AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್​ ಸಾಗರ್​ಗೆ ಬಂಪರ್​ ಆಫರ್​; ರಾಜಮೌಳಿ ಸಿನಿಮಾದಲ್ಲಿ ಕನ್ನಡದ ನಟ

ರಾಜಮೌಳಿಗೂ ಕರ್ನಾಟಕಕ್ಕೂ ಒಳ್ಳೆಯ ನಂಟಿದೆ. ಅವರ ಮೂಲ ರಾಯಚೂರು ಎನ್ನಲಾಗಿದೆ. ಕನ್ನಡದ ಸ್ಟಾರ್​ ನಟ ಕಿಚ್ಚ ಸುದೀಪ್​ ಅವರು ರಾಜಮೌಳಿ ನಿರ್ದೇಶನದ ಸೂಪರ್​ ಹಿಟ್​ ಚಿತ್ರ ‘ಈಗ’ದಲ್ಲಿ ನೆಗೆಟಿವ್​ ರೋಲ್​ ಮಾಡಿದ್ದರು.

ಅರುಣ್​ ಸಾಗರ್​ಗೆ ಬಂಪರ್​ ಆಫರ್​; ರಾಜಮೌಳಿ ಸಿನಿಮಾದಲ್ಲಿ ಕನ್ನಡದ ನಟ
ಅರುಣ್​ ಸಾಗರ್​-ರಾಜಮೌಳಿ
TV9 Web
| Edited By: |

Updated on: Dec 02, 2021 | 2:52 PM

Share

ನಟ ಅರುಣ್​ ಸಾಗರ್​ ಕನ್ನಡದಲ್ಲಿ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರು ಹಲವು ಸ್ಟಾರ್​ ನಟರ ಜತೆ ತೆರೆ ಹಂಚಿಕೊಂಡಿದ್ದಾರೆ. ಈಗ ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಜಮೌಳಿ ಅವರ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಕೆಲಸ ಮಾಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಜನವರಿ 7ರಂದು ತೆರೆಗೆ ಬರುತ್ತಿರುವ ‘ಆರ್​ಆರ್​ಆರ್​’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಅರುಣ್​ ಸಾಗರ್​ ನಟಿಸಿದ್ದಾರೆ. ಈ ವಿಚಾರ ಕೇಳಿ ಕನ್ನಡಿಗರು ಸಖತ್​ ಖುಷಿಯಾಗಿದ್ದಾರೆ.

ರಾಜಮೌಳಿಗೂ ಕರ್ನಾಟಕಕ್ಕೂ ಒಳ್ಳೆಯ ನಂಟಿದೆ. ಅವರ ಮೂಲತಃ ರಾಯಚೂರಿನವರು . ಕನ್ನಡದ ಸ್ಟಾರ್​ ನಟ ಕಿಚ್ಚ ಸುದೀಪ್​ ಅವರು ರಾಜಮೌಳಿ ನಿರ್ದೇಶನದ ಸೂಪರ್​ ಹಿಟ್​ ಚಿತ್ರ ‘ಈಗ’ದಲ್ಲಿ ನೆಗೆಟಿವ್​ ರೋಲ್​ ಮಾಡಿದ್ದರು. ‘ಬಾಹುಬಲಿ’ ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ಮಿಂಚಿದ್ದರು. ಈಗ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಅರುಣ್​ ಸಾಗರ್​ ಅವರಿಗೆ ರಾಜಮೌಳಿ ಅವಕಾಶ ನೀಡಿದ್ದಾರೆ.

ಅರುಣ್‌ ಸಾಗರ್‌ ಅವರು ರಂಗಭೂಮಿ ಪ್ರತಿಭೆ. ಕನ್ನಡ ಚಿತ್ರರಂಗದಲ್ಲಿ ನಟರಾಗಿ ಮತ್ತು ಕಲಾ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಅವರ ನಟನೆಯನ್ನು ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ರಾಜಮೌಳಿ ಅವರು ಅವಕಾಶ ನೀಡಿದ್ದಾರೆ. ಈ ಸಿನಿಮಾದಲ್ಲಿ ಬರುವ ಇಬ್ಬರು ಹೀರೋಗಳಲ್ಲಿ ಒಬ್ಬರಿಗೆ ಹೆಸರಿಡುವ ಪಾತ್ರದಲ್ಲಿ ಅರುಣ್​ ಸಾಗರ್​ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಆರಂಭದಲ್ಲಿಯೇ ಅವರು ತೆರೆಮೇಲೆ ಬರಲಿದ್ದಾರೆ.

ರಾಜಮೌಳಿ ಸಿನಿಮಾ ಬಜೆಟ್​ಗೆ ತಕ್ಕಂತೆ ಅದ್ದೂರಿಯಾಗಿ ಮೂಡಿ ಬರುತ್ತದೆ. ‘ಆರ್​ಆರ್​ಆರ್​’ ಸಿನಿಮಾ ಮೇಕಿಂಗ್​ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಡಿಸೆಂಬರ್​ 3ರಂದು ಟ್ರೇಲರ್​ ರಿಲೀಸ್​ ಆಗಲಿದೆ. ಕರ್ನಾಟಕದಲ್ಲಿ ಗ್ರ್ಯಾಂಡ್​ ಆಗಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ರಾಜಮೌಳಿ ಇತ್ತೀಚೆಗೆ ಮಾಹಿತಿ ನೀಡಿದ್ದರು. ಈ ಕಾರ್ಯ ಯಾವಾಗ ನಡೆಯಲಿದೆ ಎನ್ನುವ ಕುತೂಹಲ ಕನ್ನಡಿಗರಲ್ಲಿ ಮೂಡಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

‘ಆರ್​ಆರ್​ಆರ್​’ ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಹಾಗೂ ರಾಮ್​ ಚರಣ್​ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ‘ಆರ್​ಆರ್​ಆರ್’ ಚಿತ್ರದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್, ಪೋಸ್ಟರ್​ ಮತ್ತು ಹಾಡುಗಳು ಧೂಳೆಬ್ಬಿಸಿವೆ.

ಇದನ್ನೂ ಓದಿ: RRR ಚಿತ್ರತಂಡದಿಂದ ಹೊಸ ಅಪ್​ಡೇಟ್​; ಆ ದಿನ ಕೊನೆಗೂ ಬಂತು

 ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿಗೆ ರಾಜಮೌಳಿ ಸಾಂತ್ವನ; ಆರ್​ಆರ್​ಆರ್​ ನಿರ್ದೇಶಕ ಹೇಳಿದ್ದೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್