ಐಸೋಲೇಷನ್​ ಮಾಡಬೇಕು. ಆ ಬಗ್ಗೆ ಗೊತ್ತಾ ಎಂದು ಕೇಳುತ್ತಾರೆ. ಇನ್ನೂ ಕೆಲವರು, ನಮ್ಮ ಸಂಬಂಧಿಕರಲ್ಲಿ ಅಪ್ಪ-ಅಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಅವರ ಮಕ್ಕಳನ್ನು ಅಡಾಪ್ಟ್​ ಮಾಡಿಕೊಳ್ಳುವವರು ಯಾರಾದಾರೂ ಸಿಕ್ತಾರ ಎಂದು ಕೇಳುತ್ತಾ ಇದಾರೆ. ಇದಕ್ಕೆಲ್ಲಾ ಹೊಣೆ ಯಾರು?’ ಎಂದು ಅರ್ಜುನ್​ ಮರುಗಿದ್ದಾರೆ.

‘ಇದಕ್ಕೆ ಸಂಬಂಧಕ್ಕೆ ಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಒಂದೊಳ್ಳೆಯ ಔಟ್​ಕಮ್​ ಜತೆ ಬರುತ್ತೇನೆ. ಕೊರೊನಾ ಬರೋದಕ್ಕೂ ಮೊದಲೇ ಪ್ರಿಪೇರ್​ ಆಗಿದ್ರೆ ಒಳ್ಳೆಯದು. ಇದೇ ಗಾಡಿಲೀ ತುಂಬಾ ಹೆಣಗಳನ್ನು ಸಾಗಿಸಿದೀನಿ. ಈಗ ಮಕ್ಕಳ ಹೆಣವನ್ನೂ ತೆಗೆದುಕೊಂಡು ಹೋಗಬೇಕು ಎಂದರೆ ಅದೇಕೋ ಅಷ್ಟು ಸರಿಯಾಗಿ ಕಾಣಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ