AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಸರ್ಜಾಗೆ ಕೊರೊನಾ ಪಾಸಿಟಿವ್​; ಅಭಿಮಾನಿಗಳಿಗೆ ಜಾಗೃತಿ ಸಂದೇಶ ನೀಡಿದ ನಟ

Arjun Sarja | Coronavirus Positive: ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಅರ್ಜುನ್​ ಸರ್ಜಾಗೆ ಕೊರೊನಾ ಪಾಸಿಟಿವ್​; ಅಭಿಮಾನಿಗಳಿಗೆ ಜಾಗೃತಿ ಸಂದೇಶ ನೀಡಿದ ನಟ
ಅರ್ಜುನ್ ಸರ್ಜಾ
TV9 Web
| Edited By: |

Updated on: Dec 14, 2021 | 1:53 PM

Share

ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್​ (Coronavirus Positive) ಆಗುತ್ತಿದೆ. ಇತ್ತೀಚೆಗಷ್ಟೇ ನಟಿ ಕರೀನಾ ಕಪೂರ್​ ಅವರಿಗೆ ಕೊವಿಡ್​ ಸೋಂಕು ತಗಲಿರುವ ವಿಷಯ ಬಹಿರಂಗ ಆಗಿತ್ತು. ಈಗ ನಟ ಅರ್ಜುನ್ ಸರ್ಜಾ (Arjun Sarja) ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ವಿಷಯವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ಸದ್ಯ ತಮ್ಮ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ಅಭಿಮಾನಿಗಳಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅರ್ಜುನ್​ ಸರ್ಜಾ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ರಿಯಾಲಿಟಿ ಶೋವೊಂದಕ್ಕೆ ಅರ್ಜುನ್ ಸರ್ಜಾ ನಿರೂಪಕನಾಗಿದ್ದರು. ಅದರ ಫಿನಾಲೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆದಿತ್ತು. ಅದರ ಚಿತ್ರೀಕರಣ ಮುಗಿದ ಬಳಿಕ ಅವರಿಗೆ ಕಡ್ಡಾಯವಾಗಿ ಕೊವಿಡ್​ ಪರೀಕ್ಷೆ ಮಾಡಿಸಲಾಯಿತು. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮ್ಮ ಜತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅರ್ಜುನ್​ ಸರ್ಜಾ ಮಾಹಿತಿ ರವಾನಿಸಿದ್ದಾರೆ.

‘ಎಲ್ಲರಿಗೂ ಹಾಯ್​, ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್​ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್​ ಕಿ ಜೈ’ ಎಂದು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅರ್ಜುನ್​ ಸರ್ಜಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್​ಗೆ ಕೊರೊನಾ ಪಾಸಿಟಿವ್​; ಹೆಚ್ಚಿತು ಆತಂಕ

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ