AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಸರ್ಜಾಗೆ ಕೊರೊನಾ ಪಾಸಿಟಿವ್​; ಅಭಿಮಾನಿಗಳಿಗೆ ಜಾಗೃತಿ ಸಂದೇಶ ನೀಡಿದ ನಟ

Arjun Sarja | Coronavirus Positive: ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಅರ್ಜುನ್​ ಸರ್ಜಾಗೆ ಕೊರೊನಾ ಪಾಸಿಟಿವ್​; ಅಭಿಮಾನಿಗಳಿಗೆ ಜಾಗೃತಿ ಸಂದೇಶ ನೀಡಿದ ನಟ
ಅರ್ಜುನ್ ಸರ್ಜಾ
TV9 Web
| Updated By: ಮದನ್​ ಕುಮಾರ್​|

Updated on: Dec 14, 2021 | 1:53 PM

Share

ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್​ (Coronavirus Positive) ಆಗುತ್ತಿದೆ. ಇತ್ತೀಚೆಗಷ್ಟೇ ನಟಿ ಕರೀನಾ ಕಪೂರ್​ ಅವರಿಗೆ ಕೊವಿಡ್​ ಸೋಂಕು ತಗಲಿರುವ ವಿಷಯ ಬಹಿರಂಗ ಆಗಿತ್ತು. ಈಗ ನಟ ಅರ್ಜುನ್ ಸರ್ಜಾ (Arjun Sarja) ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ವಿಷಯವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ಸದ್ಯ ತಮ್ಮ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ಅಭಿಮಾನಿಗಳಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅರ್ಜುನ್​ ಸರ್ಜಾ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ರಿಯಾಲಿಟಿ ಶೋವೊಂದಕ್ಕೆ ಅರ್ಜುನ್ ಸರ್ಜಾ ನಿರೂಪಕನಾಗಿದ್ದರು. ಅದರ ಫಿನಾಲೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆದಿತ್ತು. ಅದರ ಚಿತ್ರೀಕರಣ ಮುಗಿದ ಬಳಿಕ ಅವರಿಗೆ ಕಡ್ಡಾಯವಾಗಿ ಕೊವಿಡ್​ ಪರೀಕ್ಷೆ ಮಾಡಿಸಲಾಯಿತು. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮ್ಮ ಜತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅರ್ಜುನ್​ ಸರ್ಜಾ ಮಾಹಿತಿ ರವಾನಿಸಿದ್ದಾರೆ.

‘ಎಲ್ಲರಿಗೂ ಹಾಯ್​, ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್​ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್​ ಕಿ ಜೈ’ ಎಂದು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅರ್ಜುನ್​ ಸರ್ಜಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್​ಗೆ ಕೊರೊನಾ ಪಾಸಿಟಿವ್​; ಹೆಚ್ಚಿತು ಆತಂಕ

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!